Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 2018ರ ಏಶ್ಯನ್ ಗೇಮ್ಸ್: ಬೆಳ್ಳಿ...

2018ರ ಏಶ್ಯನ್ ಗೇಮ್ಸ್: ಬೆಳ್ಳಿ ಗೆದ್ದಿದ್ದ ಭಾರತಕ್ಕೆ ಈಗ ಚಿನ್ನದ ಪದಕ

ಮುಹಮ್ಮದ್ ಅನಸ್, ಪೂವಮ್ಮ, ಹಿಮಾ ದಾಸ್, ರಾಜೀವ್ ಅವರಿದ್ದ ತಂಡ

ವಾರ್ತಾಭಾರತಿವಾರ್ತಾಭಾರತಿ23 July 2020 9:14 PM IST
share
2018ರ ಏಶ್ಯನ್ ಗೇಮ್ಸ್: ಬೆಳ್ಳಿ ಗೆದ್ದಿದ್ದ ಭಾರತಕ್ಕೆ ಈಗ ಚಿನ್ನದ ಪದಕ

ಹೊಸದಿಲ್ಲಿ, ಜು.23: ಜಕಾರ್ತದಲ್ಲಿ 2018ರಲ್ಲಿ ನಡೆದಿದ್ದ ಏಶ್ಯನ್ ಗೇಮ್ಸ್ ‌ನಲ್ಲಿ ಮೊದಲ ಸ್ಥಾನ ಪಡೆದಿದ್ದ ಬಹರೈನ್ ತಂಡ ಡೋಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದ ಭಾರತದ 4X400 ಮೀ. ರಿಲೇ ಮಿಕ್ಸೆಡ್ ತಂಡಕ್ಕೆ ಈಗ ಚಿನ್ನದ ಪದಕದ ಸ್ಥಾನಮಾನ ಲಭಿಸಿದೆ.

ಮುಹಮ್ಮದ್ ಅನಸ್, ಎಂ.ಆರ್. ಪೂವಮ್ಮ, ಹಿಮಾ ದಾಸ್ ಹಾಗೂ ಅರೋಕಿಯಾ ರಾಜೀವ್ ಅವರನ್ನೊಳಗೊಂಡ ಭಾರತದ ಅಥ್ಲೀಟ್ ‌ಗಳ ತಂಡ 3:15.71 ಸೆಕೆಂಡ್‌ನಲ್ಲಿ ಗುರಿ ತಲುಪಿ ಬಹರೈನ್ ಬಳಿಕ ಎರಡನೇ ಸ್ಥಾನ ಪಡೆದಿತ್ತು. ಆದರೆ, ಪ್ರಶಸ್ತಿ ವಿಜೇತ ಬಹರೈನ್ ತಂಡದ ಸದಸ್ಯೆ ಕೆಮಿ ಅಡೆಕೊಯಾ ಡೋಪಿಂಗ್ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿರುವ ಹಿನ್ನೆಲೆಯಲ್ಲಿ ಭಾರತವನ್ನು ಮೊದಲ ಸ್ಥಾನಕ್ಕೆ ಭಡ್ತಿ ನೀಡಲಾಗಿದೆ.

ಅಲಿ ಖಾಮಿಸ್, ಕೆಮಿ ಅಡೆಕೋಯಾ, ಸಲ್ವಾ ನಾಸರ್ ಹಾಗೂ ಅಬ್ಬಾಸ್ ಅಬೂಬಕರ್ ಅಬ್ಬಾಸ್ ಅವರಿದ್ದ ಬಹರೈನ್ ಮಿಕ್ಸೆಡ್ ರಿಲೇ ತಂಡ 3:11.89 ಸೆಕೆಂಡ್‌ನಲ್ಲಿ ಗುರಿ ತಲುಪಿ ಮೊದಲ ಸ್ಥಾನ ಪಡೆದಿತ್ತು. ಇದೀಗ ಬಹರೈನ್ ತಂಡದ ಸದಸ್ಯೆಯೊಬ್ಬರು ಡೋಪಿಂಗ್ ಪರೀಕ್ಷೆಯಲ್ಲಿ ಫೇಲಾದ ಕಾರಣ ಕಝಖ್‌ ಸ್ತಾನ ಬೆಳ್ಳಿ ಪದಕ ಗಿಟ್ಟಿಸಲು ಸಜ್ಜಾಗಿದ್ದರೆ, ನಾಲ್ಕನೇ ಸ್ಥಾನದಲ್ಲಿದ್ದ ಚೀನಾ ಮೂರನೇ ಸ್ಥಾನಕ್ಕೇರಿದೆ.

ಬಹರೈನ್ ‌ನ ಕೆಮಿ ಅಡೆಕೊಯಾ ಡೋಪಿಂಗ್ ಟೆಸ್ಟ್‌ ನಲ್ಲಿ ಅನುತ್ತೀರ್ಣರಾದ ಕಾರಣ ಫಲಿತಾಂಶದಲ್ಲಿ ಬದಲಾವಣೆ ಮಾಡಲಾಗಿದೆ. ಕೆಮಿ ಅವರಿಗೆ ಅಥ್ಲೆಟಿಕ್ಸ್ ಸಮಗ್ರತೆ ಘಟಕ(ಎಐಯು)ನಾಲ್ಕು ವರ್ಷಗಳ ಕಾಲ ನಿಷೇಧ ವಿಧಿಸಿದೆ. 2016ರ ವಿಶ್ವ ಒಳಾಂಗಣ ಕ್ರೀಡಾಕೂಟದಲ್ಲಿ 400 ಮೀ. ಓಟದಲ್ಲಿ ಚಾಂಪಿಯನ್ ಆಗಿದ್ದ ಕೆಮಿ ನಿಷೇಧಿತ ಸ್ಟೀರಾಯ್ಡ್ ಸ್ಟಾನೊರೊಲೊಲ್ ಸೇವಿಸಿರುವುದು ಪತ್ತೆಯಾಗಿದೆ.

ಕೆಮಿ ಅವರು 2018ರ ಆಗಸ್ಟ್ 24ರಿಂದ 2018ರ ನವೆಂಬರ್ 26 ರ ತನಕ ಸ್ವೀಕರಿಸಿರುವ ಎಲ್ಲ ಫಲಿತಾಂಶವನ್ನು ಅನರ್ಹಗೊಳಿಸಲಾಗಿದೆ ಎಂದು ಎಐಯು ತಿಳಿಸಿದೆ.

2018ರಲ್ಲಿ ನಡೆದಿದ್ದ ಏಶ್ಯನ್ ಗೇಮ್ಸ್ ರೇಸ್‌ ನಲ್ಲಿ ಅನಸ್ ಭಾರತಕ್ಕೆ ಉತ್ತಮ ಆರಂಭ ನೀಡಿದ್ದರು. ಆದರೆ, ಪೂವಮ್ಮ ಲ್ಯಾಪ್‌ ನಲ್ಲಿ ಹಿಂದೆ ಬಿದ್ದಿದ್ದರು. ಹಿಮಾ ಮುನ್ನಡೆ ಒದಗಿಸಲು ಯತ್ನಿಸಿದ್ದರು. ಅರೋಕಿಯಾ ಭಾರತವು 2ನೇ ಸ್ಥಾನ ಪಡೆದು ಬೆಳ್ಳಿ ಪದಕ ಜಯಿಸಲು ಶ್ರಮಿಸಿದ್ದರು. ರೇಸ್‌ ನ ಬಳಿಕ ಭಾರತವು ಬಹರೈನ್ ತಂಡದ ವಿರುದ್ಧ ತನ್ನ ಓಟಕ್ಕೆ ಅಡ್ಡಿಪಡಿಸಿದ ಆರೋಪ ಹೊರಿಸಿತ್ತು. ಆದರೆ, ಭಾರತದ ದೂರನ್ನು ತಾಂತ್ರಿಕ ಸಮಿತಿಯು ತಳ್ಳಿ ಹಾಕಿತ್ತು. ಅಡೆಕೊಯಾ ಅವರು ಹಿಮಾ ಓಟಕ್ಕೆ ಅಡ್ಡಿಪಡಿಸಿದ್ದರು.

ಕೆಮಿ ನಿಷೇಧ ಶಿಕ್ಷೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಏಶ್ಯನ್ ಗೇಮ್ಸ್‌ ನಲ್ಲಿ 400 ಮೀ. ಹರ್ಡಲ್ಸ್‌ನಲ್ಲಿ ಅವರು ಗೆದ್ದುಕೊಂಡಿದ್ದ ಪ್ರಶಸ್ತಿಯು ವಿಯೆಟ್ನಾಂನ ಖ್ವಾಚ್ ಥಿ ಲ್ಯಾನ್ ಪಾಲಾಗಿದೆ . ಬಹರೈನ್‌ನ ಆಮಿನತ್ ಯೂಸುಫ್ ಜಮಾಲ್ ಎರಡನೇ ಸ್ಥಾನಕ್ಕೇರಿದರೆ, ಭಾರತದ ಅನು ರಾಘವನ್ ಕಂಚಿನ ಪದಕ ಪಡೆಯಲಿದ್ದಾರೆ.

 ಅನುಗೆ ಕಂಚು: ಮಹಿಳೆಯರ 400 ಮೀ.ಹರ್ಡಲ್ಸ್‌ ನಲ್ಲಿ 4ನೇ ಸ್ಥಾನ ಪಡೆದಿದ್ದ ಭಾರತದ ಅನು ರಾಘವನ್ ಮೂರನೇ ಸ್ಥಾನಕ್ಕೇರಿ ಕಂಚಿನ ಪದಕಕ್ಕೆ ಪಾತ್ರರಾಗಿದ್ದಾರೆ. ಅನು ಫೈನಲ್ ‌ನಲ್ಲಿ 56.77 ಸೆಕೆಂಡ್‌ನಲ್ಲಿ ಗುರಿ ತಲುಪಿ 4ನೇ ಸ್ಥಾನ ಪಡೆದಿದ್ದರು. ಸಹ ಅಥ್ಲೀಟ್ ಜೌನಾ ಮುರ್ಮು(57.48 ಸೆ.)5ನೇ ಸ್ಥಾನ ಪಡೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X