Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಅಂತರ ಜಿಲ್ಲಾ ಬಸ್ ಸೇವೆ ಆರಂಭ;...

ಉಡುಪಿ: ಅಂತರ ಜಿಲ್ಲಾ ಬಸ್ ಸೇವೆ ಆರಂಭ; ಪ್ರಯಾಣಿಕರದ್ದೇ ಕೊರತೆ

ವಾರ್ತಾಭಾರತಿವಾರ್ತಾಭಾರತಿ23 July 2020 7:18 PM IST
share
ಉಡುಪಿ: ಅಂತರ ಜಿಲ್ಲಾ ಬಸ್ ಸೇವೆ ಆರಂಭ; ಪ್ರಯಾಣಿಕರದ್ದೇ ಕೊರತೆ

ಉಡುಪಿ, ಜು.23: ಉಡುಪಿ ಜಿಲ್ಲೆಯಲ್ಲಿ ಸೀಲ್‌ಡೌನ್ ಕೊನೆಗೊಳ್ಳುತ್ತಿ ರುವಂತೆ ಗುರುವಾರ ಅಂತರ ಜಿಲ್ಲಾ ಸಾರಿಗೆ ಸಂಚಾರ ಮತ್ತೆ ಆರಂಭಗೊಂಡಿದೆ. ಕೆಎಸ್ಸಾರ್ಟಿಸಿ, ಸಿಟಿ, ಖಾಸಗಿ ಸರ್ವೀಸ್ ಮತ್ತು ಎಕ್ಸ್‌ಪ್ರೆಸ್ ಬಸ್ಸುಗಳು ವಿವಿಧ ಮಾರ್ಗಗಳಲ್ಲಿ ತಮ್ಮ ನಿಗದಿತ ಸಂಚಾರ ನಡೆಸುತ್ತಿವೆ.

ಇಂದು ಉಡುಪಿಯಿಂದ ಮಂಗಳೂರಿಗೆ 20, ಕುಂದಾಪುರಕ್ಕೆ 22, ಶಿವಮೊಗ್ಗ ಕ್ಕೆ 4, ಹೆಬ್ರಿಗೆ 6, ಕಾರ್ಕಳಕ್ಕೆ 7 ಬಸ್ಸುಗಳು ಓಡಾಟ ನಡೆಸಿವೆ. ಜಿಲ್ಲೆಯೊಳಗೆ 12 ಸರ್ವೀಸ್ ಬಸ್ಸುಗಳು ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 20 ಸಿಟಿ ಬಸ್ಸುಗಳು ಓಡಾಟ ನಡೆಸಿವೆ. ನಾಳೆ ಇನ್ನೂ 10 ಬಸ್ಸು ರಸ್ತೆಗಳಿದು ಸಂಚಾರ ಪ್ರಾರಂಭಿಸಲಿವೆ ಎಂದು ತಿಳಿದುಬಂದಿದೆ.

ಕಾರ್ಕಳ -ಪಡುಬಿದ್ರೆ-ಮಂಗಳೂರು, ಕಾರ್ಕಳ ಮೂಡಬಿದಿರೆ-ಮಂಗಳೂರು ಮಾರ್ಗಗಳಲ್ಲಿ ಎರಡೆರಡರಂತೆ ಖಾಸಗಿ ಬಸ್‌ಗಳು ಓಡಾಟ ನಡೆಸಿವೆ. ಹೆಬ್ರಿ, ಕಾರ್ಕಳ, ಕುಂದಾಪುಗಳಲ್ಲೂ ಸಾಕಷ್ಟು ಬಸ್ ಸಂಚರಿಸಿರುವ ವರದಿ ಬಂದಿದೆ. ಜನರ ನೀರಸ ಪ್ರತಿಕ್ರಿಯೆ:  ಕೊರೋನಾ ಸೋಂಕಿನ ಭೀತಿಯಿಂದ ಬಸ್‌ಗಳಲ್ಲಿ ಸಂಚರಿಸಲು ಪ್ರಯಾಣಿಕರು ಉತ್ಸಾಹ ತೋರದಿರುವುದು ಬಸ್ ಮಾಲಕರು ಹಾಗೂ ಸಿಬ್ಬಂದಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಇಂದು ಸಂಚರಿಸಿದ ಹೆಚ್ಚಿನ ಬಸ್‌ಗಳು ಖಾಲಿಯಾಗಿ ಓಡಾಟ ನಡೆಸಿವೆ ಎಂದು ಬಸ್ ಸಿಬ್ಬಂದಿಗಳು ಬೇಸರದಿಂದ ನುಡಿಯುತ್ತಾರೆ.

ಬಸ್‌ಗಳಲ್ಲಿ ಮಾಸ್ಕ್ ಧರಿಸುವುದು, ಸುರಕ್ಷತಾ ಅಂತರಕ್ಕೆ ಪ್ರಾಶಸ್ತ್ಯ ನೀಡಿದ್ದರೂ, ಬಸ್‌ಗಳನ್ನು ಸ್ಯಾನಟೈಸ್ ಮಾಡುತ್ತಿರುವ ಬಗ್ಗೆ ಭರವಸೆ ನೀಡಿದರೂ, ಜನರ ಕೊರೋನ ಭೀತಿ ಕಡಿಮೆಯಾಗಿಲ್ಲ. ಈ ಸ್ಥಿತಿ ಸುಧಾರಿಸಿ, ಮತ್ತೆ ಜನ ಸಂಚರಿಸುವ ಧೈರ್ಯ ತೋರಿಸಲು ತುಂಬಾ ಸಮಯ ಬೇಕಾಗಬಹುದು ಎಂಬ ಚಿಂತೆಯನ್ನು ಬಸ್‌ಗಳ ಚಾಲಕರು, ನಿರ್ವಾಹಕರು ವ್ಯಕ್ತಪಡಿಸುತ್ತಾರೆ.

ಕೆಎಸ್ಸಾರ್ಟಿಸಿ: ಕೆಎಸ್ಸಾರ್ಟಿಸಿ ಉಡುಪಿ ಡಿಪೋದಿಂದ ಕಾರ್ಕಳ, ಕುಂದಾಪುರ, ಹೆಬ್ರಿ, ಶಿವಮೊಗ್ಗ, ಹುಬ್ಬಳ್ಳಿ, ಮಂಗಳೂರು, ಹಾವೇರಿ, ಚಿಕ್ಕಮಗಳೂರು, ಬೆಂಗಳೂರು, ಭಟ್ಕಳ ಭಾಗಗಳಿಗೆ ಬಸ್ಸುಗಳು ತೆರಳುತ್ತಿವೆ. ಒಟ್ಟು 21 ಬಸ್ಸುಗಳು ಸದ್ಯಕ್ಕೆ ಓಡಾಟ ಮಾಡುತ್ತಿವೆ. ನಾಳೆ ಇನ್ನೂ 10-12 ಬಸ್ಸುಗಳು ಓಡಲಿವೆ.
 ಉಡುಪಿ ನಗರ ವ್ಯಾಪ್ತಿಯಲ್ಲಿ ನರ್ಮ್ ಬಸ್‌ಗಳ ಬದಲು ಕೆಎಸ್ಸಾರ್ಟಿಸಿ ಬಸ್ಸುಗಳು ಸಂಚಾರ ನಡೆಸುತ್ತಿವೆ. ನರ್ಮ್ ಬಸ್ಸುಗಳಲ್ಲಿ ಕೋವಿಡ್-19ಗೆ ಸಂಬಂಧಿಸಿದ ಸುರಕ್ಷತಾ ಅಂತರ ನಿಯಮ ಪಾಲನೆ ಕಷ್ಟಸಾಧ್ಯವಾದ ಹಿನ್ನೆಲೆಯಲ್ಲಿ ಕೆಎಸ್ಸಾರ್ಟಿಸಿಯ 7 ಬಸ್ಸುಗಳನ್ನು ಹಾಕಲಾಗಿದೆ. ಪ್ರಯಾಣಿಕರ ಸಂಖ್ಯೆಯನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಬಸ್ಸುಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ಕೆಎಸ್ಸಾರ್ಟಿಸಿ ಉಡುಪಿ ಡಿಪೋ ಮ್ಯಾನೇಜರ್ ಉದಯಕುಮಾರ್ ಶೆಟ್ಟಿ ನುಡಿದರು.

ಪೇಟೆ, ಬೀದಿಗಳೂ ಖಾಲಿಖಾಲಿ
ಕೊರೋನ ಸೋಂಕು ಹರಡುವ ಭೀತಿಯಿಂದ ಜನ ಮನೆಯಿಂದ ಹೊರಗೆ ಬರಲು ಹೆದರುತಿದ್ದಾರೆ. ಹೀಗಾಗಿ ದಿನದ ಅಧಿಕ ಅವಧಿಯಲ್ಲಿ ಉಡುಪಿ ನಗರದ ಪೇಟೆ, ಬೀದಿಗಳೆಲ್ಲವೂ ನಿರ್ಜನವಾಗಿರುತ್ತವೆ. ಹಿಂದೆಲ್ಲಾ ಜನರಿಂದ ಕಿಕ್ಕಿರಿದು ನರೆದಿರುತಿದ್ದ ಕೆಲವು ಪ್ರದೇಶಗಲ್ಲಿ ಈಗ ಜನರ ಸುಳಿವೇ ಕಾಣುತ್ತಿಲ್ಲ.
ಜನರಲ್ಲಿ ಆವರಿಸಿರುವ ಸೋಂಕಿನ ಭೀತಿ ಇನ್ನು ದೂರವಾಗಿಲ್ಲ. ಹೀಗಾಗಿ ಅಗತ್ಯ ಸೇವೆಗಳಿಗೆ ಮಾತ್ರ ಜನರು ಪೇಟೆಗೆ ಬರುತ್ತಿದ್ದಾರೆ. ಅದರಲ್ಲೂ ಹೆಚ್ಚಿನವರು ತಮ್ಮ ಸ್ವಂತ ದ್ವಿಚಕ್ರ ವಾಹನ, ಕಾರುಗಳಲ್ಲಿ ಪೇಟೆಗೆ ಬಂದು, ಕೆಲಸ ಮುಗಿಸಿ, ಹೆಚ್ಚು ಹೊತ್ತು ನಿಲ್ಲದೆ ಮರಳುತ್ತಿರುವುದರಿಂದ ಪೇಟೆಗಳೆಲ್ಲ ಹಿಂದಿನ ಲವಲವಿಕೆ ಕಳೆದುಕೊಂಡಿವೆ ಎಂದು ವ್ಯಾಪಾರಿಗಳು ಜನರಿಲ್ಲದ ಬೀದಿಗಳತ್ತ ದೃಷ್ಟಿ ನೆಟ್ಟು ನುಡಿಯುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X