Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್-19: ಉಡುಪಿಯಲ್ಲಿ 20,...

ಕೋವಿಡ್-19: ಉಡುಪಿಯಲ್ಲಿ 20, ಬೈಂದೂರಿನಲ್ಲಿ 28 ಮನೆ ಸೀಲ್‌ಡೌನ್

ವಾರ್ತಾಭಾರತಿವಾರ್ತಾಭಾರತಿ20 July 2020 8:33 PM IST
share
ಕೋವಿಡ್-19: ಉಡುಪಿಯಲ್ಲಿ 20, ಬೈಂದೂರಿನಲ್ಲಿ 28 ಮನೆ ಸೀಲ್‌ಡೌನ್

ಉಡುಪಿ, ಜು.20: ಜಿಲ್ಲೆಯಲ್ಲಿ ಕೊರೋನ ವೈರಸ್ ಪಾಸಿಟಿವ್ ಬರುತ್ತಿರು ವವರ ಸಂಖ್ಯೆ ಏರುಗತಿಯಲ್ಲೇ ಇದ್ದು, ಸೋಮವಾರ 70ಕ್ಕೂ ಅಧಿಕ ಪಾಸಿಟಿವ್ ಬಂದವರನ್ನು ಗುರುತಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಅವರ ಮನೆ ಹಾಗೂ ಅಕ್ಕಪಕ್ಕದ ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಬೈಂದೂರಿನಲ್ಲಿ ಇಂದು ಒಟ್ಟು 28 ಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇವುಗಳಲ್ಲಿ ನಾವುಂದ-1, ಬಡಾಕೆರೆ-1, ಯಡ್ತರೆ-4, ನಾಡ-6, ಉಪ್ಪುಂದ-9, ಬಿಜೂರು-3, ಗೋಳಿಗೊಳೆ-1, ಕಾಲ್ತೋಡು-1 ಹಾಗೂ ಶಿರೂರಿನ 2 ಸೇರಿದ್ದಾರೆ. ಪಾಸಿಟಿವ್ ಬಂದವರ ಮನೆಗಳನ್ನು ಮಾತ್ರವಲ್ಲದೆ, ಅಕ್ಕಪಕ್ಕದ 4-5 ಮನೆಗಳನ್ನು ಸಹ ಸೀಲ್‌ಡೌನ್ ಮಾಡಿ ಕಂಟೈನ್‌ಮೆಂಟ್ ರೆನ್ ಮಾಡಲಾಗಿದೆ ಎಂದು ಬೈಂದೂರು ತಹಶೀಲ್ದಾರ್ ಬಸಪ್ಪ ತಿಳಿಸಿದ್ದಾರೆ.

ಉಡುಪಿ-20: ಉಡುಪಿ ತಾಲೂಕಿನಲ್ಲಿ ಇಂದು ಒಟ್ಟು 20 ಕಂಟೈನ್‌ಮೆಂಟ್ ವಲಯವನ್ನು ಮಾಡಲಾಗಿದೆ. ಇವುಗಳಲ್ಲಿ 80 ಬಡಗುಬೆಟ್ಟು-2, ಕೊಡವೂರು-4, ಮೂಡನಿಡಂಬೂರು-1, ಪುತ್ತೂರು-1, 76 ಬಡಗುಬೆಟ್ಟು- 3, ಅಂಬಲಪಾಡಿ-1, ಹೆರ್ಗ-3, ಶಿವಳ್ಳಿ-3 ಹಾಗೂ ಉದ್ಯಾವರ-1 ಸೇರಿವೆ ಎಂದು ಉಡುಪಿ ತಾಲೂಕು ಕಂದಾಯ ಅಧಿಕಾರಿಗಳು ತಿಳಿಸಿದ್ದಾರೆ.

ಕುಂದಾಪುರ-10: ಕುಂದಾಪುರ ತಾಲೂಕಿನಲ್ಲಿ ಒಟ್ಟು 10 ಕಂಟೈನ್‌ಮೆಂಟ್ ವಲಯಗಳನ್ನು ರಚಿಸಲಾಗಿದೆ. ಇವುಗಳಲ್ಲಿ ಕುಂದಾಪುರ-2, ಕಾವ್ರಾಡಿ-1, ಬಸ್ರೂರು-1, ಕುಂಭಾಶಿ-2, ತ್ರಾಸಿ-1, ಕನ್ಯಾನ-1, ಹಕ್ಲಾಡಿ-2 ಸೇರಿವೆ. ಇಂದು ಪಾಸಿಟಿವ್ ಬಂದ ಹೆಚ್ಚಿನವರು ಮುಂಬಯಿ ಹಾಗೂ ಬೆಂಗಳೂರಿನಿಂದ ಬಂದು ಪಾಸಿಟಿವ್ ಕಂಡುಬಂದವರ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ.

ಬ್ರಹ್ಮಾವರ-5: ಬ್ರಹ್ಮಾವರ ತಾಲೂಕಿನ ಬ್ರಹ್ಮಾವರ ಹೋಬಳಿಯಲ್ಲಿ ಇಂದು ಐದು ಮಂದಿ ಪಾಸಿಟಿವ್ ಬಂದಿದ್ದಾರೆ. ಪೆಜಮಂಗೂರಿನಲ್ಲಿ 38 ವರ್ಷದ ಒಬ್ಬರು ಪಾಸಿಟಿವ್ ಬಂದಿದ್ದು, ಇಲ್ಲಿ ಒಟ್ಟು 4 ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಚಾಂತಾರು ಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ 35 ವರ್ಷದ ಯುವಕನಲ್ಲಿ ಪಾಸಿಟಿವ್ ಕಂಡುಬಂದಿದ್ದು, ಅದೇ ಕಟ್ಟಡದ ಐದನೇ ಮಹಡಿಯ 9 ತಿಂಗಳ ಮಗುವೊಂದು ಮೂರು ದಿನಗಳ ಹಿಂದೆ ಪಾಸಿಟಿವ್ ಬಂದಿತ್ತು. ಇದೀಗ ಈ ಬಹುಮಹಡಿ ಕಟ್ಟಡ ಎರಡು ಮಹಡಿಗಳ ಒಟ್ಟು 24 ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ತಹಶೀಲ್ದಾರ್ ಕಿರಣ್ ಗೋರಯ್ಯ ತಿಳಿಸಿದ್ದಾರೆ.

ಇನ್ನು ನೀಲಾವರ ಗ್ರಾಮದಲ್ಲಿ 25 ವರ್ಷ ಪ್ರಾಯದ ಯುವಕನಲ್ಲಿ ಪಾಸಿಟಿವ್ ಕಂಡುಬಂದಿದ್ದು, ಆತನ ಮನೆಯೂ ಸೇರಿದಂತೆ ಒಟ್ಟು ನಾಲ್ಕು ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಬಾರಕೂರಿನಲ್ಲಿ ಒಂದೇ ಮನೆಯ ಐವರಲ್ಲಿ ಪಾಸಿಟಿವ್ ಕಂಡುಬಂದಿದ್ದು, ಅಲ್ಲಿ 13 ಮನೆ ಹಾಗೂ 19 ಅಂಗಡಿಗಳನ್ನು ಸೀಲ್‌ಡೌನ್ ಮಾಡಲಾಗಿದೆ ಎಂದರು.

ಕೋಟ-12:  ಬ್ರಹ್ಮಾವರ ತಾಲೂಕು ಕೋಟ ಹೋಬಳಿಯಲ್ಲಿ ಇಂದು 12 ಮಂದಿ ಪಾಸಿಟಿವ್ ಆಗಿದ್ದಾರೆ. ಇವರಲ್ಲಿ ಯಡ್ತಾಡಿಯ ಒಬ್ಬರು, ಮೂಡಹಡುವಿನ ಒಬ್ಬರು, ಸಾಲಿಗ್ರಾಮದ ಇಬ್ಬರು, ಕೋಟದ ಇಬ್ಬರು, ಹೆಗ್ಗುಂಜೆಯ ಒಬ್ಬರು ಹಾಗೂ ಬಾರಕೂರಿನ ಐವರು ಸೇರಿದ್ದಾರೆ ಎಂದು ಕಂದಾಯ ಅಧಿಕಾರಿ ರಾಜು ತಿಳಿಸಿದ್ದಾರೆ.

ಸಾಲಿಗ್ರಾಮದಲ್ಲಿ ಈಗಾಗಲೇ ಪಾಸಿಟಿವ್ ಬಂದಿರುವ ಪುರುಷರೊಬ್ಬರ 50 ವರ್ಷದ ಪತ್ನಿಯಲ್ಲಿ ಇಂದು ಸೋಂಕುಪತ್ತೆಯಾದರೆ, ಯಡ್ತಾಡಿಯಲ್ಲಿ ಬೆಂಗಳೂರಿನಿಂದ ಬಂದ 68ರ ವೃದ್ಧರಲ್ಲಿ ಸೋಂಕು ಕಂಡುಬಂದಿದೆ. ಕೋಟ ಗಿಳಿಯಾರಿನಲ್ಲಿ 21 ವರ್ಷ ಪ್ರಾಯದ ಯುವತಿ ಹಾಗೂ ಈಗಾಗಲೇ ಸೋಂಕು ಇರುವ ಪುರುಷರ ಐದು ವರ್ಷ ಪ್ರಾಯದ ಮಗುವಿನಲ್ಲಿ ಪಾಸಿಟಿವ್ ಕಂಡು ಬಂದಿದೆ ಎಂದು ರಾಜು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X