ಕೋವಿಡ್ ಕೇರ್ ಸೆಂಟರ್ ನಲ್ಲಿದ್ದ ಕೊರೋನ ಸೋಂಕಿತ ಪರಾರಿ

ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.25: ಕೋವಿಡ್-19 ಸಂಬಂಧ ಇಲ್ಲಿನ ಕೋರಮಂಗಲದ ಎನ್ಜಿವಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನ ಸೋಂಕಿತ ಪರಾರಿ ಆಗಿರುವುದಾಗಿ ವರದಿಯಾಗಿದೆ.
ಉತ್ತರ ಪ್ರದೇಶ ಮೂಲದ ರಾಜು ಖಾನ್ ಆಗಿರುವ ಆರೋಪಿ ಎಂದು ತಿಳಿದುಬಂದಿದೆ.
ಇತ್ತೀಚಿಗೆ ಕೋಣನಕುಂಟೆ ಠಾಣಾ ವ್ಯಾಪ್ತಿಯ ಜಂಬುಸವಾರಿ ದಿಣ್ಣೆ ಮುಖ್ಯ ರಸ್ತೆ ಬಳಿ ದರೋಡೆಗೆ ಯತ್ನಿಸಿ ಪೊಲೀಸರ ಕೈಗೆ ಆರೋಪಿಗಳಿಬ್ಬರು ಸಿಕ್ಕಿಬಿದ್ದಿದ್ದರು. ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆ ಇಬ್ಬರು ಆರೋಪಿಗಳ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಸೋಂಕು ದೃಢಪಟ್ಟಿದೆ.
ಈ ಸಂಬಂಧ ಅವರು ಜು.17ರಿಂದ 22ರವರೆಗೆ ಕೋರಮಂಗಲದ ಎನ್ಜಿವಿ ಕೋವಿಡ್ ಕೇರ್ ಸೆಂಟರ್ ನಲ್ಲಿದ್ದರು. ಈ ಪೈಕಿ ರಾಜು ಖಾನ್ ಜು.22ರಂದು ರಾತ್ರಿ ಕ್ವಾರಂಟೈನ್ ಕೇಂದ್ರದಿಂದ ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ನೋಡಲ್ ಅಧಿಕಾರಿ ನೀಡಿದ ದೂರಿನ ಮೇರೆಗೆ ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
Next Story





