Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಭೂ ಮಾಲಕನಿಂದ ದಲಿತರ...

ಚಿಕ್ಕಮಗಳೂರು: ಭೂ ಮಾಲಕನಿಂದ ದಲಿತರ ಗುಡಿಸಲು ತೆರವು, ಸ್ಮಶಾನ ಜಾಗ ಒತ್ತುವರಿ; ಆರೋಪ

ಕಾನೂನು ಕ್ರಮಕ್ಕೆ ಕಿಕ್ಕೆರೆ ಗ್ರಾಮಸ್ಥರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ22 July 2020 10:50 PM IST
share
ಚಿಕ್ಕಮಗಳೂರು: ಭೂ ಮಾಲಕನಿಂದ ದಲಿತರ ಗುಡಿಸಲು ತೆರವು, ಸ್ಮಶಾನ ಜಾಗ ಒತ್ತುವರಿ; ಆರೋಪ

ಚಿಕ್ಕಮಗಳೂರು, ಜು.22: ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಕ್ಕೆರೆ ಗ್ರಾಮದಲ್ಲಿ ಭೂ ಮಾಲಕನೋರ್ವ ಸರಕಾರಿ ಜಾಗದಲ್ಲಿ ದಲಿತ ಕುಟುಂಬಗಳು ನಿರ್ಮಿಸಿದ್ದ ಗುಡಿಸಲುಗಳನ್ನು ನಾಶ ಮಾಡಿದ್ದಾರೆ. ಅಲ್ಲದೇ ದಲಿತರಿಗೆ ಸೇರಿರುವ ಸ್ಮಶಾನ ಭೂಮಿಯನ್ನು ಒತ್ತುವರಿ ಮಾಡಿ ದೌರ್ಜನ್ಯ ನಡೆಸುತ್ತಿದ್ದಾರೆಂದು ಆರೋಪಿಸಿ ಭೂಮಿ ಮತ್ತು ವಸತಿ ಹಕ್ಕು ಹೋರಾಟ ಸಮಿತಿ ವತಿಯಿಂದ ಬುಧವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದು, ಜಿಲ್ಲಾಡಳಿತ ದಲಿತರಿಗೆ ನ್ಯಾಯ ಒದಗಿಸುವುದರೊಂದಿಗೆ ಭೂಮಾಲಕನ ದೌರ್ಜನ್ಯದ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಬುಧವಾರ ಭೂಮಿ ಮತ್ತು ವಸತಿ ಹಕ್ಕು ಹೋರಾಟ ಸಮಿತಿ ಮುಖಂಡ ಕೌಳಿ ರಾಮು ನೇತೃತ್ವದಲ್ಲಿ ಭೂಮಾಲಕನ ದೌರ್ಜನ್ಯದ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೊಂದ ಗ್ರಾಮಸ್ಥರು, ಶೃಂಗೇರಿ ತಾಲೂಕು ಕಿಕ್ಕರೆ ಗ್ರಾಮದ ಸರ್ವೇ ನಂ.156ರಲ್ಲಿ ಸುಮಾರು 10ಕ್ಕೂ ಹೆಚ್ಚು ದಲಿತ ಕುಟುಂಬಗಳು ವಾಸಿಸುತ್ತಿದ್ದು, ಎರಡು ಎಕರೆ ಸ್ಮಶಾನಕ್ಕಾಗಿ ಅರ್ಜಿ ಸಲ್ಲಿಸಲಾಗಿದೆ. ಈಗಾಗಲೇ ಸರಕಾರ ಒಂದು ಎಕರೆ ಜಾಗ ನಿವೇಶನಕ್ಕಾಗಿ ಮಂಜೂರು ಮಾಡಿದೆ. ಆದರೆ, ಗ್ರಾಮದ ಭೂ ಮಾಲಕ ರಮೇಶ್ ಗೌಡ ಎಂಬಾತ ಇತ್ತೀಚೆಗೆ ರಾತ್ರೋರಾತ್ರಿ ಬೆದರಿಕೆ ಹಾಕಿ ದಲಿತರ ಸ್ಮಶಾನ ಜಾಗ ಒತ್ತುವರಿ ಮಾಡಿರುವುದಲ್ಲದೇ ಸರಕಾರಿ ಜಾಗದಲ್ಲಿ ಐದು ಕುಟುಂಬಗಳು ನಿರ್ಮಿಸಿದ್ದ ಗುಡಿಸಲುಗಳನ್ನು ನಾಶಪಡಿಸಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದಾರೆಂದು ಆರೋಪಿಸಿದರು.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರೂ ಅಧಿಕಾರಿಗಳು ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ, ಜಿಲ್ಲಾಡಳಿತ ತಕ್ಷಣ ದಲಿತರ ಮೇಲೆ ದೌರ್ಜನ್ಯ ನಡೆಸಿದವರ ಮೇಲೆ ದಲಿತ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಭೂ ಒತ್ತುವರಿ ಮಾಡಿರುವರ ಮೇಲೆ ಭೂಕಬಳಿಕೆ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಸ್ಮಶಾನ ಭೂಮಿ ಹಾಗೂ ನಿವೇಶನಕ್ಕೆ ಮಂಜೂರಾಗಿರುವ ಭೂಮಿಯನ್ನು ಬಿಡಿಸಿಕೊಡಬೇಕೆಂದು ಆಗ್ರಹಿಸಿದರು.

ದೌರ್ಜನ್ಯ ನಡೆಸುತ್ತಿರುವರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಭೂಮಿ ಮತ್ತು ವಸತಿ ಹೋರಾಟ ಸಮಿತಿ ವತಿಯಿಂದ ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿಯನ್ನೂ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ, ಜೀವಿತ, ಶಂಕರ, ಕುಮಾರ್, ಸವಿತಾ, ಪ್ರತಿಮಾ, ಆನಂದ, ವೆಂಕಟೇಶ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X