ಕರ್ನಾಟಕದಲ್ಲಿ ಕೋವಿಡ್ ಗೆ ಮತ್ತೆ 115 ಮಂದಿ ಬಲಿ: 3,693 ಪ್ರಕರಣಗಳು ಪಾಸಿಟಿವ್
ಇದುವರೆಗೆ 20 ಸಾವಿರಕ್ಕೂ ಅಧಿಕ ಮಂದಿ ಗುಣಮುಖ

ಬೆಂಗಳೂರು, ಜು.17: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಸೋಂಕಿತರು ಸಾವನ್ನಪ್ಪುತ್ತಿರುವ ಪ್ರಕರಣದಲ್ಲೂ ಏರಿಕೆಯಾಗುತ್ತಿದೆ. ಪ್ರಮುಖವಾಗಿ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್19 ಅಟ್ಟಹಾಸ ಮೆರೆಯುತ್ತಿದೆ.
ಗುರುವಾರ ಸಂಜೆಯಿಂದ ಶುಕ್ರವಾರ ಸಂಜೆವರೆಗೆ ಮತ್ತೆ 3,693 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 55,115 ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 115 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 1147 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದೇ ದಿನ 75 ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಉಳಿದಂತೆ ಧಾರವಾಡ 8, ಮೈಸೂರು 7, ಬೆಳಗಾವಿ 4, ಬಳ್ಳಾರಿ 3, ಉಡುಪಿ 3, ಮಂಡ್ಯ 2, ಉತ್ತರ ಕನ್ನಡ 2, ದಾವಣಗೆರೆ 2, ಚಿಕ್ಕಬಳ್ಳಾಪುರ, ಬಾಗಲಕೋಟೆ, ಕೊಡಗು, ರಾಯಚೂರು, ತುಮಕೂರು, ದಕ್ಷಿಣ ಕನ್ನಡ, ಕೋಲಾರ, ಗದಗ ಮತ್ತು ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 2,208, ಧಾರವಾಡ 157, ಬಳ್ಳಾರಿ 133, ವಿಜಯಪುರ 118, ಬೆಳಗಾವಿ 95, ಮೈಸೂರು 93, ಕಲಬುರಗಿ 89, ಉಡುಪಿ 80, ಉತ್ತರ ಕನ್ನಡ 75, ಬೀದರ್ 69, ಗದಗ 59, ಹಾವೇರಿ 58, ಕೋಲಾರ 51, ದಕ್ಷಿಣ ಕನ್ನಡ 39, ತುಮಕೂರು 36, ರಾಯಚೂರು 33, ಬೆಂಗಳೂರು ಗ್ರಾಮಾಂತರ 33, ಚಿಕ್ಕಬಳ್ಳಾಪುರ 31, ದಾವಣಗೆರೆ 31, ಕೊಪ್ಪಳ 30, ಬಾಗಲಕೋಟೆ 29, ಚಿಕ್ಕಮಗಳೂರು 28, ಚಿತ್ರದುರ್ಗ 24, ಮಂಡ್ಯ 22, ಹಾಸನ 21, ರಾಮನಗರ 14, ಕೊಡಗು 13, ಶಿವಮೊಗ್ಗ 10, ಚಾಮರಾಜನಗರ 10, ಯಾದಗಿರಿಯಲ್ಲಿ 4 ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 55,115 ಕೊರೋನ ಸೋಂಕಿತರ ಪೈಕಿ 20,757 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 1,028 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 1,147 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 33,205 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.








