Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವಿಡ್ ನಿರ್ವಹಣೆ ಪಡೆಯ ‘ಆರೋಗ್ಯ ಹಸ್ತ’...

ಕೋವಿಡ್ ನಿರ್ವಹಣೆ ಪಡೆಯ ‘ಆರೋಗ್ಯ ಹಸ್ತ’ ತರಬೇತಿ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ21 July 2020 11:26 PM IST
share
ಕೋವಿಡ್ ನಿರ್ವಹಣೆ ಪಡೆಯ ‘ಆರೋಗ್ಯ ಹಸ್ತ’ ತರಬೇತಿ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಚಾಲನೆ

ಬೆಂಗಳೂರು, ಜು.21: ಕೆಪಿಸಿಸಿ ವೈದ್ಯ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಕೋವಿಡ್ ನಿರ್ವಹಣೆ ಪಡೆಯ ‘ಆರೋಗ್ಯ ಹಸ್ತ’ ತರಬೇತಿ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.

ಮಂಗಳವಾರ ನಗರದ ಕೋರಮಂಗಲದಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರೋಗ್ಯ ಹಸ್ತ ಪ್ರಾಯೋಗಿಕ ಕಾರ್ಯಕ್ರಮವನ್ನು ಈ ಕ್ಷೇತ್ರದಿಂದ ಆರಂಭಿಸುತ್ತಿದ್ದು, ಮುಂದಿನ ಕೆಲವು ದಿನ ಈ ತರಬೇತಿ ಕಾರ್ಯಕ್ರಮವನ್ನು ಬೇರೆ ಬೇರೆ ಕಡೆ ಹಮ್ಮಿಕೊಳ್ಳುತ್ತೇವೆ ಎಂದರು.

ಮುಂದಿನ ನಾಲ್ಕೈದು ದಿನಗಳಲ್ಲಿ ಈ ತರಬೇತಿ ಕಾರ್ಯಕ್ರಮ ಮುಗಿದ ನಂತರ ಎಲ್ಲ ಪಂಚಾಯತ್ ಗಳಿಗೂ ಹೋಗಿ ಅಲ್ಲಿ ಪ್ರಾಥಮಿಕ ತಪಾಸಣೆ ನಡೆಸಲು ಎಲ್ಲ ತಾಲ್ಲೂಕು ಹಾಗೂ ಬ್ಲಾಕ್ ಮಟ್ಟದವರ ಜತೆ ನಿನ್ನೆ ಮಾತನಾಡಿದ್ದೇನೆ. ಈ ತಪಾಸಣೆ ವೇಳೆ ನಾವು ಯಾವುದೇ ಔಷಧ ನೀಡುವುದಿಲ್ಲ. ಥರ್ಮಲ್ ಮೀಟರ್ ಹಾಗೂ ಆಕ್ಸಿಜನ್ ಮೀಟರ್ ಮೂಲಕ ಅವರ ಆರೋಗ್ಯ ತಪಾಸಣೆ ಮಾಡುವುದು. ಅವರಲ್ಲಿ ಧೈರ್ಯ ತುಂಬುವ ಕೆಲಸ ಇದಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಒಂದು ವೇಳೆ ಯಾರಲ್ಲಾದರೂ ಉಷ್ಣಾಂಶ ಹೆಚ್ಚಾಗಿದ್ದರೆ ಅಥವಾ ಆಕ್ಸಿಜನ್ ಪ್ರಮಾಣ ಕಡಿಮೆ ಇದ್ದರೆ, ನಮ್ಮ ವೈದ್ಯರನ್ನು ಸಂಪರ್ಕಿಸಿ ಅವರಿಗೆ ಅಗತ್ಯ ಮಾರ್ಗದರ್ಶನ ನೀಡಲಾಗುವುದು. ಯಾರಿಗಾದರೂ ಅಗತ್ಯವಿದ್ದರೆ ಅವರಿಗೆ ಪರೀಕ್ಷೆ ಮಾಡಿಸಲು ಸಲಹೆ ನೀಡಲಾಗುವುದು. ಈ ಕಾರ್ಯಕ್ರಮದ ಮೂಲಕ ಜನರೊಂದಿಗೆ ಸಂಪರ್ಕ ಹೊಂದಲು ಇದು ವೇದಿಕೆಯಾಗಲಿದೆ ಎಂದು ಶಿವಕುಮಾರ್ ಹೇಳೀದರು.

ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವ ಕಾರ್ಯಕರ್ತರಿಗೆ ಅಗತ್ಯ ಸುರಕ್ಷತಾ ಸಲಕರಣೆ ನೀಡಲಾಗುತ್ತಿದೆ. ಜತೆಗೆ ಅವರಿಗೆ ವಿಮೆಯನ್ನು ಮಾಡಿಸಲಾಗುತ್ತಿದೆ. ಇದೊಂದು ದೊಡ್ಡ ಮಟ್ಟದ ಸೇವೆಯಾಗಿದ್ದು, ನಿಮ್ಮ ಮುಂದಿನ ತಲೆಮಾರುಗಳು ನಿಮ್ಮ ಈ ಸೇವೆಯಿಂದ ಹೆಮ್ಮೆಪಡಲಿದೆ. ಸ್ವಾತಂತ್ರ್ಯ ಹೋರಾಟಗಾರರು ಸ್ವಾತಂತ್ರ್ಯಕ್ಕಾಗಿ ಹೇಗೆ ಹೋರಾಟ ಮಾಡಿದ್ದರೋ ಅದೇ ಮಾದರಿಯಲ್ಲಿ ಆರೋಗ್ಯಕ್ಕಾಗಿ ನಮ್ಮ ಹೋರಾಟ ನಡೆಯಲಿದೆ ಎಂದು ಅವರು ತಿಳಿಸಿದರು.

ನೀವು ಜನರ ಬಳಿ ಹೋದಾಗ ಅವರ ಪ್ರೀತಿ, ಕೋಪ ಎಲ್ಲವೂ ಗೊತ್ತಾಗುತ್ತದೆ. ನೀವು ಕಾರ್ಯಕರ್ತರಾಗಿದ್ದು, ಅವರ ಭಾವನೆ ಅರ್ಥ ಮಾಡಿಕೊಳ್ಳುವ ಶಕ್ತಿ ಇದೆ. ಎಲ್ಲೆಲ್ಲಿ ಪ್ರೀತಿ ಇದೆ, ಎಲ್ಲೆಲ್ಲಿ ಕೋಪವಿದೆ ಎಂದು ತಿಳಿದು ನಾವು ಮುಂದಿನ ದಿನಗಳಲ್ಲಿ ಸರಿ ಮಾಡಿಕೊಳ್ಳೋಣ ಎಂದು ಶಿವಕುಮಾರ್ ಕರೆ ನೀಡಿದರು.

ಕಾಂಗ್ರೆಸ್ ಕೇವಲ ಅಧಿಕಾರವಲ್ಲ, ಇದೊಂದು ಆಂದೋಲನ, ಹೋರಾಟ. ಜನರ ಮಧ್ಯೆ ಬೆರೆತು, ಅವರ ಭಾವನೆ ಅರಿತು, ಜನರ ಸಂಕಟಕ್ಕೆ ಪರಿಹಾರ ಕಲ್ಪಿಸಿಕೊಡುವ ರಾಷ್ಟ್ರೀಯ ಪಕ್ಷ. ಆ ಪಕ್ಷದ ಸದಸ್ಯರಾಗಿರುವುದೇ ನಿಮ್ಮ ನಮ್ಮೆಲ್ಲರ ಭಾಗ್ಯ ಎಂದು ಶಿವಕುಮಾರ್ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಶಾಸಕಿ ಸೌಮ್ಯ ರೆಡ್ಡಿ, ಎಚ್.ಎನ್ ರವೀಂದ್ರ, ಕೆಪಿಸಿಸಿ ವೈದ್ಯ ಘಟಕದ ಸಚೇತಕ ಡಾ.ಮಧುಸೂದನ್, ಡಾ.ರಾಘವೇಂದ್ರ, ಡಾ.ಸಂಗಮೇಶ್ ಕೊಳ್ಳಿಯವರ್, ಡಾ.ಶ್ರೀನಿವಾಸ, ಡಾ.ದೀಪ್ತಿ, ಡಾ.ರಾಜೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X