Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಈ ವರ್ಷ ಬ್ಯಾಲನ್ ಡಿ’ ಓರ್ ಪ್ರಶಸ್ತಿ...

ಈ ವರ್ಷ ಬ್ಯಾಲನ್ ಡಿ’ ಓರ್ ಪ್ರಶಸ್ತಿ ರದ್ದು

ಕೋವಿಡ್-19 ಬಿಕ್ಕಟ್ಟು

ವಾರ್ತಾಭಾರತಿವಾರ್ತಾಭಾರತಿ20 July 2020 11:35 PM IST
share

ಪ್ಯಾರಿಸ್, ಜು.20: ಕೊರೋನ ವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದ ಜಾಗತಿಕವಾಗಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ವರ್ಷ ಯಾವುದೇ ಆಟಗಾರನಿಗೆ ಬ್ಯಾಲನ್ ಡಿ’ಓರ್ ಟ್ರೋಫಿ ನೀಡಲಾಗುವುದಿಲ್ಲ. 1956ರ ನಂತರ ಇದೇ ಮೊದಲ ಬಾರಿಗೆ ಬ್ಯಾಲನ್ ಡಿ’ ಓರ್ ಪ್ರಶಸ್ತಿ ರದ್ದಾಗಿದೆ.

ಫ್ರಾನ್ಸ್ ಫುಟ್ಬಾಲ್ ನಿಯತಕಾಲಿಕೆಯು ನೀಡುತ್ತಿರುವ ಪ್ರಶಸ್ತಿಯನ್ನು ಮೊದಲ ಬಾರಿಗೆ 1956ರಲ್ಲಿ ಸ್ಟಾನ್ಲಿ ಮ್ಯಾಥ್ಯೂಸ್ ಪಡೆದಿದ್ದರು. ಅನಂತರ ಪ್ರತಿ ವರ್ಷ ಫುಟ್ಬಾಲ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದವರಿಗೆ ಬ್ಯಾಲನ್ ಡಿ’ಓರ್‌ನ್ನು ನೀಡಿ ಗೌರವಿಸಲಾಗುತ್ತದೆ. ಅರ್ಜೆಂಟೀನದ ಸ್ಟಾರ್ ಲಿಯೊನೆಲ್ ಮೆಸ್ಸಿ ಆರು ಬಾರಿ ಬ್ಯಾಲನ್ ಡಿ’ ಓರ್ ಪ್ರಶಸ್ತಿ ಜಯಿಸಿದ್ದಾರೆ. ಅವರ ದೀರ್ಘಕಾಲದ ಪ್ರತಿಸ್ಪರ್ಧಿ ಪೋರ್ಚುಗಲ್‌ನ ಕ್ರಿಸ್ಟಿಯಾನೊ ರೊನಾಲ್ಡೊ 5 ಬಾರಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದಿದ್ದಾರೆ.

ನಿಯತಕಾಲಿಕವು 2018ರಲ್ಲಿ ಮಹಿಳಾ ಪ್ರಶಸ್ತಿಯನ್ನು ನೀಡಲು ಪ್ರಾರಂಭಿಸಿತು, ಆದರೆ ಅದನ್ನೂ ತಡೆಹಿಡಿಯಲಾಗಿದೆ. 2020ರಲ್ಲಿ ಯಾರಿಗೂ ಬ್ಯಾಲನ್ ಡಿ’ ಓರ್ ಪ್ರಶಸ್ತಿ ನೀಡಲಾಗುವುದಿಲ್ಲ ಎಂದು ಫ್ರಾನ್ಸ್ ಫುಟ್ಬಾಲ್ ಮ್ಯಾಗಝಿನ್ ಸಂಪಾದಕ ಪ್ಯಾಸ್ಕಲ್ ಫೆರ್ಸ್‌ ಟೆಲಿಫೋನ್ ಸಂದರ್ಶನದಲ್ಲಿ ಹೇಳಿದರು.

‘‘ಸಾಂಕ್ರಾಮಿಕ ರೋಗದ ಸಮಯದಲ್ಲಿ ಆಟದ ನಿಯಮಗಳನ್ನು ಮಾರ್ಪಡಿಸಲಾಗಿರುವುದರಿಂದ, ಪ್ರಶಸ್ತಿಯ ಮೇಲೆ ಪರಿಣಾಮ ಬೀರುತ್ತದೆ. ನಿಯಮವು ಕೆಲವು ನಿಯಮಗಳೊಂದಿಗೆ ಪ್ರಾರಂಭವಾಯಿತು ಮತ್ತು ಇತರ ನಿಯಮಗಳೊಂದಿಗೆ ಕೊನೆಗೊಂಡಿತು. ಜನವರಿ ಮತ್ತು ಫೆಬ್ರವರಿಯಲ್ಲಿ, ಸಾಕರ್‌ನ್ನು ಪ್ರೇಕ್ಷಕರ ಉಪಸ್ಥಿಯಲ್ಲಿ ಆಡಲಾಯಿತು. ನಂತರ ಮೇ ಮತ್ತು ಜೂನ್‌ನಿಂದ ಅದು ಖಾಲಿ ಸ್ಟ್ಯಾಂಡ್‌ಗಳೊಂದಿಗೆ ಇತ್ತು ’’ಎಂದರು.

ಯುರೋಪಿಯನ್ ಚಾಂಪಿಯನ್‌ಶಿಪ್, ಕೋಪಾ ಅಮೆರಿಕ ಈ ವರ್ಷ ಮುಂದೂಡ ಲ್ಪಟ್ಟರೆ, ಚಾಂಪಿಯನ್ಸ್ ಲೀಗ್ ಪ್ರಶಸ್ತಿಯ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ.

ಬ್ಯಾಲನ್ ಡಿ’ಓರ್‌ನ್ನು ಕೇವಲ ಮೂರು ಪಂದ್ಯಗಳಾದ ಕ್ವಾರ್ಟರ್ ಫೈನಲ್, ಸೆಮಿಫೈನಲ್, ಫೈನಲ್ ನಿರ್ಧರಿಸಬಹುದಿತ್ತು. ಫುಟ್ಬಾಲ್‌ನ ಬಹಳಷ್ಟು ಬದಲಾವಣೆಗಳು ಸಂಪೂರ್ಣವಾಗಿ ಕಾನೂನುಬದ್ಧವಾಗಿವೆ. ಆರೋಗ್ಯ ಬಿಕ್ಕಟ್ಟು ಕಾರಣದಿಂದಾಗಿ ಎಲ್ಲಾ ಕಡೆ ಫುಟ್ಬಾಲ್ ಚಟುವಟಿಕೆಗಳು ನಡೆಯುತ್ತಿಲ್ಲ. ಆದರೆ ಇದನ್ನು ನಾವು ಒಂದು ವಿಶಿಷ್ಟ ವರ್ಷವೆಂದು ಪರಿಗಣಿಸಲು ಸಾಧ್ಯವಾಗಲಿಲ್ಲ. ಅಸಾಧಾರಣ ಸಂದರ್ಭಗಳು ಅಸಾಧಾರಣ ನಿರ್ಧಾರಕ್ಕೆ ಕಾರಣವಾಯಿತು ಎಂದರು.

21ವರ್ಷದೊಳಗಿನ ಅತ್ಯುತ್ತಮ ಆಟಗಾರನಿಗೆ ನೀಡಲಾಗುವ ಕೋಪಾ ಟ್ರೋಫಿ ಮತ್ತು ಅತ್ಯುತ್ತಮ ಗೋಲ್‌ಕೀಪರ್‌ಗೆ ನೀಡಲಾಗುವ ಲೆವ್ ಯಾಶಿನ್ ಪ್ರಶಸ್ತಿಯನ್ನೂ ಈ ವರ್ಷ ರದ್ದುಪಡಿಸಲಾಗಿದೆ ಎಂದು ಫೆರ್ಸ್‌ ಹೇಳಿದ್ದಾರೆ.

2020ರಲ್ಲಿ ಎಲ್ಲಾ ಪಂದ್ಯಗಳನ್ನು ಮುಚ್ಚಿದ ಬಾಗಿಲುಗಳ ಹಿಂದೆ ಆಡಲಾಗುತ್ತದೆ. ಈ ವರ್ಷದ ಅಂತರವನ್ನು ತುಂಬಲು, ನಿಯತಕಾಲಿಕವು ಮತ್ತೊಂದು ಟ್ರೋಫಿಯನ್ನು ರಚಿಸಿದೆ- ಫ್ರಾನ್ಸ್ ಫುಟ್ಬಾಲ್ ಡ್ರೀಮ್ ತಂಡ.

ನಿಯತಕಾಲಿಕೆಯ 180 ಮಂದಿ ತೀರ್ಪುಗಾರರು ಅಗ್ರ ಸ್ಥಾನದಲ್ಲಿರುವ ಐದು ಆಟಗಾರರ ಕಿರುಪಟ್ಟಿಯಿಂದ ಇತಿಹಾಸದ ಅತ್ಯುತ್ತಮ ತಂಡವನ್ನು ಆಯ್ಕೆ ಮಾಡುತ್ತಾರೆ. ಈ ವರ್ಷ ಮೆಸ್ಸಿ ಸಾಧನೆಯನ್ನು ಸರಿಗಟ್ಟಲು ರೊನಾಲ್ಡೊಗೆ ಸಾಧ್ಯವಾಗುವುದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X