Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19: ದೇಶದಲ್ಲಿ 28 ಸಾವಿರ ದಾಟಿದ...

ಕೋವಿಡ್-19: ದೇಶದಲ್ಲಿ 28 ಸಾವಿರ ದಾಟಿದ ಸಾವಿನ ಸಂಖ್ಯೆ

ವಾರ್ತಾಭಾರತಿವಾರ್ತಾಭಾರತಿ21 July 2020 9:17 AM IST
share
ಕೋವಿಡ್-19: ದೇಶದಲ್ಲಿ 28 ಸಾವಿರ ದಾಟಿದ ಸಾವಿನ ಸಂಖ್ಯೆ

ಹೊಸದಿಲ್ಲಿ, ಜು21: ದೇಶದಲ್ಲಿ ಸೋಮವಾರ 593 ಮಂದಿ ಕೋವಿಡ್-19 ಸೋಂಕಿತರು ಮೃತಪಟ್ಟಿದ್ದು, ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 28 ಸಾವಿರದ ಗಡಿ ದಾಟಿದೆ. ರವಿವಾರಕ್ಕೆ ಹೋಲಿಸಿದರೆ ಸಾವಿನ ಸಂಖ್ಯೆ ಮತ್ತು ಹೊಸ ಪ್ರಕರಣಗಳ ಸೇರ್ಪಡೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ. ಸೋಮವಾರ ಒಟ್ಟು 37,009 ಮಂದಿಗೆ ಸೋಂಕು ದೃಢಪಟ್ಟಿದೆ. ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 7 ಲಕ್ಷ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ 4 ಲಕ್ಷ ದಾಟಿದೆ.

ಜುಲೈ ಮೊದಲ 20 ದಿನಗಳಲ್ಲಿ 5.7 ಲಕ್ಷ ಹೊಸ ಪ್ರಕರಣಗಳು ವರದಿಯಾಗಿವೆ. ಹಿಂದಿನ ಎಲ್ಲ ತಿಂಗಳುಗಳ ಒಟ್ಟು ಪ್ರಕರಣಗಳ ಸಂಖ್ಯೆ 5.8 ಲಕ್ಷ. ಈ ತಿಂಗಳಲ್ಲಿ ಇದುವರೆಗೆ 10,662 ಮಂದಿ ಮೃತಪಟ್ಟಿದ್ದಾರೆ.

ಕರ್ನಾಟಕ ಮತ್ತು ಆಂಧ್ರ ಪ್ರದೇಶದಲ್ಲಿ ಜುಲೈಯಲ್ಲಿ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ. ಕರ್ನಾಟಕದ ಇದುವರೆಗಿನ ಒಟ್ಟು ಪ್ರಕರಣಗಳ ಪೈಕಿ ಶೇಕಡ 76 ಹಾಗೂ ಆಂಧ್ರದ ಒಟ್ಟು ಪ್ರಕರಣಗಳಲ್ಲಿ ಶೇಕಡ 71ರಷ್ಟು ಪ್ರಕರಣಗಳು ಜುಲೈನಲ್ಲೇ ವರದಿಯಾಗಿವೆ. ಉಳಿದಂತೆ ಅಸ್ಸಾಂ (66%), ತೆಲಂಗಾಣ, ಕೇರಳ ಹಾಗೂ ಗೋವಾ (64%), ಬಿಹಾರ (62%), ಒಡಿಶಾ (59%) ಮತ್ತು ಬಂಗಾಳ (59%)ದಲ್ಲಿ ಕೂಡಾ ಜುಲೈನಲ್ಲಿ ಗರಿಷ್ಠ ಪ್ರಕರಣಗಳು ವರದಿಯಾಗಿವೆ.

ದೇಶಾದ್ಯಂತ ಒಟ್ಟು ಪ್ರಕರಣಗಳ ಪೈಕಿ ಶೇಕಡ 48ರಷ್ಟು ಪ್ರಕರಣಗಳು ಜುಲೈನಲ್ಲಿ ವರದಿಯಾಗಿವೆ. ದಿಲ್ಲಿ ಮಾತ್ರ ಪ್ರಸಕ್ತ ತಿಂಗಳು ಕೋವಿಡ್-19 ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿದ್ದು, ಒಟ್ಟು ಪ್ರಕರಣಗಳ ಪೈಕಿ ಈ ತಿಂಗಳಲ್ಲಿ ಇಲ್ಲಿ ವರದಿಯಾಗಿರುವ ಪ್ರಕರಣಗಳ ಪ್ರಮಾಣ ಶೇಕಡ 29.
ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 11,54,068ಕ್ಕೇರಿದ್ದರೆ ಸಾವಿನ ಸಂಖ್ಯೆ 28,054ಕ್ಕೇರಿದೆ.

ಗೋವಾದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಾವಿನ ಸಂಖ್ಯೆಯ ಪೈಕಿ ಶೇಕಡ 86ರಷ್ಟು ಈ ತಿಂಗಳು ಸಂಭವಿಸಿದೆ. ಉಳಿದಂತೆ ಕರ್ನಾಟಕ (82%), ಅಸ್ಸಾಂ (77%), ಆಂಧ್ರ ಪ್ರದೇಶ ಹಾಗೂ ಒಡಿಶಾ (73%)ಗಳಲ್ಲಿ ಕೂಡಾ ಈ ತಿಂಗಳು ಗರಿಷ್ಠ ಸಾವು ವರದಿಯಾಗಿದೆ. ದೇಶಾದ್ಯಂತ ಸಂಭವಿಸಿದ ಒಟ್ಟು ಕೋವಿಡ್-19 ಸಾವಿನ ಪೈಕಿ ಜುಲೈನಲ್ಲಿ ಇದುವರೆಗೆ ಶೇಕಡ 37ರಷ್ಟು ಸಾವು ಸಂಭವಿಸಿದೆ. ಗುಜರಾತ್‌ನಲ್ಲಿ ಕನಿಷ್ಠ ಎಂದರೆ ಒಟ್ಟು ಸಾವಿನ ಸಂಖ್ಯೆಯ ಪೈಕಿ ಶೇಕಡ 14ರಷ್ಟು ಮಾತ್ರ ಜುಲೈನಲ್ಲಿ ಸಂಭವಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X