Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನದಿಂದ ಏನೂ ಆಗುವುದಿಲ್ಲ, ಭಯಬೇಡ:...

ಕೊರೋನದಿಂದ ಏನೂ ಆಗುವುದಿಲ್ಲ, ಭಯಬೇಡ: ಸೋಂಕಿನಿಂದ ಗುಣಮುಖರಾದ ವಿಪ ಸದಸ್ಯ ಪ್ರಾಣೇಶ್

ವಾರ್ತಾಭಾರತಿವಾರ್ತಾಭಾರತಿ17 July 2020 7:12 PM IST
share
ಕೊರೋನದಿಂದ ಏನೂ ಆಗುವುದಿಲ್ಲ, ಭಯಬೇಡ: ಸೋಂಕಿನಿಂದ ಗುಣಮುಖರಾದ ವಿಪ ಸದಸ್ಯ ಪ್ರಾಣೇಶ್

ಚಿಕ್ಕಮಗಳೂರು, ಜು.17: ಕೊರೋನ ಸೋಂಕು ತಗುಲಿ ಆಸ್ಪತ್ರೆಗೆ ಹೋಗುವ ಮುಂಚೆ ನನಗೂ ಭಯವಿತ್ತು. ಕೊರೋನ ಬಂದು ಬಿಟ್ಟಿದೆ ನಾಳೆ ಏನಾಗುತ್ತೋ ಎಂಬ ಸಕಾರಾತ್ಮಕ ಮನೋಭಾವನೆ ಇತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಕೊರೋನದಿಂದ ಏನು ಆಗುವುದಿಲ್ಲ ಎಂಬ ಆತ್ಮವಿಶ್ವಾಸ ಹೆಚ್ಚಾಯಿತು. ಕೊರೋನ ಬಗ್ಗೆ ಭಯಬೇಡ, ಜಾಗ್ರತೆ ವಹಿಸಿ ಎಂದು ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ತಿಳಿಸಿದ್ದಾರೆ.

ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ತಮ್ಮ ನಿವಾಸದಲ್ಲಿ 10 ದಿನಗಳ ಕಾಲ ಹೋಮ್ ಕ್ವಾರಂಟೈನ್ ಆಗಿರುವ ಎಂ.ಕೆ.ಪ್ರಾಣೇಶ್ ತಮ್ಮ ನಿವಾಸದಿಂದ ವಿಡೀಯೋ ಮಾಡಿ ಆಸ್ಪತ್ರೆಯಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಕೊರೋನ ಸೋಂಕಿನಿಂದ ಏನೂ ಆಗುವುದಿಲ್ಲ, ಭಯಬೇಡ. ಅದನ್ನು ಜಾಗೃತೆಯಿಂದ ನಿಭಾಯಿಸಬೇಕು. ಸುರಕ್ಷಿತ ಅಂತರ, ಮಾಸ್ಕ್ ಧರಿಸುವುದರಿಂದ ಕಾಯಿಲೆಯಿಂದ ದೂರವಿರಬಹುದು. ಕೊರೋನದಿಂದ ಜೀವಕ್ಕೆ ಅಪಾಯವಿದೆ ಎಂಬ ಭಾವನೆ ಬೇಡ. ಒಂದೊಂದು ಸೋಂಕು ಕಾಯಿಲೆ ಸೋಂಕಿನ ಲಕ್ಷಣಗಳು ಕಂಡುಬಂದ ತಕ್ಷಣ ಚಿಕಿತ್ಸೆ ಪಡೆದುಕೊಂಡರೆ ಸೋಂಕಿನಿಂದ ಗುಣಮುಖರಾಗಬಹುದು ಎಂದು ತಿಳಿಸಿದ್ದಾರೆ.

ಕೋವಿಡ್-19 ಚಿಕಿತ್ಸಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಡಾಕ್ಟರ್, ನರ್ಸ್, ಇತರೆ ಸಿಬ್ಬಂದಿ ರೋಗಿಗಳನ್ನು ತಮ್ಮ ಕುಟುಂಬದ ಸದಸ್ಯರಂತೆ ತುಂಬಾ ಪ್ರೀತಿ ವಿಶ್ವಾಸದಿಂದ ನೋಡಿಕೊಳ್ಳುತ್ತಾರೆ. ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡುತ್ತಾರೆ. ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. 

15 ದಿನಗಳ ಕಾಲನಾನು ಮತ್ತು ನನ್ನ ಪತ್ನಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡೆವು. ಅಲ್ಲಿ ಕಾರ್ಯನಿರ್ವಹಿಸುವ ಡಾಕ್ಟರ್ ನರ್ಸ್, ಸಿಬ್ಬಂದಿ ಬಹಳ ಚೆನ್ನಾಗಿ ನೋಡಿಕೊಂಡರು. ಕೆ-2 ಸಮಸ್ಯೆಯಿಂದ ಕಳೆದ ಮೂರುವರೆ ತಿಂಗಳಿಂದ ಕೊರೋನ ವಾರಿಯರ್ಸ್ ಗೆ ಸಂಬಳವಾಗಿಲ್ಲ. ಆದರೂ ಬೇಸರ ಮಾಡಿಕೊಳ್ಳದೇ ಸಮಾಜಸೇವೆಯೆಂದು ಭಾವಿಸಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಕೆಲವರು ಕೊರೋನ ಬಂದರೆ ಬದುಕಲು ಸಾಧ್ಯವೇ ಇಲ್ಲ ಎಂಬಂತೆ ಬಿಂಬಿಸುತ್ತಿದ್ದಾರೆ. ನೂರಾರು ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಕೆಲವು ಮಂದಿ ಅವರಿಗೆ ಬೇರೆ ಬೇರೆ ರೀತಿಯ ಕಾಯಿಲೆ ಇದ್ದರಿಂದ ಮೃತರಾಗಿದ್ದಾರೆ ಎಂದು ಹೇಳಿದ್ದಾರೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅನೇಕ ಸೋಂಕಿತರನ್ನು ಮಾತನಾಡಿಸಿದ್ದೇನೆ. ಆಸ್ಪತ್ರೆಗೆ ಬರುವ ಮೊದಲು ಕೊರೋನ ಎಂದರೆ ಬಾರೀ ಭಯವಿತ್ತು. ಆಸ್ಪತ್ರೆಗೆ ಬಂದ ಮೇಲೆ ಶೀಘ್ರವಾಗಿ ಗುಣಮುಖರಾಗುವ ವಿಶ್ವಾಸವಿದೆ ಎನ್ನುತ್ತಿದ್ದರು. ಮಾದ್ಯಮಗಳು ಕೊರೋನ ಕಾಯಿಲೆ ಬಗ್ಗೆ ದೊಡ್ಡದಾಗಿ ಬಿಂಬಿಸುವ ಕೆಲಸ ಮಾಡದೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಲಿ ಎಂದು ತಿಳಿಸಿದ್ದಾರೆ.

ಕೊರೋನದಿಂದ ಸಂಪೂರ್ಣವಾಗಿ ಗುಣಮುಖನಾಗಿ ಬಂದಿದ್ದು, ಮನೆಯಲ್ಲಿ 10 ದಿನಗಳ ವಿಶ್ರಾಂತಿ ಪಡೆಯುತ್ತಿದ್ದೇನೆ. ವಿಶ್ರಾಂತಿಯ ನಂತರ ಸದಾ ನಿಮ್ಮ ಜೊತೆ ಇರುತ್ತೇನೆ. ಕೊರೋನದ ಬಗ್ಗೆ ಯಾರು ಧೈರ್ಯಗೆಡುವುದು ಬೇಡ. ಕೊರೋನ ವಾರಿಯರಸ್ ಗಳನ್ನು ಪ್ರೀತಿಯಿಂದ ನೋಡಿ ಎಂದು ಮನವಿ ಮಾಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X