Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ತೆಲಂಗಾಣ ಮೂಲದ ಕೊರೋನ ರೋಗಿಯ 1.52 ಕೋಟಿ...

ತೆಲಂಗಾಣ ಮೂಲದ ಕೊರೋನ ರೋಗಿಯ 1.52 ಕೋಟಿ ರೂ. ಬಿಲ್ ಮನ್ನಾ ಮಾಡಿದ ದುಬೈ ಆಸ್ಪತ್ರೆ

ವಾರ್ತಾಭಾರತಿವಾರ್ತಾಭಾರತಿ16 July 2020 2:20 PM IST
share
ತೆಲಂಗಾಣ ಮೂಲದ ಕೊರೋನ ರೋಗಿಯ 1.52 ಕೋಟಿ ರೂ. ಬಿಲ್ ಮನ್ನಾ ಮಾಡಿದ ದುಬೈ ಆಸ್ಪತ್ರೆ

ದುಬೈ : ತೆಲಂಗಾಣ ಮೂಲದ ಕೋವಿಡ್-19 ರೋಗಿಯೊಬ್ಬರಿಗೆ ನೀಡಲಾಗಿದ್ದ ಚಿಕಿತ್ಸೆಯ ಬಿಲ್ ಮೊತ್ತವಾದ 1.52 ಕೋಟಿ ರೂ.ಗಳನ್ನು ದುಬೈಯ ಆಸ್ಪತ್ರೆ ಮಾನವೀಯ ನೆಲೆಯಲ್ಲಿ ಮನ್ನಾಗೊಳಿಸಿ 80 ದಿನಗಳ ಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಿದೆ.

42 ವರ್ಷದ ಒಡ್ನಾಲ ರಾಜೇಶ್, ಮೂಲತಃ ಜಗತಿಯಾಲ್ ಜಿಲ್ಲೆಯ ಗೊಲ್ಲಪಲ್ಲಿ ಮಂಡಲದ ವೇಣುಗುಮಟಲ ಗ್ರಾಮದವರಾಗಿದ್ದು ಬುಧವಾರ ಮುಂಜಾನೆ ವಿಮಾನ ಮೂಲಕ ಹೈದರಾಬಾದ್ ತಲುಪಿದ್ದಾರೆ. ತೆಲಂಗಾಣ ಸರಕಾರದ ಎನ್‍ಆರ್‍ಐ ಘಟಕದ ಅಧಿಕಾರಿಗಳು ಆತನನ್ನು 14 ದಿನಗಳ ಗೃಹ ಕ್ವಾರಂಟೈನಿನಲ್ಲಿರಲು ಹೇಳಿ ಊರಿಗೆ ಕಳುಹಿಸಿದ್ದಾರೆ.

ಎರಡು ವರ್ಷಗಳ ಹಿಂದೆ ದುಬೈಗೆ ಕಟ್ಟಡ ನಿರ್ಮಾಣ ಕಾರ್ಮಿಕನಾಗಿ ದುಡಿಯಲು ತೆರಳಿದ್ದ ರಾಜೇಶ್‍ ಗೆ  ಕೆಮ್ಮು ಮತ್ತು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದುಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆತನಿಗೆ ಕೋವಿಡ್ ಇರುವುದು ದೃಢಪಟ್ಟಿತ್ತು,. ಎಂಬತ್ತು ದಿನಗಳ ಚಿಕಿತ್ಸೆಯ ಆಸ್ಪತ್ರೆ ಬಿಲ್ 7,62,555 ದಿರ್ಹಂ (ರೂ 1.52 ಕೋಟಿ) ಆಗಿತ್ತು. ಆದರೆ ಆತನ ಬಳಿ ಹಣವಿಲ್ಲದೇ ಇದ್ದಾಗ ಸ್ಥಳೀಯ ತೆಲುಗು ಎನ್‍ಆರ್‍ಐ ಗುಂಡೆಲ್ಲಿ ನರಸಿಂಹ ಆತನ ಸಹಾಯಕ್ಕೆ ಬಂದಿದ್ದರು.

ದುಬೈಯಲ್ಲಿರುವ ಗಲ್ಫ್ ಕೆಲಸಗಾರರ ರಕ್ಷಣಾ ಸಂಘದ ಅಧ್ಯಕ್ಷರಾಗಿರುವ  ನರಸಿಂಹ ಆತನ ಸಮಸ್ಯೆಯನ್ನು ದುಬೈಯ ಭಾರತೀಯ ಕಾನ್ಸುಲೇಟ್‍ ನಲ್ಲಿನ  ಸ್ವಯಂಸೇವಕ ಸುಮಂತ್  ರೆಡ್ಡಿ ಗಮನಕ್ಕೆ ತಂದಿದ್ದರು. ಅವರು  ಹಾಗೂ ಇನ್ನೊಬ್ಬ ಸಮಾಜ ಸೇವಕ ದುಬೈಯ ಭಾರತೀಯ ಕಾನ್ಸುಲೇಟ್‍ ನ ಅಧಿಕಾರಿ ಹರ್‍ ಜೀತ್ ಸಿಂಗ್ ಅವರನ್ನು ಸಂಪರ್ಕಿಸಿದ ನಂತರ ಅವರು ದುಬೈ ಆಸ್ಪತ್ರೆ ಆಡಳಿತಕ್ಕೆ ಪತ್ರ ಬರೆದು ಬಿಲ್ ಮನ್ನಾಗೊಳಿಸುವಂತೆ ಕೋರಿದ್ದರು. ಅಂತೆಯೇ ಮಾನವೀಯ ನೆಲೆಯಲ್ಲಿ ಆಸ್ಪತ್ರೆಯು ಬಿಲ್ ಮನ್ನಾ ಮಾಡಿತ್ತು.

ಬಿಎಪಿಎಸ್ ಸ್ವಾಮಿನಾರಾಯಣ ಟ್ರಸ್ಟ್‍ ನ ಅಶೋಕ್ ಕೊಟೆಚಾ ಅವರು ರಾಜೇಶ್‍ ಗೆ ಊರಿಗೆ ಮರಳಲು ವಿಮಾನ ಟಿಕೆಟ್ ಒದಗಿಸಿದ್ದರೆ ಇನ್ನೊಬ್ಬ ಸಮಾಜ ಸೇವಕ ರೂ 10,000  ಹಣವನ್ನೂ ನೀಡಿದ್ದರು.

ರಾಜೇಶ್ ಪತ್ನಿ ಲಕ್ಷ್ಮಿ ಧೋಬಿ ಹಾಗೂ ಕೃಷಿ ಕೆಲಸ ಮಾಡುತ್ತಿದ್ದು, ದಂಪತಿಯ 18 ವರ್ಷದ ಪುತ್ರಿ ಬಿ.ಕಾಂ ವಿದ್ಯಾರ್ಥಿನಿಯಾಗಿದ್ದರೆ ಪುತ್ರ  12ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X