Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ತಡೆಗೆ ಉಡುಪಿ ಜಿಲ್ಲೆಯ 10 ಗಡಿಗಳು...

ಕೊರೋನ ತಡೆಗೆ ಉಡುಪಿ ಜಿಲ್ಲೆಯ 10 ಗಡಿಗಳು ಸೀಲ್‌ಡೌನ್

ವಾರ್ತಾಭಾರತಿವಾರ್ತಾಭಾರತಿ15 July 2020 10:15 PM IST
share
ಕೊರೋನ ತಡೆಗೆ ಉಡುಪಿ ಜಿಲ್ಲೆಯ 10 ಗಡಿಗಳು ಸೀಲ್‌ಡೌನ್

ಉಡುಪಿ, ಜು.15: ಕೊರೋನ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಆದೇಶದಂತೆ ಉಡುಪಿ ಜಿಲ್ಲೆಯ ಎಲ್ಲ 10 ಗಡಿಗಳನ್ನು ಇಂದು ರಾತ್ರಿಯೇ ಸೀಲ್‌ಡೌನ್ ಮಾಡಿ, ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಗಡಿಭಾಗವಾಗಿರುವ ಹೆಜಮಾಡಿ ರಾಷ್ಟ್ರೀಯ ಹೆದ್ದಾರಿಯನ್ನು ಸೀಲ್‌ಡೌನ್ ಮಾಡಲಾಗಿದ್ದು, ಇನ್ನೊಂದು ಗಡಿ ಭಾಗವಾದ ಪಲಿಮಾರು ಕರ್ನಿರೆ ರಸ್ತೆಯನ್ನೂ ಮುಚ್ಚಲಾಗಿದೆ. ಸಂಜೆಯ ವೇಳೆ ಕಾಪು ತಹಶೀಲ್ದಾರ್ ಮುಹಮ್ಮದ್ ಇಸ್ಹಾಕ್, ಕಾಪು ವೃತ್ತ ನಿರೀಕ್ಷಕ ಮಹೇಶ್ ಪ್ರಸಾದ್ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಬೈಂದೂರು ತಾಲೂಕು ವ್ಯಾಪ್ತಿಯ ಪ್ರಮುಖ ಗಡಿ ಭಾಗವಾಗಿರುವ ಶಿರೂರಿ ನಲ್ಲಿ ಚೆಕ್‌ಪೋಸ್ಟ್ ನಿರ್ಮಿಸಿ ಸೀಲ್‌ಡೌನ್ ಮಾಡಲಾಗಿದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಯನ್ನು ಸಂಪರ್ಕಿಸುವ ಕೊಲ್ಲೂರು ಗಡಿಯನ್ನು ಕೂಡ ಸೀಲ್‌ಡೌನ್ ಮಾಡಲಾಗಿದೆ. ಕುಂದಾಪುರ ತಾಲೂಕು ವ್ಯಾಪ್ತಿಯ ಹೊಸಂಗಡಿ ಗಡಿಯನ್ನು ಬಂದ್ ಮಾಡಲಾಗಿದೆ.

ಹೆಬ್ರಿ ತಾಲೂಕು ವ್ಯಾಪ್ತಿಯ ಹೆಬ್ರಿ-ಆಗುಂಬೆ ಮಾರ್ಗದ ಸೋಮೇಶ್ವರ ಗಡಿ ಪ್ರದೇಶವನ್ನು ಬಂದ್ ಮಾಡಿ ಸೀಲ್‌ಡೌನ್ ಮಾಡಲಾಗಿದೆ. ಹೆಚ್ಚುವರಿ ಸಿಬ್ಬಂದಿಗಳನ್ನು ನೇಮಿಸಿ, ಸಿಸಿಟಿವಿ ಅಳವಡಿಸಲಾಗಿದೆ. ಕಾರ್ಕಳ ತಾಲೂಕು ವ್ಯಾಪ್ತಿಯ ಮಾಳ, ಸಚ್ಚರಿಪೇಟೆ, ಬಜಗೋಳಿ, ಕಾಂತಾವಾರ ಸೇರಿದಂತೆ ಒಟ್ಟು ಐದು ಗಡಿಗಳನ್ನು ಸೀಲ್ ಮಾಡಲಾಗಿದೆ.

‘ಹೊರ ಜಿಲ್ಲೆಯನ್ನು ಸಂಪರ್ಕಿಸುವ ಜಿಲ್ಲೆಯ ಒಟ್ಟು 10 ಗಡಿ ಪ್ರದೇಶವನ್ನು ಇಂದು ರಾತ್ರಿಯಿಂದಲೇ ಚೆಕ್‌ಪೋಸ್ಟ್ ನಿರ್ಮಿಸಿ ಸೀಲ್‌ಡೌನ್ ಮಾಡಲಾಗಿದೆ. ಪಾಸ್ ಇಲ್ಲದ ಯಾವುದೇ ವಾಹನಗಳನ್ನು ಒಳಗೆ ಅಥವಾ ಹೊರಗಡೆ ಬಿಡದಂತೆ ಆದೇಶಿಸಲಾಗಿದೆ. ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ಅಗತ್ಯ ಇರುವಷ್ಟು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ’
-ವಿಷ್ಣುವರ್ದನ್, ಪೊಲೀಸ್ ಅಧೀಕ್ಷಕ, ಉಡುಪಿ ಜಿಲ್ಲೆ

ಹೆಜಮಾಡಿಯಲ್ಲಿ ಚೆಕ್‌ಪೋಸ್ಟ್ ಮೂಲಕ ಜಿಲ್ಲಾಗಡಿ ಪ್ರವೇಶಕ್ಕೆ ಇರುವ ನಿರ್ಬಂಧಗಳನ್ನು ಪಾಲಿಸಲು ನಿಗಾ ವಹಿಸಲಾಗುವುದು. ತುರ್ತು ಆರೋಗ್ಯ ಸಂಬಂಧಿ ಸಮಸ್ಯೆಗಾಗಿ ಜಿಲ್ಲೆಗೆ ಆಗಮಿಸುವ ಆ್ಯಂಬುಲೆನ್ಸ್‌ಗಳನ್ನು ಸೂಕ್ತ ದಾಖಲೆಗಳ ಪರಿಶೀಲನೆ ಬಳಿಕ ಒಳಬಿಡಲಾಗುವುದು. ಗುರುತು ಚೀಟಿಯನ್ನು ಪರಿಶೀಲಿಸಿ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಉಳಿದಂತೆ ಯಾರಿಗೂ ಪ್ರವೇಶ ಇರುವುದಿಲ್ಲ.
-ಮುಹಮ್ಮದ್ ಇಸ್ಹಾಕ್, ತಹಶೀಲ್ದಾರ್, ಕಾಪು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X