Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಕೋವಿಡ್ ಕೇಂದ್ರಗಳಲ್ಲಿ ಎಲ್ಲಾ ಅವರೇ...

'ಕೋವಿಡ್ ಕೇಂದ್ರಗಳಲ್ಲಿ ಎಲ್ಲಾ ಅವರೇ ಸ್ವಾಮಿ, ಏನ್ ಮಾಡೋದು' ಎಂದ ಸಚಿವ ವಿ.ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ14 July 2020 7:56 PM IST
share
ಕೋವಿಡ್ ಕೇಂದ್ರಗಳಲ್ಲಿ ಎಲ್ಲಾ ಅವರೇ ಸ್ವಾಮಿ, ಏನ್ ಮಾಡೋದು ಎಂದ ಸಚಿವ ವಿ.ಸೋಮಣ್ಣ

ತುಮಕೂರು, ಜು.14: ಬೆಂಗಳೂರು ಕೋವಿಡ್ ಕೇಂದ್ರಗಳಲ್ಲಿ ಎಲ್ಲಾ ಅವರೇ ಸ್ವಾಮಿ, ಏನ್ ಮಾಡೋದು, ಎಲ್ಲಿ ನೋಡಿದ್ರೂ ಗಿಜಿಗಿಜಿ ಅಂತಾರೆ ಎಂದು ಕೊರೋನ ರೋಗಿಗಳ ಕುರಿತು ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ. ಅಲ್ಲದೇ, ಮಾಜಿ ಸಚಿವ ಸೊಗಡು ಶಿವಣ್ಣ ‘ಕುರಿಮಂದೆ ಇದ್ದಂಗೆ ಇದಾರೆ ಸ್ವಾಮೀಜಿ, ಎಲ್ಲಿ ನೋಡಿದ್ರೂ ಅವರೆ’ ಎಂದು ಸಚಿವರ ಮಾತಿಗೆ ದನಿಗೂಡಿಸಿದ್ದಾರೆ.

ಇಂದು ಬೆಳಗ್ಗೆ ಸಿದ್ದಗಂಗಾ ಮಠಕ್ಕೆ ಸಚಿವ ವಿ.ಸೋಮಣ್ಣ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸ್ವಾಮೀಜಿಯವರಿಗೆ ಬೆಂಗಳೂರಿನ ಸ್ಥಿತಿಗತಿ ವಿವರಿಸಿದ ಸಚಿವರು, ಬೆಂಗಳೂರಿನ 53 ವಾರ್ಡ್ ‌ಗಳಲ್ಲಿ 26 ಕಡೆ ಕೋವಿಡ್ ಆಸ್ಪತ್ರೆಗಳನ್ನು ತೆರೆದಿದ್ದೇನೆ. 24x7 ಸಹಾಯವಾಣಿ, ಆಂಬುಲೆನ್ಸ್, ಒಂದು ಆಕ್ಸಿಜನ್ ಇದ್ದು ಎಲ್ಲಾ ಸೌಲಭ್ಯ ಒದಗಿಸಲಾಗಿದೆ ಎಂದು ಸೋಮಣ್ಣ ತಿಳಿಸಿದರು. ಈ ವೇಳೆ ಮಾಜಿ ಸಚಿವ ಸೊಗಡು ಶಿವಣ್ಣ ‘ಕುರಿಮಂದೆ ಇದ್ದಂಗೆ ಇದ್ದಾರೆ ಸ್ವಾಮೀಜಿ' ಎಂದಿದ್ದಾರೆ. ಇದಕ್ಕೆ ಸಚಿವ ಸೋಮಣ್ಣ ‘ಎಲ್ಲಾ ಅವರೇ, ಏನ್ ಮಾಡೋದು, ಗಿಜಿಗಿಜಿ ಅಂತಾರೆ ಸ್ವಾಮೀಜಿ’ ಎಂದು ಹೇಳಿದ್ದಾರೆ.

ಆ್ಯಂಬುಲೆನ್ಸ್ ನವರು ಕೋವಿಡ್ ಸೋಂಕಿತರನ್ನು ಕರೆತರಲು 3,000 ರೂಪಾಯಿ ಕೊಟ್ಟರೆ ಹೋಗುತ್ತಾರೆ. ಇಲ್ಲದಿದ್ದರೆ ಹೋಗೋದೇ ಇಲ್ಲ. ಹಾಗಾಗಿ ನಾವು ದೊಡ್ಡ ಆಸ್ಪತ್ರೆಗಳಲ್ಲಿ 4,500 ರೂಪಾಯಿ ಫಿಕ್ಸ್ ಮಾಡಿದ್ದೇವೆ ಎಂದು ಸಚಿವ ಸೋಮಣ್ಣ ಹೇಳಿದರು.

ಪ್ರತಿ ವಾರ್ಡ್‌ ನಲ್ಲಿರುವ ಕೌಂಟರ್‌ ಗೆ ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಿದ್ದೇನೆ. ಅವರು ಆಯಾ ವಾರ್ಡ್ ‌ಮಾತ್ರ ನೋಡಿಕೊಳ್ಳುತ್ತಾರೆ. ಹೀಗಾಗಿ ಸೋಂಕು ಕಂಟ್ರೋಲ್ ಗೆ ಬಂದಿದೆ ಎಂದು ವಿವರಿಸಿದ್ದಾರೆ. ನಿನ್ನೆ ಮಾಜಿ ಸಚಿವ ಜಾರ್ಜ್, ಕಾಂಗ್ರೆಸ್ ಶಾಸಕ ಹಾರೀಸ್, ರಿಝ್ವಾನ್ ಅರ್ಶದ್ ಹಾಗೂ ಅಖಂಡ ಶ್ರೀನಿವಾಸಮೂರ್ತಿ ಅವರ ಜೊತೆ ಮಾತುಕತೆ ನಡೆಸಿದ್ದೇನೆ. ಸೋಂಕು ನಿಯಂತ್ರಣದ ಸಂಬಂಧ ಚರ್ಚೆ ನಡೆಸಿದ್ದೇನೆ ಎಂದು ಸೋಮಣ್ಣ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X