Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶವಸಂಸ್ಕಾರಕ್ಕೆ ಅಡ್ಡಿ ಮಾಡದಂತೆ ರಾಮನಗರ...

ಶವಸಂಸ್ಕಾರಕ್ಕೆ ಅಡ್ಡಿ ಮಾಡದಂತೆ ರಾಮನಗರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಮನವಿ

ವಾರ್ತಾಭಾರತಿವಾರ್ತಾಭಾರತಿ20 July 2020 11:16 PM IST
share

ರಾಮನಗರ, ಜು.20: ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಮೃತಪಟ್ಟವರ ಶವ ಸಂಸ್ಕಾರಕ್ಕೆ ಅಡ್ಡಿಮಾಡದೆ ಮಾನವೀಯತೆಯಿಂದ ಅಂತಿಮ ವಿಧಿ-ವಿಧಾನಗಳನ್ನು ನೆರೆವೇರಿಸಲು ಸಹಕರಿಸುವಂತೆ ಜಿಲ್ಲೆಯ ಜನರಲ್ಲಿ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಮನವಿ ಮಾಡಿದ್ದಾರೆ.

ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟ ಯಾವುದೇ ಸಮುದಾಯದವರ ಶವಸಂಸ್ಕಾರ ಮಾಡುವುದನ್ನು ತಡೆಯಬಾರದು. ಅಂತಿಮ ವಿಧಿವಿಧಾನಗಳನ್ನು ಕುಟುಂಬಸ್ಥರ ಸಮ್ಮುಖದಲ್ಲೆ ಮತ್ತು ಇದಕ್ಕಾಗಿ ಜಿಲ್ಲಾಡಳಿತದ ವತಿಯಿಂದ ನೇಮಿಸಲಾಗಿರುವ ಅಧಿಕಾರಿಗಳ ಸಹಯೋಗದೊಂದಿಗೆ ನೆರವೇರಿಸಬೇಕು. ಮೃತ ವ್ಯಕ್ತಿಯ ಸಭ್ಯ ಶವ ಸಂಸ್ಕಾರಕ್ಕೆ ಜಿಲ್ಲೆಯ ಜನತೆ ನೆರವಾಗುವ ಮೂಲಕ ಮಾನವೀಯತೆ ಮೆರೆಯಬೇಕು ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.

ಕೊರೋನ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ನಡೆಸಲು ಸರಕಾರ ಸ್ಪಷ್ಟ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರಂತೆ ಸೋಂಕಿತ ಶವವನ್ನು ಸಂಪೂರ್ಣವಾಗಿ ಪ್ಯಾಕ್ ಮಾಡಿ ವೈರಸ್ ನಿವಾರಕ ದ್ರಾವದಲ್ಲಿ ಅದ್ದಿ ಸ್ಯಾನಿಟೈಸ್ ಮಾಡಿರುತ್ತಾರೆ. ಪ್ಯಾಕ್ ಮಾಡಿರುವ ಮೃತ ದೇಹವನ್ನು ಮತ್ತೆ ತೆರೆಯಲು ಸಾಧ್ಯವೇ ಇರುವುದಿಲ್ಲ. ಹೀಗಾಗಿ ಮೃತ ದೇಹದಿಂದ ಸೋಂಕು ಹರಡುವ ಸಾಧ್ಯತೆ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಆದರೂ ಮೃತ ದೇಹದ ಅಂತಿಮ ಸಂಸ್ಕಾರವನ್ನು ವೈದ್ಯಕೀಯ ಶಿಷ್ಟಾಚಾರದಂತೆ ನೆರವೇರಿಸಬೇಕಾಗಿರುತ್ತದೆ. ಸುರಕ್ಷಿತ ಅಂತರವನ್ನು ಕಾಯ್ದುಕೊಂಡು ಕುಟುಂಬಸ್ಥರು ಶವಸಂಸ್ಕಾರದಲ್ಲಿ ಭಾಗವಹಿಸಬಹುದು. ಇದಕ್ಕಾಗಿ ಆರೋಗ್ಯ ಇಲಾಖೆ ನಿಗದಿಪಡಿಸಿರುವ ಮಾನದಂಡಗಳನ್ನು ಅಳವಡಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಾನವೀಯತೆ ಇರಲಿ: ನಿಮ್ಮೊಂದಿಗೆ ಇರುವ ನಿಮ್ಮ ಆಪ್ತರೇ ಇಲ್ಲವೆ ಬಂಧು-ಬಳಗದವರಾಗಲಿ ಅಥವಾ ನಿಮ್ಮ ಗ್ರಾಮದ ವ್ಯಕ್ತಿಯೊಬ್ಬರು ಸೋಂಕಿನಿಂದ ನಿಧನರಾದಲ್ಲಿ ಅವರ ಶವಸಂಸ್ಕಾರಕ್ಕೆ ಅಡ್ಡಿ ಮಾಡುವುದು ಸರಿಯಲ್ಲ. ಯಾವುದೇ ದೃಷ್ಠಿಯಿಂದಲೂ ಇದನ್ನು ಒಪ್ಪಿಕೊಳ್ಳಲಾಗದು. ಮೃತರ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ನಿಮ್ಮ ನಿಮ್ಮ ಊರುಗಳಲ್ಲಿ ಅವಕಾಶ ಮಾಡಿಕೊಡುವ ಮೂಲಕ ಮಾನವೀಯತೆ ಮೆರೆಯಿರಿ ಎಂದು ಜಿಲ್ಲಾಧಿಕಾರಿ ಜನರಲ್ಲಿ ಪ್ರಾರ್ಥಿಸಿದ್ದಾರೆ.

ಭಯಬೇಡ: ಸೋಂಕಿತ ಮೃತರ ಅಂತ್ಯ ಸಂಸ್ಕಾರ ನಡೆಸಿದರೆ ಇಲ್ಲವೆ ಶವವನ್ನು ಹೂಳಿದರೆ ಅದರಿಂದ ಸೋಂಕು ಹರಡುತ್ತದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ಆರೋಗ್ಯ ಇಲಾಖೆಯು ಸೋಂಕಿತ ಶವವನ್ನು ಎಲ್ಲ ರೀತಿಯಿಂದಲೂ ಸೋಂಕು ಹರಡದಂತೆ ಸಂರಕ್ಷಿಸಿರುತ್ತಾರೆ. ಹೀಗಾಗಿ ಜನರು ಭಯಪಡುವ ಅಗತ್ಯವಿಲ್ಲ ಎಂದು ಅರ್ಚನಾ ತಿಳಿಸಿದ್ದಾರೆ.

ಶವವನ್ನು ಸುಟ್ಟರೆ ಇಲ್ಲವೆ ಹೂತರೆ ಅದರಿಂದ ಸೋಂಕು ಹರಡುವುದಿಲ್ಲ. ಜನತೆಯು ಇದನ್ನು ಅರಿತುಕೊಳ್ಳಬೇಕು. ಜಿಲ್ಲೆಯ ಜನರು ಶವಸಂಸ್ಕಾರಕ್ಕೆ ಅಡ್ಡಿಪಡಿಸದೆ ಸಹಕಾರ ನೀಡುವ ಮೂಲಕ ಅವರ ನೋವಿನ ಕ್ಷಣದಲ್ಲಿ ಹೆಗಲು ನೀಡುವಂತೆ ಜನತೆಯಲ್ಲಿ ಜಿಲ್ಲಾಧಿಕಾರಿ ಕೋರಿದ್ದಾರೆ.

ಸಭ್ಯ ಶವಸಂಸ್ಕಾರಕ್ಕೆ ಅಡ್ಡಿ ಮಾಡುವ ಇಲ್ಲವೆ ಪ್ರತಿರೋಧ ತೋರುವವರ ಮೇಲೆ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳಡಿ ದಂಡನಾತ್ಮಕವಾಗಿರುತ್ತದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಅರ್ಚನಾ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X