ಕುಂದಾಪುರ: ನಾಗರಿಕರ ಸುರಕ್ಷತೆಗಾಗಿ ಅಗತ್ಯ ಕ್ರಮಕ್ಕೆ ಆಗ್ರಹಿಸಿ ಧರಣಿ
ಕುಂದಾಪುರ, ಜು.24: ಕೊರೋನ ಸಂಬಂಧ ನಾಗರಿಕರ ಸಂರಕ್ಷಣೆಗಾಗಿ ಅಗತ್ಯ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿ ಸಿಐಟಿಯು, ರೈತ ಸಂಘ ಮತ್ತು ಕೃಷಿ ಕೂಲಿಕಾರರ ಸಂಘಟನೆಗಳು ಜು.23ರಂದು ಕುಂದಾ ಪುರ ತಾಪಂ ಕಚೇರಿ ಎದುರು ಧರಣಿ ನಡೆಸಿತು.
ಈ ಕುರಿತ ಮನವಿಯನ್ನು ತಾಪಂ ಕಾರ್ಯನಿರ್ವಹಣಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು. ಈ ವೇಳೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಕೆ.ಶಂಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ತಾಲೂಕು ಮುಖಂಡ ಎಚ್.ನರಸಿಂಹ, ಕೃಷಿಕೂಲಿಕಾರರ ಮುಖಂಡರಾದ ರಾಜೀವ ಪಡುಕೋಣೆ, ನಾಗರತ್ನ ನಾಡ, ಮಹಾಬಲ ವಡೇರಹೋಬಳಿ, ಬಲ್ಕೀಸ್ ಮೊದಲಾದವರು ಉಪಸ್ಥಿತರಿದ್ದರು.
Next Story