ಬೆಂಗಳೂರು: ಹಾಸಿಗೆ ಇಲ್ಲದೆ ರೋಗಿ ಸಾವು; ಆರೋಪ

ಬೆಂಗಳೂರು, ಜು.16: ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಆಸ್ಪತ್ರೆಗಳ ನಿರ್ಲಕ್ಷದಿಂದ ಹೊರರೋಗಿಗಳ ಸಾವಿನ ಪ್ರಮಾಣ ಏರಿಕೆ ಆಗುತ್ತಿದ್ದು, ಗುರುವಾರ ಸಹ ಆಸ್ಪತ್ರೆಯಲ್ಲಿ ಹಾಸಿಗೆ ದೊರೆಯದ ಕಾರಣ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.
ಇಲ್ಲಿನ ರಾಜಾಜಿನಗರ ವಾರ್ಡ್-99ರ ಮಂಜುನಾಥ ನಗರದ ನಿವಾಸಿ ಚಂದ್ರಶೇಖರ್ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಕಳೆದ ಮೂರು ದಿನಗಳಿಂದ ಆಸ್ಪತ್ರೆಗಳಿಗೆ ಅಲೆದಾಡಿದ್ದರು ಎನ್ನಲಾಗಿದೆ. ಆದರೆ, ಯಾವುದೇ ಆಸ್ಪತ್ರೆ ಅವರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲು ಮುಂದಾಗಿಲ್ಲ. ಹೀಗಾಗಿ, ಗುರುವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Next Story





