Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಟುಕರಾಗಬೇಡಿ, ಮಾನವೀಯತೆಯಿಂದ ಕರ್ತವ್ಯ...

ಕಟುಕರಾಗಬೇಡಿ, ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ: ವೈದ್ಯರು, ಸಿಬ್ಬಂದಿಗೆ ಸಚಿವ ಸುಧಾಕರ್ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ16 July 2020 2:59 PM IST
share
ಕಟುಕರಾಗಬೇಡಿ, ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ: ವೈದ್ಯರು, ಸಿಬ್ಬಂದಿಗೆ ಸಚಿವ ಸುಧಾಕರ್ ಕಿವಿಮಾತು

ಬೆಂಗಳೂರು, ಜು.16: ಕೋವಿಡ್ ವಿರುದ್ಧದ ಹೋರಾಟದ ಸಂದರ್ಭದಲ್ಲಿ ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸುವಂತೆ ವೈದ್ಯರು ಮತ್ತು ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಿವಿಮಾತು ಹೇಳಿದರು. 

ಇಂದಿರಾ ನಗರದಲ್ಲಿರುವ ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಗುರುವಾರ ಲೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು.

ಹೈಪ್ಲೊ ಆಕ್ಸಿಜನ್ ಸೌಲಭ್ಯ ಹದಿನೈದು ಹಾಸಿಗೆಗಳಿಗೆ ಇದ್ದರೂ ಕೇವಲ ಇಬ್ಬರು ರೋಗಿಗಳನ್ನು ದಾಖಲು ಮಾಡಿಕೊಂಡು ಉಳಿದ ಹದಿಮೂರು ಹಾಸಿಗೆ ಖಾಲಿ ಇಟ್ಟು ಕೊಳ್ಳಲಾಗಿತ್ತು. ಹಾಗೆಯೇ ಮಾರ್ಗಸೂಚಿಗೆ ವಿರುದ್ಧವಾಗಿ ಲಘು ಮತ್ತು ಮಧ್ಯಮ ರೋಗ ಲಕ್ಷಣ ಇದ್ದವರನ್ನೂ ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸದೆ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡಿದ್ದನ್ನು ಗಮನಿಸಿ ಅಧೀಕ್ಷಕರು ಮತ್ತು ಸಿಬ್ಬಂದಿ ವಿರುದ್ಧ ಸಚಿವ ಸುಧಾಕರ್ ಹರಿಹಾಯ್ದರು.

ದಿನಕ್ಕೆ ಕನಿಷ್ಠ 500 ಸ್ಯಾಂಪಲ್ ಸಂಗ್ರಹ ಮಾಡಲೇಬೇಕು ಎಂದು ಸೂಚನೆ ನೀಡಿದ ಸಚಿವರು, ಐಸಿಯು ಮತ್ತು ವೆಂಟಿಲೇಟರ್ ಅಳವಡಿಕೆಯಲ್ಲಿ ವಿಳಂಬ ಆಗಿರುವುದನ್ನು ಗಮನಿಸಿ, ಕಳೆದ ನಾಲ್ಕು ತಿಂಗಳಿಂದ ನಾವು ಹಗಲು-ರಾತ್ರಿ ಕಷ್ಟಪಟ್ಟು ಕೆಲಸ ಮಾಡುತ್ತಿದ್ದೇವೆ. ಆದರೂ ಮಾಧ್ಯಮಗಳಲ್ಲಿ ನಮ್ಮ ವಿರುದ್ಧ ವರದಿಗಳು ಬರುತ್ತಿವೆ. ಅದಕ್ಕೆ ಇಂತಹ ಲೋಪಗಳು ಕಾರಣ ಎಂದರು.

ವೈದ್ಯ ವೃತ್ತಿ ಅತ್ಯಂತ ಪವಿತ್ರವಾದುದ್ದು, ಅದು ಇಂತಹ ಸಂದರ್ಭದಲ್ಲಿ ಮಾನವೀಯತೆಯಿಂದ ಕೆಲಸ ಮಾಡಬೇಕು. ಅದನ್ನು ಬಿಟ್ಟು ಕಟುಕರಂತೆ ವರ್ತಿಸಬಾರದು. ಜನರು ಚಿಕಿತ್ಸೆಗಾಗಿ ರಸ್ತೆ ರಸ್ತೆಗಳಲ್ಲಿ ಅಲೆಯುತ್ತಿದ್ದಾರೆ. ಇಂತಹ ಸಮಯದಲ್ಲಿ ಎಲ್ಲರೂ ಹೃದಯ ವೈಶಾಲ್ಯತೆ ಮೆರೆಯಬೇಕು ಸಚಿವರು ಹೇಳಿದರು. ನಗರದಲ್ಲಿ ಇದ್ದು ಕೊಂಡು ಮಾರ್ಗಸೂಚಿ ಪಾಲಿಸದೆ ಹಾಸಿಗೆಗಳನ್ನು ಸರಿಯಾದ ರೋಗಿಗಳಿಗೆ ಒದಗಿಸದ ಕಾರಣಕ್ಕೆ, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಬ್ಬರು ಅಧಿಕಾರಿಗಳನ್ನು ತಕ್ಷಣದಿಂದಲೇ ಅಮಾನತ್ತಿನಲ್ಲಿ ಇರಿಸುವಂತೆ ಸ್ಥಳದಿಂದಲೇ ಅಪರ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದರು.

ಅನೆಸ್ತೇಷಿಯಾ ವಿಭಾಗದಲ್ಲಿ ಆರು ಮಂದಿ ತಜ್ಞರು ಇದ್ದರೂ ಇನ್ನೂ ವೆಂಟಿಲೇಟರ್ ಅಳವಡಿಕೆ ಆಗಿಲ್ಲ. ಹೀಗಿರುವಾಗ ಅಗತ್ಯ ಇರುವ ಬೇರೆ ಆಸ್ಪತ್ರೆಗೆ ಏಕೆ ತಜ್ಞರನ್ನು ನಿಯೋಜಿಸಲಿಲ್ಲ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಇದೇ ಸಂದರ್ಭದಲ್ಲಿ ರೋಗಿಗಳ ಜತೆ ವಿಡಿಯೋ ಕಾಲ್ ಮೂಲಕ ಮಾತನಾಡಿ ಆಸ್ಪತ್ರೆಯಲ್ಲಿ ಒದಗಿಸಿರುವ ಸೌಲಭ್ಯ ಮತ್ತು ಚಿಕಿತ್ಸೆಯ ಬಗ್ಗೆ ವಿಚಾರಿಸಿಕೊಂಡರು. ವೈದ್ಯಕೀಯ ಅಧೀಕ್ಷಕ ರಾಧಾಕೃಷ್ಣ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು. 

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಚಿವರು, ಅನಿರೀಕ್ಷಿತ ಭೇಟಿ ಕಾರ್ಯಕ್ರಮ ಮುಂದುವರಿಯುತ್ತದೆ. ಟೆಸ್ಟ್ ಗಳ ಸಂಖ್ಯೆ ಹೆಚ್ಚಿಸಲು ಎಲ್ಲಾ ಲ್ಯಾಬ್ ಗಳ ಜತೆ ಖುದ್ದು ಮಾತನಾಡಿ ಸೂಚನೆಗಳನ್ನು ನೀಡಲಾಗುತ್ತಿದೆ. ಪ್ಲಾಸ್ಮಾ ಚಿಕಿತ್ಸೆ ನಮ್ಮಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಕೋವಿಡ್ ನಿಂದ ಗುಣಮುಖ ರಾದವರಿಗೆ ರಕ್ತದಾನ ಮಾಡಲು ಮನವಿ ಮಾಡಲಾಗಿದೆ. ಇದಕ್ಕಾಗಿ ದಾನಿಗಳಿಗೆ ಪ್ರೋತ್ಸಾಹ ಧನವಾಗಿ ಐದು ಸಾವಿರ ರೂ.ಗಳನ್ನು ನೀಡಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X