Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯ ಸರಕಾರದಿಂದ...

ರಾಜ್ಯ ಸರಕಾರದಿಂದ ಇಮಾಮ್/ಮುಅದ್ಸಿನ್‌ರಿಗೆ ನಿವೃತ್ತಿ ವೇತನ ಯೋಜನೆ: ಮೊದಲ ಕಂತಿನ ಹಣ ಬಿಡುಗಡೆ

ಜಿಲ್ಲಾ ಮಟ್ಟದಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ವಾರ್ತಾಭಾರತಿವಾರ್ತಾಭಾರತಿ15 July 2020 4:44 PM IST
share

ಮಂಗಳೂರು, ಜು.15: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ನೋಂದಣಿಗೊಂಡ ಮಸೀದಿಗಳಲ್ಲಿ 10 ವರ್ಷಕ್ಕಿಂತ ಮೇಲ್ಪಟ್ಟು ಸೇವೆಗೈದು ಕೆಲಸದಿಂದ ನಿವೃತ್ತಿ ಹೊಂದಿ 65 ವರ್ಷ ಪೂರ್ತಿಗೊಳಿಸಿದ ಇಮಾಮ್ ಮತ್ತು ಮುಅದ್ಸಿನ್‌ರಿಗೆ ನಿವೃತ್ತಿ ವೇತನ ಯೋಜನೆಯೊಂದನ್ನು ರಾಜ್ಯ ಸರಕಾರ ರೂಪಿಸಿದೆ.

ಈಗಾಗಲೆ ಮಸೀದಿ-ಮದ್ರಸಗಳಲ್ಲಿ ಸೇವೆ ಸಲ್ಲಿಸುವ ಇಮಾಮ್ ಮತ್ತು ಮುಅದ್ಸಿನ್‌ರಿಗೆ ಮಾಸಿಕ ಗೌರವಧನ ನೀಡಲಾಗುತ್ತಿದೆ. ಅದಕ್ಕೆ ಪೂರಕ ಎಂಬಂತೆ ಇದೀಗ ನಿವೃತ್ತಿ ಹೊಂದಿದ ಇಮಾಮ್/ಮುಅದ್ಸಿನ್‌ರಿಗೆ ನಿವೃತ್ತಿ ವೇತನ ಯೋಜನೆಯನ್ನು ರಾಜ್ಯ ವಕ್ಫ್ ಮಂಡಳಿಯ ಮೂಲಕ ಪ್ರಕಟಿಸಿದೆ. ಕೊರೋನ ಸಂಕಷ್ಟ ಕಾಲದಲ್ಲಿ ಈ ವೇತನವು ಇಮಾಮ್/ಮುಅದ್ಸಿನ್‌ರಿಗೆ ವರದಾನವಾಗಲಿದೆ.

ವಕ್ಫ್‌ನಲ್ಲಿ ನೋಂದಣಿಗೊಂಡ ಮಸೀದಿಗಳಲ್ಲಿ ಇಮಾಮ್ ಅಥವಾ ಮುಅದ್ಸಿನ್ ಆಗಿ ಕನಿಷ್ಟ 10 ವರ್ಷ ಸೇವೆ ಸಲ್ಲಿಸಿರಬೇಕು ಮತ್ತು ನಿವೃತ್ತಿ ಹೊಂದಿ 65 ವರ್ಷ ಪ್ರಾಯ ಪೂರ್ತಿಗೊಂಡಿರಬೇಕು. ಅಂತಹವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಗೊಂಡ ಅರ್ಜಿದಾರರ ಪೈಕಿ ಇಮಾಮರಿಗೆ ಮಾಸಿಕ 2,000 ರೂ. ಮತ್ತು ಮುಅದ್ಸಿನ್‌ಗೆ 1,500 ರೂ. ನಿವೃತ್ತಿ ವೇತನ ನೀಡಲಾಗುತ್ತದೆ.

ಇಮಾಮ್-ಖತೀಬ್/ಸಹಾಯಕ ಇಮಾಮ್/ಮುಅಲ್ಲಿಂ/ಸದ್‌ರ್ ಮುಅಲ್ಲಿಂ/ಮುಅದ್ಸಿನ್ ಹೀಗೆ ವಿವಿಧ ಸ್ತರಗಳಲ್ಲಿ ಮಸೀದಿ/ಮದ್ರಸಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈಗಾಗಲೆ ಇಮಾಮ್ ಮತ್ತು ಮುಅದ್ಸಿನ್ ಸಹಿತ 12500ಕ್ಕೂ ಅಧಿಕ ಮಂದಿಗೆ ಮಾಸಿಕ ಗೌರವಧನ ನೀಡುತ್ತಿರುವ ಸರಕಾರ ಇದೀಗ ಹೊಸದಾಗಿ ನಿವೃತ್ತಿ ವೇತನ ಯೋಜನೆಯನ್ನು ಜಾರಿಗೊಳಿಸಿದೆ. ಅಷ್ಟೇ ಅಲ್ಲ, 2020-21ನೆ ಸಾಲಿನಲ್ಲಿ ರಾಜ್ಯದ 10 ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಯಾದಗಿರಿ ಜಿಲ್ಲೆಗಳ 42 ಇಮಾಮ್ ಮತ್ತು 49 ಮುಅದ್ಸಿನ್‌ರಿಗೆ ಕ್ರಮವಾಗಿ 2 ಸಾವಿರ ರೂ. ಮತ್ತು 1,500 ರೂ.ಸಹಿತ ಒಟ್ಟು 1.56 ಲಕ್ಷ ರೂ.ವನ್ನು ಬಿಡುಗಡೆ ಮಾಡಿದೆ. ಆ ಮೂಲಕ ನಿವೃತ್ತಿಯ ಬಳಿಕ ಬೇರೆ ಕೆಲಸ ಮಾಡಲಾಗದ ಇಮಾಮ್/ಮುಅದ್ಸಿನ್‌ರ ಬದುಕಿಗೆ ಇದು ಆಸರೆಯಾಗಲಿದೆ.

ಸೇವೆಯಲ್ಲಿರುವ ಇಮಾಮ್/ಮುಅದ್ಸಿನ್‌ರಿಗೆ ಈಗಾಗಲೆ ಗೌರವಧನ ನೀಡಲಾಗುತ್ತದೆ. ನಿವೃತ್ತಿಯ ಬಳಿಕ ಇಮಾಮ್/ಮುಅದ್ಸಿನ್‌ರಿಗೆ ಬೇರೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ನಿವೃತ್ತಿ ಯೋಜನೆ ರೂಪಿಸಲಾಗಿದೆ. ಇದೊಂದು ಹೊಸ ಯೋಜನೆಯಾಗಿದೆ. ಇದರ ಯಶಸ್ಸಿಗೆ ಎಲ್ಲರ ಸಹಕಾರ ಅತ್ಯಗತ್ಯ. ಇನ್ನು ಮುಅಲ್ಲಿಂ ಮತ್ತು ಸದ್‌ರ್ ಮುಅಲ್ಲಿಮರಿಗೆ ಗೌರವಧನ ನೀಡುವ ಪ್ರಸ್ತಾವನೆ ಇದೆ. ಅದನ್ನು ಜಾರಿಗೊಳಿಸಲು ಪ್ರಯತ್ನಿಸಲಾಗುವುದು.

ಮೌಲಾನ ಶಾಫಿ ಸಅದಿ ಬೆಂಗಳೂರು, ರಾಜ್ಯ ವಕ್ಫ್ ಮಂಡಳಿಯ ಸದಸ್ಯ

ಹೇಗೆ ಅರ್ಜಿ ಸಲ್ಲಿಸಬಹುದು?

ಈ ಅರ್ಹತೆಯುಳ್ಳ ಇಮಾಮ್/ಮುಅದ್ಸಿನ್‌ರು ಅರ್ಜಿ ನಮೂನೆಯನ್ನು ಆಯಾ ಜಿಲ್ಲಾ ವಕ್ಫ್ ಕಚೇರಿಯಿಂದ ಪಡೆದುಕೊಂಡು ಆಧಾರ್ ಕಾರ್ಡ್‌ನ ನಕಲು ಪ್ರತಿ, ಅರ್ಜಿದಾರರ ಸೇವಾ ದೃಢೀಕರಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆದಾಯ ದೃಢೀಕರಣ ಪತ್ರ ಅಥವಾ ಬಿಪಿಎಲ್ ಕಾರ್ಡ್‌ನ ಪ್ರತಿ, ವಿದ್ಯಾಭ್ಯಾಸದ ಬಗ್ಗೆ ದೃಢೀಕರಣ ಪತ್ರ (ಧಾರ್ಮಿಕ ಮತ್ತು ಲೌಕಿಕ) ಇತ್ಯಾದಿ ದಾಖಲೆಗಳೊಂದಿಗೆ ದ್ವಿಪ್ರತಿಯಲ್ಲಿ ಆಯಾ ಜಿಲ್ಲಾ ವಕ್ಫ್ ಕಚೇರಿಗೆ ಸಲ್ಲಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X