Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರದಲ್ಲಿ ಲಾಕ್‌ಡೌನ್...

ಜಮ್ಮು-ಕಾಶ್ಮೀರದಲ್ಲಿ ಲಾಕ್‌ಡೌನ್ ಜಾರಿಯಿಂದ ವ್ಯಾಪಕ ಮಾನವ ಹಕ್ಕು ಉಲ್ಲಂಘನೆ: ಮಾನವ ಹಕ್ಕು ವೇದಿಕೆಯ ವರದಿ

ವಾರ್ತಾಭಾರತಿವಾರ್ತಾಭಾರತಿ24 July 2020 11:43 PM IST
share
ಜಮ್ಮು-ಕಾಶ್ಮೀರದಲ್ಲಿ ಲಾಕ್‌ಡೌನ್ ಜಾರಿಯಿಂದ ವ್ಯಾಪಕ ಮಾನವ ಹಕ್ಕು ಉಲ್ಲಂಘನೆ: ಮಾನವ ಹಕ್ಕು ವೇದಿಕೆಯ ವರದಿ

ಶ್ರೀನಗರ, ಜು.24: ಜಮ್ಮು ಕಾಶ್ಮೀರದಲ್ಲಿ ಸುಮಾರು 11 ತಿಂಗಳಿಗಿಂತಲೂ ಹೆಚ್ಚಿನ ಅವಧಿಯಿಂದ ಜಾರಿಯಲ್ಲಿರುವ ಲಾಕ್‌ ಡೌನ್‌ನಿಂದ ಜಾಮೀನು, ನ್ಯಾಯೋಚಿತ ಮತ್ತು ತ್ವರಿತ ವಿಚಾರಣೆ ಸಹಿತ ಹಲವಾರು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಜಮ್ಮು ಕಾಶ್ಮೀರದ ಮಾನವ ಹಕ್ಕು ವೇದಿಕೆಯ ವರದಿ ತಿಳಿಸಿದೆ.

ಸಾರ್ವಜನಿಕ, ನಾಗರಿಕರ ಮತ್ತು ಮಾನವರ ಭದ್ರತೆಯ ವಿಷಯಕ್ಕಿಂತ ಪ್ರತಿಬಂಡಾಯದ ಆತಂಕಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದು ರಕ್ಷಣೆಯನ್ನು ದುರ್ಬಲಗೊಳಿಸಿ ಎಲ್ಲಾ ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗುತ್ತಿದೆ ಎಂದು ‘ ಜಮ್ಮು ಮತ್ತು ಕಾಶ್ಮೀರ: ಮಾನವ ಹಕ್ಕುಗಳ ಮೇಲೆ ಲಾಕ್‌ಡೌನ್‌ನ ಪರಿಣಾಮ’ ಎಂಬ ಶೀರ್ಷಿಕೆಯ ವರದಿ ತಿಳಿಸಿದೆ.

ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶ ಮದನ್ ಬಿ. ಲೋಕೂರ್ ನೇತೃತ್ವದ ವೇದಿಕೆಯಲ್ಲಿ ಈ ಹಿಂದಿನ ಜಮ್ಮು ಕಾಶ್ಮೀರ ರಾಜ್ಯದ ಸಂವಾದಕರ ತಂಡದ ಸದಸ್ಯನಾಗಿದ್ದ ರಾಧಾ ಕುಮಾರ್ ಸಹಿತ ಹಲವರು ಸದಸ್ಯರಿದ್ದಾರೆ.

ಜಾಮೀನು ಪಡೆಯುವ ಹಕ್ಕು ನಿರಾಕರಣೆ, ನ್ಯಾಯೋಚಿತ ಮತ್ತು ತ್ವರಿತ ವಿಚಾರಣೆಯ ಹಕ್ಕು ನಿರಾಕರಣೆಯ ಜೊತೆಗೆ, ಭಿನ್ನಾಭಿಪ್ರಾಯಗಳನ್ನು ಚಿವುಟಿ ಹಾಕಲು ಸಾರ್ವಜನಿಕ ಸುರಕ್ಷತಾ ಕಾಯಿದೆ(ಪಿಎಸ್‌ಎ) , ಅಕ್ರಮ ಚಟುವಟಿಕೆ ತಡೆ ಕಾಯಿದೆ(ಯುಎಪಿಎ)ಯಂತಹ ಕಠಿಣ ಶಾಸನಗಳ ದುರ್ಬಳಕೆ ಲಾಕ್‌ಡೌನ್ ಅವಧಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.

ಲಾಕ್‌ಡೌನ್ ಆಗಾಗ ಶಟ್‌ಡೌನ್‌ಗೆ ಎಡೆ ಮಾಡಿಕೊಟ್ಟಿದೆ. ಬ್ಯಾರಿಕೇಡ್ ಮತ್ತು ಚೆಕ್‌ಪಾಯಿಂಟ್‌ಗಳಲ್ಲಿ ಕಿರುಕುಳ ನೀಡುವುದು, ಸಂವಹನದ ಮೇಲೆ ನಿರ್ಬಂಧ ಮುಂತಾದವುಗಳಿಂದ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ಜಮ್ಮು-ಕಾಶ್ಮೀರದ ಜನತೆಯಲ್ಲಿ ಆತಂಕ, ಒತ್ತಡ ಮೂಡಲು ಕಾರಣವಾಗಿದೆ. ಭಾರತ ಮತ್ತು ಜಮ್ಮು-ಕಾಶ್ಮೀರದ ಸಂವಿಧಾನದಲ್ಲಿ ನೀಡಲಾಗಿದ್ದ ಆರೋಗ್ಯ ಮತ್ತು ವೈದ್ಯಕೀಯ ಉಪಚಾರದ ಹಕ್ಕನ್ನು ಉಲ್ಲಂಘಿಸಲಾಗಿದೆ. ಲಾಕ್‌ಡೌನ್ ಮತ್ತು ನಿರ್ಬಂಧದಿಂದಾಗಿ 2019-20ರ ಶೈಕ್ಷಣಿಕ ವರ್ಷದಲ್ಲಿ ಜಮ್ಮು-ಕಾಶ್ಮೀರದ ಶಿಕ್ಷಣ ಸಂಸ್ಥೆಗಳು ಹೆಚ್ಚೆಂದರೆ 100 ದಿನ ಮಾತ್ರ ಕಾರ್ಯನಿರ್ವಹಿಸಿದ್ದು ಪ್ರದೇಶದ ಶಿಕ್ಷಣದ ಮೇಲೆ ಪರಿಣಾಮ ಬೀರಿದೆ.

ನೆಟ್‌ವರ್ಕ್ ಅನ್ನು 2 ಜಿಗೆ ಸೀಮಿತಗೊಳಿಸಿರುವುದು ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಜಾರಿಗೆ ಬಂದಿರುವ ಆನ್‌ಲೈನ್ ತರಗತಿಗೆ ತೊಂದರೆಯಾಗಿದೆ ಎಂದು ವರದಿ ಹೇಳಿದೆ.

370ನೇ ವಿಧಿ ರದ್ದತಿಯ ಬಳಿಕ ಕಾಶ್ಮೀರದಲ್ಲಿ ಬಂಧನಲ್ಲಿರುವ ಎಲ್ಲಾ ರಾಜಕೀಯ ಮುಖಂಡರ ಬಿಡುಗಡೆಗೆ ವೇದಿಕೆ ಕರೆ ನೀಡಿದೆ. ಪಿಎಸ್‌ಎ ಮತ್ತಿತರ ಕಠಿಣ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ಅದನ್ನು ರಾಜಕೀಯ ವಿರೋಧಿಗಳ ಮೇಲೆ ಬಳಸುವುದಕ್ಕೆ ಅಂತ್ಯ ಹೇಳಬೇಕು. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರದ ಮೇಲಿರುವ ಎಲ್ಲಾ ನಿರ್ಬಂಧಗಳನ್ನೂ ತೆಗೆದು ಹಾಕಬೇಕು. ಎಳೆಯ ಮಕ್ಕಳ ರಕ್ಷಣೆಯ ಕಾನೂನನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ವೇದಿಕೆಯ ವರದಿಯಲ್ಲಿ ಹೇಳಲಾಗಿದೆ.

ಬಾಕ್ಸ್:

ಜಮ್ಮು-ಕಾಶ್ಮೀರ ಬಿಕ್ಕಟ್ಟಿನ ತ್ರಿ-ಪಾರ್ಶ್ವೀಕರಣ

ಈ ಹಿಂದೆ ಭಾರತ-ಪಾಕ್ ಮಧ್ಯೆ ದ್ವಿಪಕ್ಷೀಯ ಬಿಕ್ಕಟ್ಟಾಗಿದ್ದ ಜಮ್ಮು-ಕಾಶ್ಮೀರ ವಿವಾದಕ್ಕೆ ಈಗ ಚೀನಾದ ಸೇರ್ಪಡೆಯಾಗಿದೆ. ರಾಜ್ಯವನ್ನು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸಿದ 2019ರ ಕೇಂದ್ರ ಸರಕಾರದ ನಿರ್ಧಾರವನ್ನು ವಿಶ್ವಸಂಸ್ಥೆಯ ಭದ್ರತಾ ಸಮಿತಿ ಸಭೆಯಲ್ಲಿ ಪ್ರಸ್ತಾವಿಸಲು ಮತ್ತು ಭಾರತದ ಈ ನಿರ್ಧಾರದ ವಿರುದ್ಧ ವಿಶ್ವನಾಯಕರ ಅಭಿಪ್ರಾಯವನ್ನು ಕ್ರೋಢೀಕರಿಸಲು ಚೀನಾ ಪ್ರಯತ್ನಿಸಿದೆ. ಅಲ್ಲದೆ 2020ರ ಮೇ ತಿಂಗಳಿನಲ್ಲಿ ಈಶಾನ್ಯ ಲಡಾಖ್‌ನಲ್ಲಿ ಚೀನಾದ ಪಡೆ ಭಾರತದ ಪ್ರದೇಶವನ್ನು ಅತಿಕ್ರಮಿಸಿರುವುದು ಭಾರತ ಸರಕಾರದ ರಾಜತಾಂತ್ರಿಕ ಮತ್ತು ಭದ್ರತಾ ಆತಂಕವನ್ನು ಹೆಚ್ಚಿಸಿದೆ ಎಂದು ಸಮಿತಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X