Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಿದೇಶಿ ವಿದ್ಯಾರ್ಥಿಗಳ ನೂತನ ವೀಸಾ ನಿಯಮ...

ವಿದೇಶಿ ವಿದ್ಯಾರ್ಥಿಗಳ ನೂತನ ವೀಸಾ ನಿಯಮ ಪ್ರಶ್ನಿಸುವ ಮೊಕದ್ದಮೆಗೆ ಗೂಗಲ್, ಮೈಕ್ರೋಸಾಫ್ಟ್, ಫೇಸ್ಬುಕ್ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ14 July 2020 8:33 PM IST
share
ವಿದೇಶಿ ವಿದ್ಯಾರ್ಥಿಗಳ ನೂತನ ವೀಸಾ ನಿಯಮ ಪ್ರಶ್ನಿಸುವ ಮೊಕದ್ದಮೆಗೆ ಗೂಗಲ್, ಮೈಕ್ರೋಸಾಫ್ಟ್, ಫೇಸ್ಬುಕ್ ಬೆಂಬಲ

ವಾಶಿಂಗ್ಟನ್, ಜು. 14: ವಿದೇಶಿ ವಿದ್ಯಾರ್ಥಿಗಳು ಕನಿಷ್ಠ ಒಂದಾದರೂ ಕೋರ್ಸ್ ಗೆ ನೋಂದಾಯಿಸಿಕೊಳ್ಳದಿದ್ದರೆ ಅವರಿಗೆ ಅಮೆರಿಕದಲ್ಲಿ ಉಳಿಯಲು ಅವಕಾಶ ನೀಡದಿರುವ ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಇಲಾಖೆಯ ನಿಯಮವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿರುವ ಹಾರ್ವರ್ಡ್ ವಿಶ್ವವಿದ್ಯಾನಿಲಯ ಮತ್ತು ಮ್ಯಾಸಚೂಸಿಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಗೂಗಲ್, ಫೇಸ್ಬುಕ್ ಮತ್ತು ಮೈಕ್ರೋಸಾಫ್ಟ್ ಸೇರಿದಂತೆ ಅಮೆರಿಕದ ಡಝನ್ಗೂ ಅಧಿಕ ತಂತ್ರಜ್ಞಾನ ಕಂಪೆನಿಗಳು ಬೆಂಬಲ ಸೂಚಿಸಿವೆ.

ವಿದೇಶಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ನೂತನ ವೀಸಾ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕು ಎಂಬುದಾಗಿ ಈ ಕಂಪೆನಿಗಳು ಕೋರಿವೆ. ಅಮೆರಿಕ ವಾಣಿಜ್ಯ ಸಂಸ್ಥೆ ಮತ್ತು ಇತರ ಮಾಹಿತಿ ತಂತ್ರಜ್ಞಾನ ಪರವಾಗಿ ವಕಾಲತ್ತು ನಡೆಸುವ ಗುಂಪುಗಳು ಈ ಕಂಪೆನಿಗಳ ಜೊತೆಗೆ ನಿಂತಿವೆ.

ಜುಲೈ 6ರಂದು ಐಸಿಇ ಪ್ರಕಟಿಸಿದ ನಿಯಮವು ತಮ್ಮ ನೇಮಕಾತಿ ಯೋಜನೆಗಳ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತವೆ ಎಂದು ಹೇಳಿರುವ ಈ ತಂತ್ರಜ್ಞಾನ ಕಂಪೆನಿಗಳು, ವಿದೇಶಿ ವಿದ್ಯಾರ್ಥಿಗಳನ್ನು ನೇಮಕ ಮಾಡಿಕೊಳ್ಳಬೇಕೆಂದು ನಿರ್ಧರಿಸಿದ್ದ ಕಂಪೆನಿಗಳಿಗೆ ಇನ್ನು ಅವರನ್ನು ನೇಮಿಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದಿವೆ. ಅದೂ ಅಲ್ಲದೆ, ನೂತನ ನಿಯಮದಿಂದ ನೇಮಕಾತಿ ಪ್ರಕ್ರಿಯೆಯು ವ್ಯತ್ಯಯಗೊಳ್ಳಲಿದೆ ಎಂದಿವೆ. ಈ ಕಂಪೆನಿಗಳು ತಮ್ಮ ಭವಿಷ್ಯದ ಉದ್ಯೋಗಿಗಳನ್ನು ಗುರುತಿಸಲು ಹಾಗೂ ಅವರಿಗೆ ತರಬೇತಿ ನೀಡಲು ಇದೇ ನೇಮಕಾತಿ ಪ್ರಕ್ರಿಯೆಯನ್ನು ಅವಲಂಬಿಸಿವೆ ಎಂದು ದೈತ್ಯ ತಂತ್ರಜ್ಞಾನ ಕಂಪೆನಿಗಳು ಹೇಳಿವೆ.

 ‘ನಮ್ಮ ಪ್ರತಿಸ್ಪರ್ಧಿಗಳ ಬಳಿ ಕೆಲಸ ಮಾಡಲು ಅವರನ್ನು ಕಳುಹಿಸಿಕೊಡುತ್ತಿದ್ದೇವೆ’

ಜುಲೈ 6ರ ನಿಯಮದಿಂದಾಗಿ ಹೆಚ್ಚಿನ ಸಂಖ್ಯೆ ವಿದ್ಯಾರ್ಥಿಗಳಿಗೆ ಸಿಪಿಟಿ ಮತ್ತು ಒಪಿಟಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ‘‘ಅಮೆರಿಕದಲ್ಲಿನ ಅವರ ಶಿಕ್ಷಣದ ಮೇಲಿನ ಹೂಡಿಕೆಯ ಪ್ರಯೋಜನವನ್ನು ಪಡೆಯುವ ಬದಲು, ಅಮೆರಿಕವು ಅವರನ್ನು ವಿವೇಚನಾರಹಿತವಾಗಿ, ನಮ್ಮ ಜಾಗತಿಕ ಪ್ರತಿಸ್ಪರ್ಧಿಗಳ ಬಳಿ ಕೆಲಸ ಮಾಡಲು ಹಾಗೂ ಆ ಮೂಲಕ ನಮ್ಮ ವಿರುದ್ಧ ಸ್ಪರ್ಧಿಸಲು ಕಳುಹಿಸಿಕೊಡುತ್ತಿದೆ’’ ಎಂದು ತಂತ್ರಜ್ಞಾನ ಕಂಪೆನಿಗಳು ಅಭಿಪ್ರಾಯಪಟ್ಟಿವೆ.

ನಿಯಮವನ್ನು ಪ್ರಶ್ನಿಸಿ 17 ರಾಜ್ಯಗಳು ನ್ಯಾಯಾಲಯಕ್ಕೆ

ವಿದೇಶಿ ವಿದ್ಯಾರ್ಥಿಗಳು ಅಮೆರಿಕದಲ್ಲಿ ವಾಸಿಸುವುದನ್ನು ನಿರ್ಬಂಧಿಸುವ ಅಮೆರಿಕದ ನೂತನ ವೀಸಾ ನಿಯಮಗಳನ್ನು ಪ್ರಶ್ನಿಸಿ ದೇಶದ 17 ರಾಜ್ಯಗಳು ಮತ್ತು ಕೊಲಂಬಿಯ ಜಿಲ್ಲೆ ಸೋಮವಾರ ಮ್ಯಾಸಚೂಸಿಟ್ಸ್ ನ ಜಿಲ್ಲಾ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿವೆ.

ಅಮೆರಿಕದ ಆಂತರಿಕ ಭದ್ರತಾ ಇಲಾಖೆ ಮತ್ತು ವಲಸೆ ಮತ್ತು ಕಸ್ಟಮ್ಸ್ ಜಾರಿ (ಐಸಿಇ) ಇಲಾಖೆಯನ್ನು ಅವುಗಳು ಪ್ರತಿವಾದಿಗಳನ್ನಾಗಿಸಿವೆ.

ಕೊರೋನ ವೈರಸ್ ಅಮೆರಿಕದಾದ್ಯಂತ ಸಾವು ಮತ್ತು ನಷ್ಟಗಳ ಸರಮಾಲೆಯನ್ನೇ ಸೃಷ್ಟಿಸಿರುವ ಸಮಯದಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಹೊರದಬ್ಬಲು ಕೇಂದ್ರ ಸರಕಾರ ‘‘ಕ್ರೂರ, ಹಠಾತ್ ಮತ್ತು ಕಾನೂನುಬಾಹಿರ’’ ಕ್ರಮವನ್ನು ತೆಗೆದುಕೊಂಡಿದೆ ಎಂದು ಈ ರಾಜ್ಯಗಳು ತಮ್ಮ ಮೊಕದ್ದಮೆಯಲ್ಲಿ ಹೇಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X