Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಲಿಬಾಬಾ ಕಂಪೆನಿ, ಜ್ಯಾಕ್ ಮಾಗೆ...

ಆಲಿಬಾಬಾ ಕಂಪೆನಿ, ಜ್ಯಾಕ್ ಮಾಗೆ ಗುರ್ಗಾಂವ್ ನ್ಯಾಯಾಲಯ ಸಮನ್ಸ್

ವಾರ್ತಾಭಾರತಿವಾರ್ತಾಭಾರತಿ26 July 2020 3:27 PM IST
share
ಆಲಿಬಾಬಾ ಕಂಪೆನಿ, ಜ್ಯಾಕ್ ಮಾಗೆ ಗುರ್ಗಾಂವ್ ನ್ಯಾಯಾಲಯ ಸಮನ್ಸ್

ಚಂಡೀಗಢ, ಜು.26: ಇ-ಕಾಮರ್ಸ್ ಸಂಸ್ಥೆ ಆಲಿಬಾಬಾದ ಆ್ಯಪ್‌ನಲ್ಲಿ ಚೀನಾವನ್ನು ಟೀಕಿಸುವ ವಿಷಯಗಳನ್ನು ಸೆನ್ಸರ್ ಮಾಡಲಾಗುತ್ತಿದೆ ಮತ್ತು ಸುಳ್ಳು ಸುದ್ದಿ ಪ್ರಸಾರ ಮಾಡಲಾಗುತ್ತಿದೆ ಎಂದು ಸಂಸ್ಥೆಯ ಮಾಜಿ ಉದ್ಯೋಗಿ ಸಲ್ಲಿಸಿದ್ದ ದೂರಿನ ಹಿನ್ನೆಲೆಯಲ್ಲಿ ಆಲಿಬಾಬಾ ಮತ್ತು ಅದರ ಸಂಸ್ಥಾಪಕ ಜಾಕ್ ಮಾ ವಿರುದ್ಧ ಹರ್ಯಾಣ ಗುರುಗ್ರಾಮದ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ ಎಂದು ಸುದ್ಧಿಸಂಸ್ಥೆ ‘ರಾಯ್ಟರ್ಸ್’ ರವಿವಾರ ವರದಿ ಮಾಡಿದೆ.

ಆಲಿಬಾಬಾ ಸಂಸ್ಥೆಯ ಆ್ಯಪ್‌ಗಳಾದ ಯುಸಿ ಬ್ರೌಸರ್ ಮತ್ತು ಯುಸಿ ನ್ಯೂಸ್‌ಗಳ ಗುರುಗ್ರಾಮ ಕಚೇರಿಯಲ್ಲಿ 2017ರ ಅಕ್ಟೋಬರ್‌ವರೆಗೆ ಸಹಾಯಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದ ಪುಷ್ಪೇಂದ್ರ ಸಿಂಗ್ ಪರ್ಮಾರ್ ಈ ದೂರು ಸಲ್ಲಿಸಿದ್ದಾರೆ. ಸುದ್ದಿಗಳ ಸೆನ್ಸರ್‌ಶಿಪ್ ಮತ್ತು ರಾಜಕೀಯ ಹಾಗೂ ಸಾಮಾಜಿಕ ಗೊಂದಲಕ್ಕೆ ಕಾರಣವಾಗುವ ಸುಳ್ಳು ಸುದ್ದಿ ಪ್ರಸಾರ ಮಾಡುವುದನ್ನು ಆಕ್ಷೇಪಿಸಿದ್ದಕ್ಕೆ ತನ್ನನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಆದ್ದರಿಂದ ತನಗೆ ಸಂಸ್ಥೆಯಿಂದ 2 ಕೋಟಿ ರೂ. ಪರಿಹಾರ ದೊರಕಿಸಿ ಕೊಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

   ಯುಸಿ ಬ್ರೌಸರ್, ಯುಸಿ ನ್ಯೂಸ್ ಸೇರಿದಂತೆ ಚೀನಾದ 59 ಆ್ಯಪ್‌ಗಳನ್ನು ಕೇಂದ್ರ ಸರಕಾರ ನಿಷೇಧಿಸಿದ ಸುಮಾರು 1 ತಿಂಗಳ ಬಳಿಕ ಈ ದೂರು ದಾಖಲಿಸಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಜಾಕ್‌ ಮಾ, ಆಲಿಬಾಬಾಗೆ ಸಮನ್ಸ್ ಜಾರಿಗೊಳಿಸಿದ ಕೋರ್ಟ್, ಜು.29ರಂದು ಖುದ್ದು ಅಥವಾ ಪ್ರತಿನಿಧಿ ಕೋರ್ಟ್‌ನಲ್ಲಿ ಹಾಜರಿರಬೇಕು ಮತ್ತು 30 ದಿನದೊಳಗೆ ಸಂಸ್ಥೆ ಅಥವಾ ಅಧಿಕಾರಿಗಳು ಲಿಖಿತ ಉತ್ತರ ನೀಡಬೇಕು ಎಂದು ಸೂಚಿಸಿದೆ. ಭಾರತದ ಮಾರುಕಟ್ಟೆಯ ಬಗ್ಗೆ ಮತ್ತು ಸಂಸ್ಥೆಯ ಸ್ಥಳೀಯ ಸಿಬ್ಬಂದಿಯ ಹಿತಚಿಂತನೆಯ ಕುರಿತ ತನ್ನ ಬದ್ಧತೆ ಅಚಲವಾಗಿದೆ ಮತ್ತು ಸಂಸ್ಥೆಯ ಕಾರ್ಯನೀತಿ ಸ್ಥಳೀಯ ನಿಯಮಗಳಿಗೆ ಅನುಗುಣವಾಗಿದೆ. ಈಗ ನಡೆಯುತ್ತಿರುವ ದಾವೆಗಳ ಕುರಿತು ಪ್ರತಿಕ್ರಿಯಿಸಲು ಅಶಕ್ತನಾಗಿದ್ದೇನೆ ಎಂದು ಯುಸಿ ಇಂಡಿಯಾ ಪ್ರತಿಕ್ರಿಯಿಸಿದೆ.

2000 ರೂ. ನೋಟ್ ಬ್ಯಾನ್ ಎಂಬ ಸುಳ್ಳು ಸುದ್ಧಿ

ಇವತ್ತು ಮಧ್ಯರಾತ್ರಿಯಿಂದ 2000 ರೂ. ನೋಟುಗಳನ್ನು ನಿಷೇಧಿಸಲಾಗಿದೆ ಎಂದು 2017ರಲ್ಲಿ ಯುಸಿ ನ್ಯೂಸ್ ವೆಬ್‌ಸೈಟ್‌ನಲ್ಲಿ ಸುದ್ಧಿ ಪ್ರಸಾರವಾಗಿತ್ತು. 2018ರಲ್ಲಿ ಪ್ರಸಾರವಾದ ಇನ್ನೊಂದು ಸುದ್ಧಿಯಲ್ಲಿ ‘ ಈಗಷ್ಟೇ ಭಾರತ- ಪಾಕ್ ಮಧ್ಯೆ ಯುದ್ಧ ಆರಂಭವಾಗಿದೆ’ ಎಂದು ತಿಳಿಸಿರುವುದನ್ನು ಸುದ್ಧಿ ಸಂಸ್ಥೆ ‘ರಾಯ್ಟರ್ಸ್’ ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X