Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆತ್ತವರಿಗೆ ಕೊರೋನ ಸೋಂಕು: ಒಂದು ತಿಂಗಳು...

ಹೆತ್ತವರಿಗೆ ಕೊರೋನ ಸೋಂಕು: ಒಂದು ತಿಂಗಳು ಮಗುವಿನ ಆರೈಕೆ ಮಾಡಿದ ಕೇರಳದ ವೈದ್ಯೆ ಡಾ. ಮೇರಿ

ವಾರ್ತಾಭಾರತಿವಾರ್ತಾಭಾರತಿ16 July 2020 2:10 PM IST
share
ಹೆತ್ತವರಿಗೆ ಕೊರೋನ ಸೋಂಕು: ಒಂದು ತಿಂಗಳು ಮಗುವಿನ ಆರೈಕೆ ಮಾಡಿದ ಕೇರಳದ ವೈದ್ಯೆ ಡಾ. ಮೇರಿ

ಎರ್ಣಾಕುಳಂ: ಆರು ತಿಂಗಳ ಹಸುಗೂಸಿನ ಹೆತ್ತವರಿಬ್ಬರಿಗೂ ಕೋವಿಡ್-19 ಸೋಂಕು ತಗಲಿದ ನಂತರ ಸಂಬಂಧಿಕರೂ ಶಿಶುವನ್ನು ನೋಡಿಕೊಳ್ಳಲು ಹಿಂದೇಟು ಹಾಕಿದ ಸಂದರ್ಭದಲ್ಲಿ ಕೇರಳದ ವೈದ್ಯೆ ಡಾ. ಮೇರಿ ಅನಿತಾ ತಾವೇ ಸ್ವತಃ ಒಂದು ತಿಂಗಳು ಆ ಶಿಶುವಿನ ಆರೈಕೆ ಮಾಡಿ ಹೃದಯವೈಶಾಲ್ಯ ಮೆರೆದಿದ್ದಾರೆ.

ಬುಧವಾರ ಅವರು ಶಿಶುವನ್ನು ಹೆತ್ತವರಿಗೆ ಹಸ್ತಾಂತರಿಸಿದ್ದಾರೆ. ಮಗುವಿನ ಹೆತ್ತವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ನಂತರ ಗೃಹ ಕ್ವಾರಂಟೈನ್ ಅವಧಿ ಮುಗಿಸಿದ ನಂತರ ಶಿಶುವನ್ನು ಅವರಿಗೆ ಹಸ್ತಾಂತರಿಸಿದ್ದಾರೆ ಡಾ. ಮೇರಿ.

ಮಗುವಿನ ಹೆತ್ತವರು ಗುರ್ಗಾಂವ್‍ ನ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ತಿಂಗಳು ಮಗುವಿನ ತಂದೆಗೆ ಕೋವಿಡ್ 19 ದೃಢಪಟ್ಟ ನಂತರ ತಾಯಿ ಮಗುವಿನ ಜತೆಗೆ ಕೇರಳಕ್ಕೆ ಬಂದಿದ್ದರು. ಕೊಚ್ಚಿಯ ಮನೆಯಲ್ಲಿ ಕ್ವಾರಂಟೈನ್‍ ನಲ್ಲಿದ್ದ ವೇಳೆ ತಾಯಿಗೂ ಕೋವಿಡ್ 19 ದೃಢಗೊಂಡಿತ್ತು. ಮಗುವನ್ನು ನೋಡಿಕೊಳ್ಳಲು ಯಾರೂ ಇಲ್ಲದೇ ಇದ್ದಾಗ ಮಕ್ಕಳ ಕಲ್ಯಾಣ ಸಮಿತಿ ಡಾ. ಮೇರಿ ಅವರ ಸಹಾಯ ಯಾಚಿಸಿತ್ತು. ಮಗುವಿಗೂ ಸೋಂಕು ತಗಲುವ ಭೀತಿ ಅಧಿಕವಾಗಿದ್ದರೂ ಅದನ್ನು ನೋಡಿಕೊಳ್ಳಲು ಡಾ. ಮೇರಿ ಮುಂದೆ  ಬಂದಿದ್ದರು.

ತಾವಿರುವ ಕಟ್ಟಡದಲ್ಲಿಯೇ ಖಾಲಿಯಾಗಿದ್ದ ಫ್ಲ್ಯಾಟಿನಲ್ಲಿ ಅವರು ಮಗುವಿನ ಜತೆ ವಾಸಿಸಲು ಆರಂಭಿಸಿದ್ದರು. ಅವರ ಮೂವರು  ಮಕ್ಕಳು ಪ್ರತಿ ದಿನ ಆಹಾರವನ್ನು ಅವರ ಫ್ಲ್ಯಾಟ್ ಹೊರಗಡೆ ಇಟ್ಟು ಹೋಗುತ್ತಿದ್ದರು,. ಮಗು ತನ್ನ ಜತೆಗಿದ್ದರೂ ಪ್ರತಿ ದಿನ ಅವರು ಗುರ್ಗಾಂವ್‍ ನಲ್ಲಿದ್ದ ಮಗುವಿನ ತಂದೆ ಹಾಗೂ ಕೊಚ್ಚಿಯಲ್ಲಿದ್ದ ಮಗುವಿನ ತಾಯಿ ಜತೆ ವೀಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು.

ಇದೀಗ ಮಗು ಸುರಕ್ಷಿತವಾಗಿ ತಮ್ಮ ಕೈಸೇರಿದ ನಂತರ ಎಲ್ವಿನ್ ಹೆತ್ತವರು ಡಾ ಮೇರಿ ಅವರಿಗೆ ಹೃತ್ಪೂರ್ವಕ ಧನ್ಯವಾದ ಹೇಳಿದ್ದಾರೆ. ಕ್ಲಿನಿಕಲ್ ಮನೋರೋಗ ತಜ್ಞೆಯಾಗಿರುವ ಡಾ. ಮೇರಿ ಕೊಚ್ಚಿಯಲ್ಲಿ ಭಿನ್ನ ಸಾಮರ್ಥ್ಯದ ಮಕ್ಕಳಿಗಾಗಿ ಒಂದು ಸಂಘಟನೆ ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X