Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಯೋಜನೆಗಳ ಪ್ರಚಾರ ತಂಡದಲ್ಲಿ...

ಪ್ರಧಾನಿ ಯೋಜನೆಗಳ ಪ್ರಚಾರ ತಂಡದಲ್ಲಿ ಪೊಲೀಸ್ ಅಧಿಕಾರಿಯ ಗುಂಪು ಹತ್ಯೆ ಆರೋಪಿ!

ಕೊಲೆಯಾದ ಅಧಿಕಾರಿ ಪತ್ನಿಯ ಆಕ್ರೋಶದ ಬಳಿಕ ಕೈಬಿಟ್ಟ ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ21 July 2020 10:14 PM IST
share
ಪ್ರಧಾನಿ ಯೋಜನೆಗಳ ಪ್ರಚಾರ ತಂಡದಲ್ಲಿ ಪೊಲೀಸ್ ಅಧಿಕಾರಿಯ ಗುಂಪು ಹತ್ಯೆ ಆರೋಪಿ!

ಮೀರತ್, ಜು. 21: ಇನ್ ಸ್ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಹತ್ಯೆಗೆ ಕಾರಣವಾದ 2018ರ ಬುಲಂದ್ಶಹರ್ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶಿಖರ್ ಅಗರ್ವಾಲ್ ನನ್ನು ಪ್ರಧಾನ ಮಂತ್ರಿ ಕಲ್ಯಾಣ ಕಾರ್ಯಕ್ರಮಗಳ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಇಲಾಖೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಶನಿವಾರ ವಜಾಗೊಳಿಸಲಾಗಿದೆ. 

ಜುಲೈ 14ರಂದು ನಡೆದ ಕಾರ್ಯಕ್ರಮದಲ್ಲಿ ಬುಲಂದ್ ಶಹರ್ನ ಬಿಜೆಪಿ ಅಧ್ಯಕ್ಷ ಅನಿಲ್ ಸಿಸೋಡಿಯಾ ಅವರು ಶಿಖರ್ ಅಗರ್ವಾಲ್ ನನ್ನು ಸನ್ಮಾನಿಸುತ್ತಿರುವ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು ಹಾಗೂ ವಿವಾದಕ್ಕೆ ಒಳಗಾಗಿತ್ತು. ಮೃತ ಪೊಲೀಸ್ ಅಧಿಕಾರಿ ಸಿಂಗ್ ಅವರ ಪತ್ನಿ ಈ ಕುರಿತು ವೀಡಿಯೊಂದರಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿಯವರು ಟ್ವೀಟ್ ಮಾಡಿದ್ದರು. ಅನಂತರ ಪ್ರಧಾನ ಮಂತ್ರಿ ಜನಕಲ್ಯಾಣಕಾರಿ ಯೋಜನ ಜಾಗೃತ ಅಭಿಯಾನ (ಪಿಎಂಜೆವೈಜೆಎ)ದ ಸ್ಥಳೀಯ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಶಿಖರ್ ಅಗರ್ವಾಲ್ ನನ್ನು ವಜಾಗೊಳಿಸಲಾಗಿದೆ. 

ಇನ್ ಸ್ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರು ಗುಂಪಿನಿಂದ ದಾಳಿಗೊಳಗಾದ 2018ರ ಬುಲಂದ್ ಶಹರ್ ಹಿಂಸಾಚಾರ ಪ್ರಕರಣದಲ್ಲಿ ಶಿಖರ್ ಅಗರ್ವಾಲ್ ಹಾಗೂ ಇತರ ಐದು ಮಂದಿ ಆರೋಪಿಗಳು. ಗೋಹತ್ಯೆಯ ವದಂತಿ ಹಿನ್ನೆಲೆಯಲ್ಲಿ ಉದ್ಭವಿಸಿದ ಹಿಂಸಾಚಾರದ ಬಳಿಕ ಶಾಂತಿ ಸುವ್ಯವಸ್ಥೆ ಕಾಪಾಡಲು ಬುಲಂದ್ ಶಹರ್ ಗೆ ಸುಬೋಧ್ ಯಾದವ್ ತೆರಳಿದ್ದರು. ಪ್ರಕರಣದ ಆರೋಪಿಯಾಗಿರುವ ಶಿಖಾರ್ ಅಗರ್ವಾಲ್ ಈಗ ಜಾಮೀನಲ್ಲಿ ಇದ್ದಾನೆ. 

‘‘ಇನ್ ಸ್ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಹತ್ಯೆಯಾಗಿರುವ ಹಿಂಸಾಚಾರ ಪ್ರಕರಣದಲ್ಲಿ ಶಿಖರ್ ಅಗರ್ವಾಲ್ ಆರೋಪಿ ಎಂಬುದು ನನಗೆ ಮಾಧ್ಯಮದ ಮೂಲಕ ತಿಳಿಯಿತು. ಸಂಸ್ಥೆಯ ಹಿರಿಯ ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಯಿತು ಹಾಗೂ ಶಿಖರ್ ಅಗರ್ವಾಲ್ ನನ್ನು ವಜಾಗೊಳಿಸಲಾಯಿತು’’ ಎಂದು ಬುಲಂದ್ಶಹರ್ನ ಪ್ರಧಾನ ಮಂತ್ರಿ ಜನಕಲ್ಯಾಣಕಾರಿ ಯೋಜನ ಜಾಗೃತ ಅಭಿಯಾನದ ಜಿಲ್ಲಾಧ್ಯಕ್ಷ ಪ್ರಿಯತಮ್ ಕುಮಾರ್ ಪ್ರೇಮ್ ಅವರು ಹೇಳಿದ್ದಾರೆ. ಬಿಜೆಪಿಯ ಬುಲಂದ್ಶಹರ್ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಸಿಸೋಡಿಯಾ ಕೂಡ ಮುಖ್ಯ ಅತಿಥಿಯಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆದರೆ, ಬಿಜೆಪಿಯೊಂದಿಗೆ ಪಿಎಂಜೆವೈಜೆಎಗೆ ಯಾವುದೇ ಸಂಬಂಧ ಇಲ್ಲ ಎಂದು ಪ್ರೇಮ್ ಹೇಳಿದ್ದಾರೆ. 

ಶಿಖರ್ ಅಗರ್ವಾಲ್ ನನ್ನು ನಿಯೋಜಿಸಿರುವ ಬಗ್ಗೆ ತೀವ್ರ ಟೀಕೆ ವ್ಯಕ್ತವಾದ ಬಳಿಕ ಬಿಜೆಪಿಯ ಇತರ ನಾಯಕರು ಕೂಡ ಶಿಖರ್ ಅವರ್ವಾಲ್ ನಿಂದ ಅಂತರ ಕಾಯ್ದುಕೊಂಡಿದ್ದಾರೆ. ಆದರೆ, ಬಿಜೆಪಿಯ ಬುಲಂದ್ಶಹರ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಂಜಯ್ ಗುರ್ಜರ್ ಅವರು ಅಧ್ಯಕ್ಷ ಅನಿಲ್ ಸಿಸೋಡಿಯಾ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಅಲ್ಲದೆ, ಪಿಎಂಜೆವೈಜೆಎ ಸರಕಾರೇತರ ಸಂಸ್ಥೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಅನಿಲ್ ಸಿಸೋಡಿಯಾ ಹಾಗೂ ಬಿಜೆಪಿ ಇದರೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ, ಬಿಜೆಪಿ ನಾಯಕರ ಪ್ರತಿಪಾದನೆಯನ್ನು ಪಿಎಂಜೆವೈಜೆಎಯ ಸಲಹಾ ಸಮಿತಿಯಲ್ಲಿರುವ ಸದಸ್ಯರ ಹೆಸರು ಹುಸಿಗೊಳಿಸಿದೆ. ಸಮಿತಿ ಶ್ಯಾಮ್ ಜಾಜು, ರಮೇಶ್ ಪೋಖ್ರಿಯಾಲ್, ನಿಶಾಂಕ್, ನರೇಂದ್ರ ಥೋಮರ್, ಗಿರಿರಾಜ್ ಸಿಂಗ್, ಧರ್ಮೇಂದ್ರ ಪ್ರಧಾನ್ರಂತಹ ಸಚಿವರು ಹಾಗೂ ಬಿಜೆಪಿಯ ಹಿರಿಯ ನಾಯಕರನ್ನು ಸದಸ್ಯರನ್ನಾಗಿ ಒಳಗೊಂಡಿರುವುದು ಬಿಜೆಪಿ ಪ್ರತಿಪಾದನೆ ಸುಳ್ಳು ಎನ್ನುವುದಕ್ಕೆ ಸಾಕ್ಷಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X