Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಿಎಸ್‌ಜಿ ತಂಡಕ್ಕೆ ಫ್ರೆಂಚ್ ಕಪ್

ಪಿಎಸ್‌ಜಿ ತಂಡಕ್ಕೆ ಫ್ರೆಂಚ್ ಕಪ್

ಬಾಪೆ ಗಾಯಾಳು

ವಾರ್ತಾಭಾರತಿವಾರ್ತಾಭಾರತಿ26 July 2020 11:20 AM IST
share
ಪಿಎಸ್‌ಜಿ ತಂಡಕ್ಕೆ ಫ್ರೆಂಚ್ ಕಪ್

ಪ್ಯಾರಿಸ್, ಜು.26: ನೇಮರ್ ದಾಖಲಿಸಿದ ಏಕೈಕ ಗೋಲು ನೆರವಿನಲ್ಲಿ ಪ್ಯಾರಿಸ್ ಸೇಂಟ್ ಜರ್ಮೈನ್ (ಪಿಎಸ್‌ಜಿ)ತಂಡ 10 ಮಂದಿಯ ಸೇಂಟ್ ಎಟಿಯೆನ್ ತಂಡದ ವಿರುದ್ಧ 1-0 ಅಂತರದಲ್ಲಿ ಜಯ ಗಳಿಸುವ ಮೂಲಕ 13ನೇ ಕೊಪಾ ಡಿ ಫ್ರಾನ್ಸ್ ಪ್ರಶಸ್ತಿಯನ್ನು ಬಾಚಿಕೊಂಡಿದೆ.

ಶನಿವಾರದಂದು ಖಾಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಿಎಸ್‌ಜಿ ತಂಡದ ಕೈಲಿಯನ್ ಬಾಪೆ ಗಾಯಗೊಂಡು ನಿರ್ಗಮಿಸಿದ ಬಳಿಕ 14ನೇ ನಿಮಿಷದಲ್ಲಿ ಬ್ರೆಝಿಲ್‌ನ ಸ್ಟಾರ್ ಆಟಗಾರ ನೇಮರ್ ಗೋಲು ದಾಖಲಿಸಿದರು.

ಬಾಪೆ ಗೋಲು ಗಳಿಸಲು ನಡೆಸಿದ ಪ್ರಯತ್ನವನ್ನು ಗೋಲ್‌ಕೀೀಪರ್ ಜೆಸ್ಸಿ ಮೌಲಿನ್ ಆರಂಭದಲ್ಲೇ ವಿಫಲಗೊಳಿಸಿದರು. 80,000 ಆಸನಗಳ ಸಾಮರ್ಥ್ಯದ ಸ್ಟೇಡ್ ಡಿ ಫ್ರಾನ್ಸ್ ಕ್ರೀಡಾಂಗಣದಲ್ಲಿ ಕೇವಲ 5,000 ಅಭಿಮಾನಿಗಳು ಕಟ್ಟುನಿಟ್ಟಾದ ಆರೋಗ್ಯ ಶಿಷ್ಟಾಚಾರಗಳೊಂದಿಗೆ ಉಪಸ್ಥಿತರಿದ್ದರು. ಇದಕ್ಕೂ ಮೊದಲು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಕ್ರೀಡಾಂಗಣದಲ್ಲಿ ಆಟಗಾರರನ್ನು ಭೇಟಿಯಾದರು. ಭೇಟಿಯ ವೇಳೆ ಸುರಕ್ಷಿತ ಅಂತರವನ್ನು ಕಾಯ್ದುಕೊಂಡಿದ್ದರು ಮತ್ತು ಮಾಸ್ಕ್ ಧರಿಸಿದ್ದರು.

ದೀರ್ಘ ವಿರಾಮದ ನಂತರ ಫ್ರಾನ್ಸ್‌ನಲ್ಲಿ ನಡೆದ ಮೊದಲ ವೃತ್ತಿಪರ ಪಂದ್ಯದ ವೇಳೆ ಹಬ್ಬದ ವಾತಾವರಣ ಇರಲಿಲ್ಲ. ಪಂದ್ಯದ ಮೊದಲು ಕ್ರೀಡಾಂಗಣದ ಸುತ್ತ ಬೆರಳೆಣಿಕೆಯಷ್ಟು ಜನರು ಮಾತ್ರ ಇದ್ದರು.

ಆರಂಭಿಕ ಸೆಕೆಂಡುಗಳಲ್ಲಿ ಪಂದ್ಯ ರೋಚಕತೆಯಿಂದ ಕೂಡಿತ್ತು. ಯೆವಾನ್ ಮ್ಯಾಕಾನ್ ಅವರು ನೇಮರ್‌ನ್ನು ದೂಡಿ ಹಾಕುವ ಮೂಲಕ ಹಳದಿ ಕಾರ್ಡ್ ಪಡೆದರು. ಸೇಂಟ್ ಎಟಿಯೆನ್ ತಂಡದ ಡೆನಿಸ್ ಬೌಂಗಾ ಐದನೇ ನಿಮಿಷದಲ್ಲಿ ಗೋಲು ಬಾರಿಸಲು ಯತ್ನಿಸಿದರು. ಆದರೆ ಚೆಂಡು ಗೋಲು ಪೆಟ್ಟಿಗೆಯ ಕಂಬಕ್ಕೆ ಬಡಿಯುವುದರೊಂದಿಗೆ ಅವರ ಪ್ರಯತ್ನ ವಿಫಲಗೊಂಡಿತು. 26ನೇ ನಿಮಿಷದಲ್ಲಿ ಸೇಂಟ್ ಎಟಿಯೆನ್ ನಾಯಕ ಲೋಯಿಕ್ ಪೆರಿನ್ ಅವರ ಒರಟು ಟ್ಯಾಕ್ಲ್‌ಗೆ ಬಾಪೆಗಾಯಗೊಂಡು ಆಟದಿಂದ ಹೊರಗುಳಿಯುವಂತಾಯಿತು. ಈ ತಪ್ಪಿಗಾಗಿ ಪೆರಿನ್‌ಗೆ ಕೆಂಪು ಕಾರ್ಡ್ ದರ್ಶನವಾಗಿ ಕೊನೆಯ ಪಂದ್ಯದಲ್ಲಿ ಹೊರದಬ್ಬಲ್ಪಟ್ಟರು. ‘‘ನಾವು ಫೈನಲ್ ಗೆದ್ದಿದ್ದೇವೆ ಮತ್ತು ಅದು ನಮಗೆ ಮುಖ್ಯವಾಗಿದೆ ’’ಎಂದು ಪಿಎಸ್‌ಜಿ ಕೋಚ್ ಥಾಮಸ್ ತುಚೆಲ್ ಹೇಳಿದರು. ಅವರ ತಂಡವು ಕಳೆದ ವರ್ಷದ ಫೈನಲ್‌ನಲ್ಲಿ ಸ್ಟೇಡ್ ರೆನ್ನೆಸ್ ವಿರುದ್ಧ ಪೆನಾಲ್ಟಿ ಶೂಟೌಟ್‌ನಲ್ಲಿ ಸೋಲು ಅನುಭವಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X