ಕಡಬ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ
ಕಡಬ, ಜು.22. ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಎಂಬಲ್ಲಿ ಬುಧವಾರ ನಡೆದಿದೆ.
ಆಲಂಕಾರು ಗ್ರಾಮದ ಶರವೂರು ಸಮೀಪದ ಪಾಂಜೋಡಿ ಕಾಲನಿ ನಿವಾಸಿ ಕರಿಯ ಎಂಬವರ ಪುತ್ರಿ ಸಂಧ್ಯಾ (22) ಆತ್ಮಹತ್ಯೆ ಮಾಡಿಕೊಂಡವರು. ಈಕೆ ಬುಧವಾರ ಬೆಳಗ್ಗೆ ಮನೆಯ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಆತ್ಮಹತ್ಯೆ ಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಈ ಬಗ್ಗೆ ಕಡಬ ಪೊಲೀಸರಿಗೆ ಯುವತಿಯ ಮನೆಯವರು ದೂರು ನೀಡಿದ್ದಾರೆ.
Next Story