Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಫ್ಘಾನಿಸ್ತಾನ: ಹೆತ್ತವರನ್ನು ಕೊಂದ...

ಅಫ್ಘಾನಿಸ್ತಾನ: ಹೆತ್ತವರನ್ನು ಕೊಂದ ತಾಲಿಬಾನಿಗಳನ್ನು ಹತ್ಯೆಗೈದ ಬಾಲಕಿ

ವಾರ್ತಾಭಾರತಿವಾರ್ತಾಭಾರತಿ21 July 2020 11:45 PM IST
share

ಘಝನಿ (ಅಫ್ಘಾನಿಸ್ತಾನ), ಜು. 21: ಕಳೆದ ವಾರ ತಾಲಿಬಾನ್ ಭಯೋತ್ಪಾದಕರು ತನ್ನ ಕಣ್ಣೆದುರೇ ತಂದೆ-ತಾಯಿಯರನ್ನು ಹತ್ಯೆಗೈದಾಗ ಆಕ್ರೋಶಗೊಂಡ ಓರ್ವ ಬಾಲಕಿಯು ಇಬ್ಬರು ಭಯೋತ್ಪಾದಕರನ್ನು ಗುಂಡಿಟ್ಟು ಕೊಂದಿದ್ದು, ಹಾಗೂ ಹಲವರನ್ನು ಗಾಯಗೊಳಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ndtv.com ವರದಿ ಮಾಡಿದೆ.

ಸರಕಾರವನ್ನು ಬೆಂಬಲಿಸುತ್ತಿದ್ದ ಘೋರ್ ಪ್ರಾಂತದ ಗ್ರಾಮವೊಂದರ ಮುಖ್ಯಸ್ಥನನ್ನು ಹುಡುಕುತ್ತಾ ತಾಲಿಬಾನ್ ಭಯೋತ್ಪಾದಕರು ಬಾಲಕಿ ಕಮರ್ ಗುಲ್‌ರ ಮನೆಯನ್ನು ಹೊಕ್ಕರು. ಭಯೋತ್ಪಾದಕರು ಬಾಲಕಿಯ ತಂದೆಯನ್ನು ಹೊರಗೆ ಎಳೆದುಕೊಂಡು ಹೋದಾಗ ಅವರ ಪತ್ನಿ ತಡೆದರು. ಆಗ ಇಬ್ಬರನ್ನೂ ಹೊರಗೆ ಎಳೆದುಕೊಂಡು ಹೋದ ಭಯೋತ್ಪಾದಕರು ಮನೆಯ ಹೊರಗೆ ಇಬ್ಬರನ್ನೂ ಗುಂಡಿಟ್ಟು ಕೊಂದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

‘‘ಆಗ ಮನೆಯೊಳಗೆ ಇದ್ದ ಕಮರ್ ಗುಲ್ ಆಕ್ರೋಶಗೊಂಡು ಮನೆಯಲ್ಲೇ ಇದ್ದ ಕುಟುಂಬಕ್ಕೆ ಸೇರಿದ ಎಕೆ-47 ರೈಫಲನ್ನು ಹಿಡಿದುಕೊಂಡು ತನ್ನ ಹೆತ್ತವರನ್ನು ಕೊಂದ ಇಬ್ಬರು ಭಯೋತ್ಪಾದಕರನ್ನು ಕೊಂದರು ಹಾಗೂ ಇತರ ಹಲವಾರು ಭಯೋತ್ಪಾದಕರನ್ನು ಗಾಯಗೊಳಿಸಿದರು’’ ಎಂದು ಅವರು ನುಡಿದರು.

ಬಾಲಕಿಗೆ 14ರಿಂದ 16 ವರ್ಷ ವಯಸ್ಸಾಗಿರಬಹುದು ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಬಳಿಕ ಬಾಲಕಿಯ ಮನೆಯ ಮೇಲೆ ದಾಳಿ ನಡೆಸಲು ಇತರ ಹಲವಾರು ತಾಲಿಬಾನ್ ಭಯೋತ್ಪಾದಕರು ಧಾವಿಸಿದರು. ಆದರೆ, ಕೆಲವು ಗ್ರಾಮಸ್ಥರು ಮತ್ತು ಸರಕಾರಿ ಪರ ಬಾಡಿಗೆ ಹೋರಾಟಗಾರರು ಗುಂಡಿನ ಕಾಳಗದಲ್ಲಿ ಅವರನ್ನು ಹಿಮ್ಮೆಟ್ಟಿಸಿದರು. ಬಳಿಕ, ಗುಲ್ ಮತ್ತು ಆಕೆಯ ತಮ್ಮನನ್ನು ಅಫ್ಘಾನ್ ಸೈನಿಕರು ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಬಾಲಕಿಯ ಶೌರ್ಯಕ್ಕೆ ಪ್ರಶಂಸೆಯ ಮಹಾಪೂರವೇ ಹರಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X