Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಸಿಸಿ ಟ್ವೆಂಟಿ-20 ವಿಶ್ವಕಪ್ ಮುಂದಿನ...

ಐಸಿಸಿ ಟ್ವೆಂಟಿ-20 ವಿಶ್ವಕಪ್ ಮುಂದಿನ ವರ್ಷಕ್ಕೆ ಮುಂದೂಡಿಕೆ

ವಾರ್ತಾಭಾರತಿವಾರ್ತಾಭಾರತಿ20 July 2020 10:12 PM IST
share
ಐಸಿಸಿ ಟ್ವೆಂಟಿ-20 ವಿಶ್ವಕಪ್ ಮುಂದಿನ ವರ್ಷಕ್ಕೆ ಮುಂದೂಡಿಕೆ

ಮುಂಬೈ, ಜು.20: ಕೋವಿಡ್-19 ಕಾರಣದಿಂದಾಗಿ ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯದಲ್ಲಿ ನಡೆಯಬೇಕಿದ್ದ ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್‌ನ್ನು ಮುಂದೂಡಲಾಗಿದೆ.

ಸೋಮವಾರ ನಡೆದ ಐಬಿಸಿ ಮಂಡಳಿ (ಐಸಿಸಿಯ ವಾಣಿಜ್ಯ ಅಂಗಸಂಸ್ಥೆ) ಸಭೆಯ ಬಳಿಕ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ಮಂಡಳಿ(ಐಸಿಸಿ) ಈ ವಿಚಾರವನ್ನು ಪ್ರಕಟಿಸಿದೆ.

ಮೂರು ಐಸಿಸಿ ಕ್ರಿಕೆಟ್ ಇವೆಂಟ್‌ಗಳ ವೇಳಾಪಟ್ಟಿಗೆ ಸ್ಪಷ್ಟತೆ ತರಲು ಮತ್ತು ಮುಂದಿನ ಮೂರು ವರ್ಷಗಳಲ್ಲಿ ಕ್ರಿಕೆಟ್ ಚೇತರಿಸಿಕೊಳ್ಳಲು ಸಾಧ್ಯವಿರುವ ಎಲ್ಲಾ ಅವಕಾಶಗಳನ್ನು ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಈ ಮೊದಲು ಟ್ವೆಂಟಿ-20 ವಿಶ್ವಕಪ್ ಅಕ್ಟೋಬರ್ 19ರಿಂದ ನವೆಂಬರ್ 15 ರವರೆಗೆ ಆಯೋಜಿಸಲು ನಿರ್ಧರಿಸಲಾಗಿತ್ತು.ಆದರೆ ಕೋವಿಡ್-19 ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಆತಿಥ್ಯ ವಹಿಸಲು ಸಾಧ್ಯವಾಗುವುದಿಲ್ಲ ಎಂದು ಈ ಹಿಂದೆ ಕ್ರಿಕೆಟ್ ಆಸ್ಟ್ರೇಲಿಯ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ತಿಳಿಸಿತ್ತು. ಇದೀಗ ಈ ಟೂರ್ನಿಯನ್ನು ಐಸಿಸಿ ಮುಂದೂಡುವ ನಿರ್ಧಾರ ಕೈಗೊಂಡಿದೆ.

ಐಬಿಸಿ ಮಂಡಳಿ ಮುಂದಿನ ವರ್ಷ ಫೆಬ್ರವರಿಯಲ್ಲಿ ನ್ಯೂಝಿಲ್ಯಾಂಡ್‌ನಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2021ನ್ನು ನಡೆಸಲು ಸಾಧ್ಯವಾಗುವುದಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡುವುದನ್ನು ಮುಂದುವರೆಸಿದೆ. ಈ ಮಧ್ಯೆ, ಈ ಕಾರ್ಯಕ್ರಮದ ಯೋಜನೆ ನಿಗದಿಯಂತೆ ಮುಂದುವರಿಯುತ್ತದೆ.

‘‘ನಾವು ಸಮಗ್ರ ಮತ್ತು ಸಂಕೀರ್ಣ ಆಕಸ್ಮಿಕ ಯೋಜನೆಯನ್ನು ಕೈಗೊಂಡಿದ್ದೇವೆ ಮತ್ತು ಈ ಪ್ರಕ್ರಿಯೆಯ ಮೂಲಕ ಕ್ರೀಡೆಯಲ್ಲಿ ತೊಡಗಿರುವ ಪ್ರತಿಯೊಬ್ಬರ ಆರೋಗ್ಯ ಮತ್ತು ಸುರಕ್ಷತೆಯನ್ನು ಕಾಪಾಡುವುದು ನಮ್ಮ ಪ್ರಥಮ ಆದ್ಯತೆಯಾಗಿದೆ’’ ಎಂದು ಐಸಿಸಿ ಮುಖ್ಯ ಕಾರ್ಯನಿರ್ವಾಹಕ ಮನು ಸಾಹ್ನಿ ಹೇಳಿದರು.

‘‘ಐಸಿಸಿ ಟ್ವೆಂಟಿ-20 ವಿಶ್ವಕಪ್‌ನ್ನು ಮುಂದೂಡುವ ನಿರ್ಧಾರವನ್ನು ನಮಗೆ ಲಭ್ಯವಿರುವ ಎಲ್ಲಾ ಆಯ್ಕೆಗಳನ್ನು ಎಚ್ಚರಿಕೆಯಿಂದ ಪರಿಗಣಿಸಿದ ನಂತರ ತೆಗೆದುಕೊಳ್ಳಲಾಗಿದೆ’’.

‘‘ ಟ್ವೆಂಟಿ-20 ವಿಶ್ವಕಪ್ ಮುಂದೂಡುವಿಕೆಯ ಪ್ರಕಟನೆಯು ಬಿಸಿಸಿಐಗೆ ಐಪಿಎಲ್‌ನ್ನು ಆಯೋಜಿಸುವ ಬಗ್ಗೆ ಯೋಜಿಸಲು ಅವಕಾಶ ಮಾಡಿಕೊಟ್ಟಿದೆ. ಇತ್ತೀಚಿನ ವರದಿಗಳ ಪ್ರಕಾರ, ಬಿಸಿಸಿಐ ಸೆಪ್ಟಂಬರ್ ಅಂತ್ಯದಲ್ಲಿ ಮತ್ತು ನವೆಂಬರ್ ಮಧ್ಯದ ನಡುವೆ ಐಪಿಎಲ್ ನ್ನು ಆಯೋಜಿಸುವ ಗುರಿಯನ್ನು ಹೊಂದಿದೆ ಮತ್ತು ಏಶ್ಯಕಪ್‌ನ್ನು ಈಗಾಗಲೇ ಮುಂದೂಡಲಾಗಿದೆ. ಐಪಿಎಲ್ ಟೂರ್ನಿ ಆತಿಥ್ಯ ವಹಿಸಲು ಯುಎಇ ಹೆಚ್ಚಿನ ಆಸಕ್ತಿ ವಹಿಸಿದ್ದರೂ ಐಪಿಎಲ್ ಭಾರತದಲ್ಲಿ ಉಳಿಯುವುದನ್ನು ಖಚಿತ ಪಡಿಸಿಕೊಳ್ಳುವುದು ಬಿಸಿಸಿಐ ಆದ್ಯತೆಯಾಗಿದೆ ಮತ್ತು ಅದನ್ನು ವಿದೇಶಕ್ಕೆ ಸ್ಥಳಾಂತರಿಸುವುದು ಕೊನೆಯ ಉಪಾಯ’’ಎಂದು ಸಾಹ್ನಿ ಹೇಳಿದರು.

ಪುರುಷರ ಐಸಿಸಿ ಈವೆಂಟ್‌ಗಳ ವಿವರ ಇಂತಿವೆ

► ಪುರುಷರ ಐಸಿಸಿ ಟ್ವೆಂಟಿ-20 ವಿಶ್ವಕಪ್: 2021 ಅಕ್ಟೋಬರ್ - ನವಂಬರ್ ನಲ್ಲಿ. ಫೈನಲ್ ಪಂದ್ಯ 14 ನವೆಂಬರ್ 2021.

► ಪುರುಷರ ಐಸಿಸಿ ಟ್ವೆಂಟಿ- 20 ವಿಶ್ವಕಪ್: 2022 ಅಕ್ಟೋಬರ್ - ನವಂಬರ್‌ನಲ್ಲಿ. ಫೈನಲ್ ಪಂದ್ಯ 13 ನವೆಂಬರ್ 2022.

► ಪುರುಷರ ಐಸಿಸಿ ಕ್ರಿಕೆಟ್ ವಿಶ್ವಕಪ್: ಭಾರತದಲ್ಲಿ 2023 ಅಕ್ಟೋಬರ್ - ನವಂಬರ್‌ನಲ್ಲಿ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X