Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​‘ಕೊರೋನ ನಿಯಂತ್ರಣಕ್ಕೆ ಕೇರಳ ಮಾದರಿ...

​‘ಕೊರೋನ ನಿಯಂತ್ರಣಕ್ಕೆ ಕೇರಳ ಮಾದರಿ ಅನುಸರಿಸಿ’

ಗುರುಪುರ: ಪ್ರತಿಭಟನಾ ಸಭೆಯಲ್ಲಿ ಸಿಪಿಐಎಂ ಮುಖಂಡರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ15 July 2020 7:14 PM IST
share
​‘ಕೊರೋನ ನಿಯಂತ್ರಣಕ್ಕೆ ಕೇರಳ ಮಾದರಿ ಅನುಸರಿಸಿ’

ಮಂಗಳೂರು, ಜು.15: ರಾಜ್ಯ ಮತ್ತು ಕೇಂದ್ರ ಸರಕಾರವು ಲಾಕ್‌ಡೌನ್ ಹೆಸರಲ್ಲಿ ದಂಧೆ ನಡೆಸುತ್ತಿವೆ. ಈ ಮೂಲಕ ಜನರ ದಿಕ್ಕು ತಪ್ಪಿಸುತ್ತಿದೆ. ಕೇರಳ ಮಾದರಿಯಲ್ಲಿ ಕ್ರಮ ಕೈಗೊಂಡಲ್ಲಿ ಕೊರೋನ ಸೋಂಕು ನಿಯಂತ್ರಿಸಲು ಸಾಧ್ಯ ಎಂದು ಸಿಪಿಐಎಂ ಗುರುಪುರ ವಲಯ ಸಮಿತಿಯ ಅಧ್ಯಕ್ಷ ಸದಾಶಿವ ದಾಸ್ ಆಗ್ರಹಿಸಿದ್ದಾರೆ.

‘ಕೊರೋನ ನಿಯಂತ್ರಣಕ್ಕೆ ಲಾಕ್‌ಡೌನ್ ಪರಿಹಾರವಲ್ಲ’ ಎಂಬ ಘೋಷಣೆಯೊಂದಿಗೆ ಸಿಪಿಐಎಂ ಹಮ್ಮಿಕೊಂಡಿರುವ ರಾಜ್ಯವ್ಯಾಪಿ ಪ್ರತಿಭಟನೆಯ ಅಂಗವಾಗಿ ಗುರುಪುರ ಕೈಕಂಬ ಜಂಕ್ಷನ್‌ನಲ್ಲಿ ಬುಧವಾರ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕೊರೋನ ಸೋಂಕು ನಿಯಂತ್ರಿಸಲು ಲಾಕ್‌ಡೌನ್ ಒಂದೇ ಪರಿಹಾರವಲ್ಲ. ಪ್ರಸಕ್ತ ಎಲ್ಲವೂ ಮುಕ್ತವಾಗಿರುವ ಲಾಕ್‌ಡೌನ್ ನಿಯಮ ಅನ್‌ಲಾಕ್‌ಗೆ ಭಿನ್ನವಾಗಿಲ್ಲ ಎಂದರು.

ಸಿಪಿಐಎಂ ಮುಖಂಡ ಗಂಗಯ್ಯ ಅಮೀನ್ ಮಾತನಾಡಿ, ಕೊರೋನ ನಿಯಂತ್ರಣಕ್ಕೆ ಬಿಡುಗಡೆಯಾಗಿರುವ ಕೋಟ್ಯಂತರ ಅನುದಾನ ಎಲ್ಲಿಗೆ ಹೋಗಿದೆ ಎಂಬುದು ಗೊತ್ತಾಗಿಲ್ಲ. ಬಡವರಿಗೆ ಯಾವ ಪರಿಹಾರ ಸಿಕ್ಕಿದೆ ? ಬೀಡಿ ಕಾರ್ಮಿಕರಿಗೆ ಈ ಸರಕಾರಗಳು ನಯಾಪೈಸೆ ಕೂಡ ನೀಡಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಕೊರೋನ ಹೆಸರಲ್ಲಿ ಖಾಸಗಿ ಆಸ್ಪತ್ರೆಯವರು ಲೂಟಿ ಮಾಡಿದರೆ, ಸರಕಾರದವು ದಿನಕ್ಕೆ ಎರಡು ಮಾತ್ರೆ ಕೊಟ್ಟು ಸತಾಯಿಸುತ್ತಿದ್ದಾರೆ. ಕಾರ್ಖಾನೆ, ವಾಹನ, ಅಂಗಡಿ-ಮುಂಗಟ್ಟು ತೆರೆದಿಡಲು ಅವಕಾಶವಿರುವುದು ‘ಲಾಕ್‌ಡೌನ್’ ಪದಕ್ಕೆ ಅವಮಾನ ಎಂದರು.

ಸಭೆಯಲ್ಲಿ ಸಿಪಿಐಎಂ ಕಾರ್ಯಕರ್ತರಾದ ವಾರಿಜಾ, ವಸಂತಿ ಕುಪ್ಪೆಪದವು, ಯಶೋದಾ ಮಳಲಿ, ಹೊನ್ನಯ್ಯ ಅಮೀನ್, ಶೇಖರ ಪೂಜಾರಿ, ಬಾಬು ಪೂಜಾರಿ, ಬಾಬು ಸಾಲ್ಯಾನ್ ಮತ್ತಿತರರು ಇದ್ದರು. ಪ್ರತಿಭಟನಾ ಸಭೆಯಲ್ಲಿ ನೋಣಯ್ಯ ಗೌಡ ಸ್ವಾಗತಿಸಿದರು. ಹಸನಬ್ಬ ವಂದಿಸಿದರು.

ತಹರೇವಾರಿ ಪ್ರದರ್ಶನಾ ಫಲಕ: ಮಂಗಳೂರು ನಗರದ ಹೊರವಲಯದ ಗುರುಪುರದ ಕೈಕಂಬ ಜಂಕ್ಷನ್‌ನಲ್ಲಿ ಬುಧವಾರ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ತಹರೇವಾರಿ ಬರಹಗಳನ್ನು ಒಳಗೊಂಡ ಪ್ರದರ್ಶನಾ ಫಲಕಗಳು ರಾರಾಜಿಸಿದವು.
‘ಲಾಕ್‌ಡೌನ್ ಸಂದರ್ಭದಲ್ಲಿ ಜನತೆಗೆ ಆಹಾರ ಸಾಮಗ್ರಿ ಒದಗಿಸಲಿ’, ‘ಕೊರೋನ ಸೋಂಕಿತರಿಗೆ ತಾರತಮ್ಯವಿಲ್ಲದೆ ಚಿಕಿತ್ಸೆ ಸಗುವಂತಾಗಲಿ’, ‘ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ನೇಮಕ ಮಾಡಿ’, ‘ಸುಲಿಗೆ ಮಾಡುವ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಿ’, ‘ಆರೋಗ್ಯ ಸಿಬ್ಬಂದಿಗೆ ಸುರಕ್ಷತಾ ಆರೋಗ್ಯ ಕಿಟ್ ಒದಗಿಸಿ’, ‘ಸೀಲ್‌ಡೌನ್ ಪ್ರದೇಶಗಳ ಜನರ ಸಂಕಷ್ಟಗಳಿಗೆ ಸ್ಪಂದಿಸಿ’ ಎನ್ನುವ ಬಗೆಬಗೆಯ ಈ ಮೊದಲಾದ ಪ್ರದರ್ಶನಾ ಫಲಕಗಳು ಸಾರ್ವಜನಿಕರನ್ನು ಆಕರ್ಷಿಸಿದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X