Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನ ಪಾದರಾಯನಪುರದಲ್ಲಿ 10...

ಬೆಂಗಳೂರಿನ ಪಾದರಾಯನಪುರದಲ್ಲಿ 10 ದಿನಗಳಿಂದ ಹೊಸ ಕೋವಿಡ್ ಪ್ರಕರಣವಿಲ್ಲ

ರಾಜ್ಯದಲ್ಲಿ ಮೊದಲು ಸೀಲ್‍ಡೌನ್ ಆಗಿದ್ದ ವಾರ್ಡ್

ವಾರ್ತಾಭಾರತಿವಾರ್ತಾಭಾರತಿ21 July 2020 10:30 PM IST
share
ಬೆಂಗಳೂರಿನ ಪಾದರಾಯನಪುರದಲ್ಲಿ 10 ದಿನಗಳಿಂದ ಹೊಸ ಕೋವಿಡ್ ಪ್ರಕರಣವಿಲ್ಲ

ಬೆಂಗಳೂರು, ಜು.21: ಕೋವಿಡ್-19 ಸೋಂಕು ಸಂಬಂಧ ರಾಜ್ಯದಲ್ಲೇ ಮೊದಲ ಬಾರಿಗೆ ಸೀಲ್‍ಡೌನ್ ಆಗಿ ತೀವ್ರ ಚರ್ಚೆಯಲ್ಲಿದ್ದ ಬೆಂಗಳೂರಿನ ಪಾದರಾಯನಪುರ ಪ್ರದೇಶದಲ್ಲಿ ಕಳೆದ ಹತ್ತು ದಿನಗಳಿಂದ ಹೊಸ ಕೊರೋನ ಸೋಂಕಿನ ಪ್ರಕರಣಗಳು ಬೆಳಕಿಗೆ ಬಂದಿಲ್ಲ.

ಲಾಕ್‍ಡೌನ್ ಆರಂಭದ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಹಾಟ್‍ಸ್ಪಾಟ್ ಎಂದೇ ಗುರಿಯಾಗಿದ್ದ ಈ ಪಾದರಾಯನಪುರ ವಾರ್ಡಿನಲ್ಲಿ 21,578 ಜನಸಂಖ್ಯೆಯಿದ್ದು, ಎಪ್ರಿಲ್ 9ರಿಂದ ಸೀಲ್‍ಡೌನ್ ಮಾಡಲಾಗಿತ್ತು. ತದನಂತರ, ಎಪ್ರಿಲ್ 19ರಂದು ಕಂಟೈನ್‍ಮೆಂಟ್ ವಲಯ ಎಂದು ಗುರುತಿಸಲಾಗಿತ್ತು. ಇದಾದ ಬಳಿಕ ಜೂ.21ರಿಂದ ಕಂಟೈನ್‍ಮೆಂಟ್ ವಲಯದ ವ್ಯಾಪ್ತಿಯಿಂದ ಈ ವಾರ್ಡ್ ಮುಕ್ತಗೊಂಡಿದೆ. ಈ ವಾರ್ಡ್ ನಲ್ಲಿ ಪ್ರಕರಣಗಳ ಗಣನೀಯವಾಗಿ ಇಳಿಮುಖವಾಗಿದೆ. 10 ದಿನಗಳಿಂದ ಇಲ್ಲಿ ಒಂದೇ ಒಂದು ಕೋವಿಡ್ ಪ್ರಕರಣ ವರದಿಯಾಗಿಲ್ಲ. ಅಷ್ಟೇ ಅಲ್ಲದೆ, ಪಾದರಾಯನಪುರ ವಾರ್ಡ್ ನಲ್ಲಿ ಸೋಂಕು ಬಹುತೇಕ ನಿಯಂತ್ರಣಕ್ಕೆ ಬಂದಿದೆ ಎನ್ನುತ್ತಾರೆ ಸ್ಥಳೀಯ ಆರೋಗ್ಯಾಧಿಕಾರಿಗಳು.

ರಾಜ್ಯದಲ್ಲಿ ಮೊದಲು ಸೀಲ್‍ಡೌನ್ ಆಗಿದ್ದ ವಾರ್ಡ್ ಪಾದರಾಯನಪುರ. ಇಲ್ಲಿನ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಅವರಿಗೂ ಸೋಂಕು ತಗುಲಿತ್ತು. ಚಿಕಿತ್ಸೆ ಪಡೆದು ಅವರು ಗುಣಮುಖರಾದರು. ಇಡೀ ವಾರ್ಡ್ ಅನ್ನು ಕಂಟೈನ್‍ಮೆಂಟ್ ಪ್ರದೇಶ ಎಂದು ಘೋಷಿಸಿ ಬಿಬಿಎಂಪಿ ನಿರ್ವಹಣೆ ಮಾಡಿತ್ತು.

ಎಷ್ಟು ಪ್ರಕರಣ?: ಒಟ್ಟು 90 ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಶೇ.98ರಷ್ಟು ಮಂದಿ ಗುಣಮುಖರಾಗಿದ್ದಾರೆ. ವಾರಕ್ಕೆ ಒಂದು ಅಥವಾ ಎರಡು ಪ್ರಕರಣ ವರದಿಯಾಗುತ್ತಿತ್ತು. ಕಳೆದ ವಾರದಿಂದ ಅದೂ ಇಲ್ಲ ಎಂದು ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದರು.

'ಅಪಪ್ರಚಾರ ಮಾಡಿದರು'

ಆರಂಭ ದಿನಗಳಲ್ಲಿ ಪಾದರಾಯನಪುರ ವಾರ್ಡ್ ಅನ್ನು ಗುರಿಯಾಗಿಸಿಕೊಂಡು ಅಪಪ್ರಚಾರ ಮಾಡಿದರು. ಇದರ ಪರಿಣಾಮ ಸ್ಥಳೀಯರ ದಿನಗೂಲಿ ಕಾರ್ಮಿಕರು ಸೇರಿದಂತೆ ತೊಂದರೆ ಎದುರಿಸಿದರು. ಇದೀಗ ಬೆಂಗಳೂರಿನಲ್ಲಿ ಈಗ ಹೆಚ್ಚಾಗುತ್ತಿರುವ ಕೋವಿಡ್ ಪ್ರಕರಣಗಳಿಗೆ ಯಾರನ್ನು ದೂರುತ್ತಾರೆ. ಸಾಂಕ್ರಾಮಿಕ ರೋಗದ ವಿಷಯದಲ್ಲಿ ಒಂದು ಸಮುದಾಯವನ್ನು ಯಾರೊಬ್ಬರೂ ಗುರಿ ಮಾಡಬಾರದು.

-ಮುಹಮ್ಮದ್ ಶಫಿ, ಪಾದರಾಯನಪುರ ನಿವಾಸಿ

ಆಶಾ ಕಾರ್ಯಕರ್ತರು, ಆರೋಗ್ಯ ಸಹಾಯಕಿಯರು, ವೈದ್ಯರು ಹಾಗೂ ಅಧಿಕಾರಿಗಳೆಲ್ಲರ ಶ್ರಮದಿಂದಾಗಿ ಈ ವಾರ್ಡ್ ನಲ್ಲಿ ಸೋಂಕು ನಿಯಂತ್ರಣ ಸಾಧ್ಯವಾಗಿದೆ. ಅವರೆಲ್ಲ ಧೃತಿಗೆಡದೇ ಕಾರ್ಯನಿರ್ವಹಿಸಿದ್ದಾರೆ. ಕಳೆದ 10 ದಿನಗಳಿಂದ ಪಾದರಾಯನಪುರ ವಾರ್ಡ್ ನಲ್ಲಿ ಕೋವಿಡ್ ಪ್ರಕರಣ ವರದಿಯಾಗಿಲ್ಲ. ಅಲ್ಲಿನ ಜನರು ಸುರಕ್ಷಿತವಾಗಿದ್ದಾರೆ.

-ಡಾ.ಮನೋರಂಜನ್ ಹೆಗ್ಡೆ, ಆರೋಗ್ಯಾಧಿಕಾರಿ, ಬಿಬಿಎಂಪಿ ದಕ್ಷಿಣ ವಲಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X