ಅಕ್ರಮ ಕಸಾಯಿಖಾನೆಗೆ ದಾಳಿ: ಆರೋಪಿಗಳು ಪರಾರಿ; ಸೊತ್ತು ವಶ
ಮೂಡುಬಿದಿರೆ, ಜು.20: ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸರು ಸೋಮವಾರ ಬೆಳಗ್ಗೆ ಗಂಟಾಲ್ಕಟ್ಟೆ ನೀರಲ್ಕೆ ಎಂಬಲ್ಲಿ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಈ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ.
ನೀರಲ್ಕೆಯ ಆರೋಪಿ ಮನ್ಸೂರ್ ಎಂಬಾತ ತನ್ನ ಮನೆಯ ಹಿಂದೆ ಅಕ್ರಮವಾಗಿ ಕಸಾಯಿಖಾನೆ ನಿರ್ಮಿಸಿ ಅಲ್ಲಿ ಜಾನುವಾರುಗಳನ್ನು ಮಾಂಸ ಮಾಡಿ ದಂಧೆ ನಡೆಸುತ್ತಿದ್ದರು. ಈತನೊಂದಿಗೆ ಶೌಕತ್, ಮುಸ್ತಾಕ್ ಉಲಾಯಿಬೆಟ್ಟು ಮತ್ತು ಆಸಿಫ್ ಎಂಬವರು ಜೊತೆ ಸೇರಿದ್ದರು ಎನ್ನಲಾಗಿದೆ. ಕೃತ್ಯ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ದಾಳಿ ನಡೆಸಿದ್ದಾರೆ. ಪೊಲೀಸ್ ದಾಳಿ ವೇಳೆ ಸ್ಥಳದಲ್ಲಿ ಜಾನುವಾರು, ಮಾಂಸ ಮತ್ತು ಕೃತ್ಯಕ್ಕೆ ಬಳಸಿದ ಆಯುಧಗಳು ಪತ್ತೆಯಾಗಿದೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
Next Story