ರಾಜ್ಯದಲ್ಲಿ ಮತ್ತೆ 82 ಮಂದಿಯನ್ನು ಬಲಿ ಪಡೆದ ಕೊರೋನ: ಸಾವಿನ ಸಂಖ್ಯೆ 1,878ಕ್ಕೆ ಏರಿಕೆ
ಒಂದೇ ದಿನ 5,199 ಮಂದಿಗೆ ಕೋವಿಡ್ ದೃಢ

ಬೆಂಗಳೂರು, ಜು.23: ರಾಜ್ಯದಲ್ಲಿ ಶನಿವಾರ ಸಂಜೆಯಿಂದ ರವಿವಾರ ಸಂಜೆವರೆಗೆ ಮತ್ತೆ 5,199 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 96,141ಕ್ಕೆ ಏರಿಕೆಯಾಗಿದೆ.
24 ಗಂಟೆಗಳಲ್ಲಿ 82 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 1,878ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದುವರೆಗೆ ರಾಜ್ಯದಲ್ಲಿ ಅತೀ ಹೆಚ್ಚಿನ ಕೊರೋನ ಸಾವಿನ ಪ್ರಕರಣ ದಾಖಲಾದ ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು ಮತ್ತೆ 29 ಮಂದಿ ಬಲಿಯಾಗಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ 7, ಧಾರವಾಡ 6, ಕಲಬುರಗಿ 6, ಬೆಳಗಾವಿ 6, ಮೈಸೂರು 5, ತುಮಕೂರು 5, ದಾವಣಗೆರೆ 3, ಹಾಸನ 3, ಬಾಗಲಕೋಟೆ, ಗದಗ, ಚಿಕ್ಕಬಳ್ಳಾಪುರ, ಉತ್ತರ ಕನ್ನಡದಲ್ಲಿ ತಲಾ 2, ವಿಜಯಪುರ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ತಲಾ ಒಂದು ಸಾವು ಸಂಭವಿಸಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 1950, ಬಳ್ಳಾರಿ 579, ಮೈಸೂರು 230, ಬೆಂಗಳೂರು ಗ್ರಾಮಾಂತರ 213, ದಕ್ಷಿಣ ಕನ್ನಡ 199, ಉಡುಪಿ 169, ಧಾರವಾಡ 165, ಹಾಸನ 164, ಬೆಳಗಾವಿ 163, ಕಲಬುರಗಿ 152, ವಿಜಯಪುರ 132, ರಾಯಚೂರು 131, ದಾವಣಗೆರೆ 89, ಉತ್ತರ ಕನ್ನಡ 85, ಚಿಕ್ಕಬಳ್ಳಾಪುರ 81, ಬೀದರ್ 77, ಮಂಡ್ಯ 64, ಚಿಕ್ಕಮಗಳೂರು 61, ಗದಗ 61, ಯಾದಗಿರಿ 56, ಚಿತ್ರದುರ್ಗ 53, ಕೋಲಾರ 49, ಹಾವೇರಿ 47, ತುಮಕೂರು 46, ಬಾಗಲಕೋಟೆ 41, ಕೊಪ್ಪಳ 40, ಶಿವಮೊಗ್ಗ 39, ಚಾಮರಾಜನಗರ 28, ಕೊಡಗು 20, ರಾಮನಗರದಲ್ಲಿ 15 ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 96,141 ಕೊರೋನ ಸೋಂಕಿತರ ಪೈಕಿ 35,838 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 2,088 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 1,878 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 58,417 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.







