Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಮುಂದೆ ವಲಸೆ ಕಾರ್ಮಿಕರ ಮಕ್ಕಳ...

ಇನ್ನು ಮುಂದೆ ವಲಸೆ ಕಾರ್ಮಿಕರ ಮಕ್ಕಳ ಶಾಲೆ ಪ್ರವೇಶಕ್ಕೆ ಟಿಸಿ ಕೇಳುವಂತಿಲ್ಲ...

ವಾರ್ತಾಭಾರತಿವಾರ್ತಾಭಾರತಿ14 July 2020 10:12 PM IST
share
ಇನ್ನು ಮುಂದೆ ವಲಸೆ ಕಾರ್ಮಿಕರ ಮಕ್ಕಳ ಶಾಲೆ ಪ್ರವೇಶಕ್ಕೆ ಟಿಸಿ ಕೇಳುವಂತಿಲ್ಲ...

 ಹೊಸದಿಲ್ಲಿ, ಜು.14: ವಲಸೆ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮಂಗಳವಾರ ಬಿಡುಗಡೆಗೊಳಿಸಿದ್ದು, ಲಾಕ್ ಡೌನ್ ಮತ್ತಿತರ ಕಾರಣಗಳಿಂದ ಊರಿಗೆ ಮರಳಿರುವ ವಲಸೆ ಕಾರ್ಮಿಕರ ಮಕ್ಕಳಿಗೆ ಸಂಬಂಧಿಸಿ ದತ್ತಾಂಶವನ್ನು ಸಿದ್ಧಪಡಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.

ಕೊರೋನ ಪಿಡುಗಿನಿಂದಾಗಿ ತವರಿಗೆ ಮರಳಿದ ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಸೇರಿಸಿಕೊಳ್ಳುವಾಗ ಟಿಸಿ ಅಥವಾ ಈ ಹಿಂದೆ ತರಗತಿಗೆ ಹಾಜರಾದ ಬಗ್ಗೆ ಪುರಾವೆಯನ್ನು ಕೇಳಬಾರದು. ಯಾವುದಾದರೂ ಗುರುತು ಪತ್ರವಿದ್ದರೆ ಸಾಕು ವಿದ್ಯಾರ್ಥಿಗಳನ್ನು ಶಾಲೆಗೆ ಸೇರಿಸಿಕೊಳ್ಳಬೇಕು ಎಂದು ಎಲ್ಲಾ ಶಾಲೆಗಳಿಗೆ ಆದೇಶ ರವಾನಿಸುವಂತೆ ಇಲಾಖೆಯು ರಾಜ್ಯ ಸರಕಾರಗಳಿಗೆ ಸಲಹೆ ನೀಡಿದೆ.

ವಿದ್ಯಾರ್ಥಿಗಳ ಹೆತ್ತವರು ನೀಡುವ ಮಾಹಿತಿ ಸರಿಯಾಗಿದೆ ಎಂದು ಪರಿಗಣಿಸಿ, ವಿದ್ಯಾರ್ಥಿ ವಾಸವಿರುವ ಅಥವಾ ನೆರೆಯ ಸರಕಾರಿ ಅಥವಾ ಅನುದಾನಿತ ಶಾಲೆಯಲ್ಲಿ ಸಂಬಂಧಿಸಿದ ತರಗತಿಗೆ ದಾಖಲಾತಿ ಮಾಡಿಸಿಕೊಳ್ಳಬೇಕು ಎಂದು ಮಾರ್ಗಸೂಚಿ ತಿಳಿಸಿದೆ.

  ಈ ಮಕ್ಕಳು ಯಾವುದೇ ಸಂದರ್ಭ ಹಿಂದಿರುಗುವ ಸಾಧ್ಯತೆ ಇರುವುದರಿಂದ ಶಾಲೆಯ ಪಟ್ಟಿಯಿಂದ ಯಾವುದೇ ವಿದ್ಯಾರ್ಥಿಯ ಹೆಸರನ್ನು ಅಳಿಸಿ ಹಾಕಬಾರದು. ಮಕ್ಕಳ ಹೆತ್ತವರು ಅಥವಾ ಪಾಲಕರನ್ನು ಫೋನ್, ವಾಟ್ಸಾಪ್ ಅಥವಾ ನೆರೆಮನೆಯವರ ಮೂಲಕ ಸಂಪರ್ಕಿಸಿ ದತ್ತಾಂಶವನ್ನು ತಯಾರಿಸಬೇಕು. ಅಲ್ಲದೆ ಈ ಅವಧಿಯಲ್ಲಿ ಅವರು ನೆಲೆಸಿರುವ ತಾತ್ಕಾಲಿಕ ಸ್ಥಳವನ್ನೂ ದಾಖಲಿಸಬೇಕು. ಈಗ ಆ ಸ್ಥಳವನ್ನು ಬಿಟ್ಟು ತೆರಳಿರುವ ಮಕ್ಕಳ ಹೆಸರನ್ನು ದಾಖಲಾತಿ ಸಂದರ್ಭದಲ್ಲಿ ‘ವಲಸೆ ಹೋದವರು ಅಥವಾ ತಾತ್ಕಾಲಿಕವಾಗಿ ಅಲಭ್ಯವಾಗಿರುವವರು’ ಎಂದು ಪ್ರತ್ಯೇಕವಾಗಿ ತೋರಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

 ಇಂತಹ ಮಕ್ಕಳ ಸಂಖ್ಯೆಯನ್ನು ವರ್ಗವಾರು ಆಧಾರದಲ್ಲಿ ಶಿಕ್ಷಣ ನಿರ್ದೇಶನಾಲಯಕ್ಕೆ ವರದಿ ರೂಪದಲ್ಲಿ ಸಲ್ಲಿಸಿದರೆ ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ ಮತ್ತು ಸಮವಸ್ತ್ರ ವಿತರಣೆಯ ವೆಚ್ಚವನ್ನು ಸರಿದೂಗಿಸಲು ಸಾಧ್ಯವಾಗುತ್ತದೆ ಎಂದು ಸಚಿವಾಲಯದ ಮಾರ್ಗಸೂಚಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X