Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 35 ವರ್ಷಗಳ ಹಿಂದಿನ ಕೊಲೆ ಪ್ರಕರಣ: 11...

35 ವರ್ಷಗಳ ಹಿಂದಿನ ಕೊಲೆ ಪ್ರಕರಣ: 11 ಪೊಲೀಸರ ಅಪರಾಧ ಸಾಬೀತು

ವಾರ್ತಾಭಾರತಿವಾರ್ತಾಭಾರತಿ21 July 2020 10:01 PM IST
share
35 ವರ್ಷಗಳ ಹಿಂದಿನ ಕೊಲೆ ಪ್ರಕರಣ: 11 ಪೊಲೀಸರ ಅಪರಾಧ ಸಾಬೀತು

ಜೈಪುರ , ಜು.21: ರಾಜಸ್ತಾನದಲ್ಲಿ 1985ರಲ್ಲಿ ರಾಜಕೀಯ ಕೋಲಾಹಲ ಎಬ್ಬಿಸಿ ಮುಖ್ಯಮಂತ್ರಿಯ ರಾಜೀನಾಮೆಗೆ ಕಾರಣವಾಗಿದ್ದ ರಾಜಮನೆತದ ಮುಖ್ಯಸ್ಥ ರಾಜಾ ಮಾನ್ ಸಿಂಗ್ ಕೊಲೆ ಪ್ರಕರಣದಲ್ಲಿ 11 ಪೊಲೀಸರ ಅಪರಾಧ ಸಾಬೀತಾಗಿದ್ದು ಶಿಕ್ಷೆಯ ಪ್ರಮಾಣವನ್ನು ಬುಧವಾರ ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ಘೋಷಿಸಿದೆ.

1985ರ ಫೆಬ್ರವರಿ 21ರಂದು, ರಾಜಸ್ತಾನದ ಭರತಪುರ ರಾಜಮನೆತದ ಮುಖ್ಯಸ್ಥ ರಾಜಾ ಮಾನ್ ಸಿಂಗ್‌ರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು ಇದು ರಾಜಸ್ತಾನದಲ್ಲಿ ಭಾರೀ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು ಮತ್ತು ಕಾಂಗ್ರೆಸ್ ಮುಖ್ಯಮಂತ್ರಿ ಶಿವಚರಣ್ ಮಾಥುರ್ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದರು. 1985ರ ರಾಜಸ್ತಾನ ವಿಧಾನಸಭೆ ಚುನಾವಣೆಯಲ್ಲಿ ದೀಗ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಬೃಜೇಂದ್ರ ಸಿಂಗ್ ಕಣಕ್ಕಿಳಿದಿದ್ದರೆ ರಾಜಾ ಮಾನ್‌ಸಿಂಗ್ ಪಕ್ಷೇತರ ಅಭ್ಯರ್ಥಿಯಾಗಿದ್ದರು. ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರತಪುರ ರಾಜಮನೆತದ ಧ್ವಜಕ್ಕೆ ಅವಮಾನ ಮಾಡಿದರೆಂಬ ಆಕ್ರೋಶದಲ್ಲಿ ಮಾನ್‌ಸಿಂಗ್ ಮತ್ತವರ ಬೆಂಬಲಿಗರು ಮುಖ್ಯಮಂತ್ರಿ ಮಾಥುರ್ ಮಾತಾಡಬೇಕಿದ್ದ ರ್ಯಾಲಿಗೆಂದು ಸಿದ್ಧಗೊಳಿಸಿದ್ದ ವೇದಿಕೆಯನ್ನು ಮತ್ತು ಮಾಥುರ್ ಅಲ್ಲಿಂದ ತೆರಳಲು ಸಿದ್ಧವಾಗಿಟ್ಟಿದ್ದ ಹೆಲಿಕಾಪ್ಟರ್ ಅನ್ನು ಧ್ವಂಸಗೊಳಿಸಿದ್ದರು. ಮರುದಿನ ರಾಜಾ ಮಾನ್‌ಸಿಂಗ್ ತನ್ನ ಇಬ್ಬರು ಸಹಚರರೊಂದಿಗೆ ಸ್ಥಳೀಯ ಪೊಲೀಸ್ ಠಾಣೆಗೆ ಶರಣಾಗಲು ತೆರಳಿದ್ದಾಗ ಪೊಲೀಸ್ ಉಪಅಧೀಕ್ಷಕ ಕಾನ್‌ಸಿಂಗ್ ಭಾಟಿ ನೇತೃತ್ವದಲ್ಲಿ ಪೊಲೀಸರ ತಂಡವೊಂದು ಅವರ ಮೇಲೆ ಗುಂಡು ಹಾರಿಸಿದಾಗ ಮೂವರೂ ಸ್ಥಳದಲ್ಲೇ ಮೃತರಾಗಿದ್ದರು. ಈ ಪ್ರಕರಣ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು ಮತ್ತು 2 ದಿನಗಳ ಬಳಿಕ ಮುಖ್ಯಮಂತ್ರಿ ಮಾಥುರ್ ರಾಜೀನಾಮೆ ನೀಡಿದ್ದರು. ಈ ಪ್ರಕರಣದ ತನಿಖೆಯನ್ನು ಫೆ.28ರಂದು ಸಿಬಿಐಗೆ ವಹಿಸಲಾಗಿತ್ತು. ಆರಂಭದಲ್ಲಿ ರಾಜಸ್ತಾನದ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು ಬಳಿಕ ಸುಪ್ರೀಂಕೋರ್ಟ್‌ನ ಸೂಚನೆಯಂತೆ ಉತ್ತರಪ್ರದೇಶದ ಮಥುರಾಕ್ಕೆ ವರ್ಗಾಯಿಸಲಾಗಿತ್ತು. 35 ವರ್ಷದ ವಿಚಾರಣೆ ಬಳಿಕ ಇದೀಗ ತೀರ್ಪು ಹೊರಬಿದ್ದಿದ್ದು ಡಿವೈಎಸ್ಪಿ ಕಾನ್‌ಸಿಂಗ್ ಭಟಿ ಸಹಿತ 11 ಪೊಲೀಸರನ್ನು ದೋಷಿಗಳೆಂದು ಗುರುತಿಸಲಾಗಿದೆ.

ಕಾಕತಾಳೀಯವಾಗಿ, ಈಗ ರಾಜಸ್ತಾನದ ಕಾಂಗ್ರೆಸ್ ಸರಕಾರ ಎದುರಿಸುತ್ತಿರುವ ಬಿಕ್ಕಟ್ಟಿಗೂ ಈ ಘಟನೆಗೂ ಸಂಬಂಧವಿದೆ. ಈಗಿನ ಮುಖ್ಯಮಂತ್ರಿ ವಿರುದ್ಧ ಬಂಡೆದ್ದಿರುವ 18 ಶಾಸಕರಲ್ಲಿ ಒಬ್ಬರಾಗಿರುವ ವಿಶ್ವೇಂದ್ರ ಸಿಂಗ್ ರಾಜಾ ಮಾನ್‌ಸಿಂಗ್ ಸೋದರಳಿಯನಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X