Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ...

ಓ ಮೆಣಸೇ...

ಪಿ.ಎ.ರೈಪಿ.ಎ.ರೈ27 July 2020 12:10 AM IST
share
ಓ ಮೆಣಸೇ...

ಕಾಂಗ್ರೆಸ್ ಜೊತೆಗಿನ ಮೈತ್ರಿ ಮುಗಿದ ಅಧ್ಯಾಯ.
- ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ
ಹೊಸ ಪುಸ್ತಕ ಕೊಂಡು ಹೊಸ ಅಧ್ಯಾಯ ಪ್ರಾರಂಭಿಸುವ ಯೋಚನೆ ಇದೆಯೆ?


ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ಈವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ -ಸುರೇಶ್‌ಕುಮಾರ್, ಸಚಿವ
ಆನ್‌ಲೈನ್‌ನಲ್ಲಿ ಗೋಶಾಲೆ ತೆರೆಯುವ ಉದ್ದೇಶವಿದೆಯಂತೆ. 


ಬೇರೆ ಪಕ್ಷದಿಂದ ಬಿಜೆಪಿಗೆ ಹೋಗಿರುವ ಯಾರೂ ಏಳಿಗೆ ಸಾಧಿಸಿಲ್ಲ - ದಿಗ್ವಿಜಯಸಿಂಗ್, ಕಾಂಗ್ರೆಸ್ ಮುಖಂಡ
ಕಾಂಗ್ರೆಸ್‌ನಲ್ಲಿ ಸಂಪೂರ್ಣ ಏಳಿಗೆಯಾದ ಬಳಿಕ ಅವರು ಬಿಜೆಪಿ ಸೇರುವುದು.


ಗುಡಿಸಲು ಮುಕ್ತ ಕರ್ನಾಟಕ ಮಾಡಲು ಕೆಲಸ ಮಾಡುತ್ತಿದ್ದೇನೆ - ವಿ.ಸೋಮಣ್ಣ, ಸಚಿವ

 ಬುಲ್ಡೋಜರ್ ಬಳಕೆ ಮಾಡುವ ಮೂಲಕವೆ?


ಚೀನಾ ಆಕ್ರಮಣ ಮುಚ್ಚಿಹಾಕಲು ಬಿಜೆಪಿ ಮಾಧ್ಯಮಗಳನ್ನು ಬೆದರಿಸುತ್ತಿದೆ - ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕ
ಮಾಧ್ಯಮಗಳ ಮೇಲಿನ ಆಕ್ರಮಣ, ಚೀನಾ ಆಕ್ರಮಣಕ್ಕಿಂತ ಭೀಕರವಾದುದು.


ಐಪಿಎಲ್ 13ನೇ ಆವೃತ್ತಿ ನಡೆಯುವ ವಿಶ್ವಾಸ ನಾವು ಕಳೆದು ಕೊಂಡಿಲ್ಲ. - ಸೌರವ್‌ ಗಂಗುಲಿ, ಬಿಸಿಸಿಐ ಅಧ್ಯಕ್ಷ

ಮೊದಲು ಬಿಪಿಎಲ್‌ನ ಜನರಿಗೆ ರೇಷನ್ ಕುರಿತಂತೆ ವಿಶ್ವಾಸ ಹುಟ್ಟಿಸುವುದು ಎಂದು?


ಕಾಂಗ್ರೆಸ್‌ನವರು ಜೆಡಿಎಸ್‌ನವರನ್ನು ನೋಡಿ ಕಲಿಯಬೇಕು -ಆರ್.ಅಶೋಕ್, ಸಚಿವ
ಬಿಜೆಪಿಯ ಜೊತೆಗೆ ಪಾಲು ಹಂಚುವ ಕೊಳ್ಳುವ ಕುರಿತಂತೆ ಇರಬೇಕು.


ನನ್ನ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಯಾಗಿದ್ದ ಸಚಿನ್ ಪೈಲಟ್ ಒಬ್ಬ ನಾಲಾಯಕ್ ಹಾಗೂ ಸೋಮಾರಿ. - ಅಶೋಕ್ ಗೆಹ್ಲೋಟ್, ರಾಜಸ್ಥಾನ ಮುಖ್ಯಮಂತ್ರಿ

ಆದರೆ ಅವರ ಇತ್ತೀಚಿನ ಬಿರುಸಿನ ಚಟುವಟಿಕೆ ನೋಡುವಾಗ ಸೋಮಾರಿಯಂತೆ ಕಾಣುವುದಿಲ್ಲ.


ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನ ಸೋಂಕು ಪೀಡಿತರೆಂಬ ಕಾರಣಕ್ಕೆ ಗರ್ಭಿಣಿಯರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ. -ಕೋಟ ಶ್ರೀನಿವಾಸ ಪೂಜಾರಿ, ಸಚಿವ

ಗರ್ಭಿಣಿಯರಿಗೆ ಪ್ರವೇಶವನ್ನೇ ನಿರಾಕರಿಸಿದರೆ ಆಯಿತು ಎಂದರಂತೆ ವೈದ್ಯರು.


ಅಧಿಕಾರಕ್ಕೆ ಬರುವುದಕ್ಕಾಗಿ ನರೇಂದ್ರ ಮೋದಿ ತಾನು ಶಕ್ತಿವಂತ ಎಂಬ ನಕಲಿ ವರ್ಚಸ್ಸು ಸೃಷ್ಟಿಸಿಕೊಂಡಿದ್ದಾರೆ -ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕ
ನಕಲಿಯಾದರೇನು ವರ್ಚಸ್ಸು ವರ್ಚಸ್ಸೇ ತಾನೆ.


ಕೋವಿಡ್-19 ನಡುವೆಯೂ ಬಂಡವಾಳ ಹೂಡಲು ಭಾರತ ಪ್ರಶಸ್ತ ದೇಶವಾಗಿದೆ -ನರೇಂದ್ರ ಮೋದಿ, ಪ್ರಧಾನಿ

ಕೋವಿಡ್ ಮೇಲೆ ಬಂಡವಾಳ ಹೂಡುತ್ತಿರಬೇಕು.


ಕೊರೋನ ಪರಿಕರಗಳ ಖರೀದಿಯಲ್ಲಿ ಅಕ್ರಮ ನಡೆದಿರುವುದು ಸಾಬೀತಾದರೆ ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ- ಶ್ರೀರಾಮುಲು, ಸಚಿವ

 ಸಾಬೀತಾಗಬೇಕಾದರೆ ತನಿಖೆ ನಡೆಯಬೇಡವೆ? 


ರಾಜ್ಯದಲ್ಲಿ ಬೀಜ, ಗೊಬ್ಬರಕ್ಕೆ ಕೊರತೆ ಇಲ್ಲ -ಬಿ.ಸಿ.ಪಾಟೀಲ್, ಸಚಿವ

 ಭೂಸುಧಾರಣೆ ಕಾಯ್ದೆ ತಿದ್ದುಪಡಿಯ ಬಳಿಕ ಭೂಮಿಯದ್ದೇ ಕೊರತೆಯಂತೆ.


ಗುಜರಾತ್ ವ್ಯಕ್ತಿಗಳಿಗೆ ಪ.ಬಂಗಾಳವನ್ನು ಆಳಲು ಬಿಡುವುದಿಲ್ಲ - ಮಮತಾ ಬ್ಯಾನರ್ಜಿ, ಪ.ಬಂಗಾಳ ಮುಖ್ಯಮಂತ್ರಿ
 ಪ.ಬಂಗಾಳ ಭಾರತದೊಳಗೆ ಬರುವುದಿಲ್ಲವೆ? 


ಕಾಂಗ್ರೆಸ್ ತನ್ನ ನಾಯಕರನ್ನು ಒಬ್ಬೋಬ್ಬರನ್ನಾಗಿ ಕಳೆದುಕೊಳ್ಳುತ್ತಿದೆ -ಪ್ರಕಾಶ್ ಜಾವ್ಡೇಕರ್, ಕೇಂದ್ರ ಸಚಿವ
 ಒಳ್ಳೆಯ ವಿಷಯ. ಹೊಸಬರಿಗೆ ಇನ್ನಾದರೂ ಅವಕಾಶ ದೊರಕಲಿ.


ನಾನು ಭಾರತ ಮತ್ತು ಚೀನಾದ ಜನರನ್ನು ಪ್ರೀತಿಸುತ್ತೇನೆ - ಡೊನಾಲ್ಡ್ ಟ್ರಂಪ್, ಅಮೆರಿಕ ಅಧ್ಯಕ್ಷ
ನಿಮ್ಮ ಪ್ರೀತಿಯ ಕಾರಣದಿಂದಲೇ, ಭಾರತ ಕೊರೋನದಿಂದ ನರಳುತ್ತಿರುವುದು.


ಜನಸೇವೆಗೆ ಮತ್ತೊಂದು ಅವಕಾಶ ಸಿಕ್ಕಿರುವುದು (ವಿ.ಪ.ಸದಸ್ಯ) ಸಂತೋಷ ಉಂಟುಮಾಡಿದೆ -ಎಚ್.ವಿಶ್ವನಾಥ್, ವಿ.ಪ.ನೂತನ ಸದಸ್ಯ

ಒಟ್ಟಿನಲ್ಲಿ ಕನ್ನಡ ಸಾಹಿತ್ಯ ಲೋಕಕ್ಕೆ ಬಹುದೊಡ್ಡ ಕೊಡುಗೆ ಸಿಕ್ಕಂತಾಯಿತು.


ಉತ್ತರ ಪ್ರದೇಶ ಸರಕಾರವು ಜನರಿಗೆ ‘ರಾಮರಾಜ್ಯ’ದ ಭರವಸೆ ನೀಡಿ ‘ಗೂಂಡಾರಾಜ್ಯ’ ನೀಡಿದೆ -ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕ

ಗೂಂಡಾಗಳಿಂದಲೇ ರಾಮರಾಜ್ಯ ನಿರ್ಮಾಣ ಮಾಡುವ ಉದ್ದೇಶವಿರಬೇಕು.


ತ್ರಿವಳಿ ತಲಾಖ್ ನಿಷೇಧಿಸಿ ಕೇಂದ್ರ ಸರಕಾರ ಕಾನೂನು ಜಾರಿ ಮಾಡಿದ ನಂತರ ಪ್ರಕರಣಗಳಲ್ಲಿ ಶೇ.82 ಇಳಿಕೆ ಕಂಡುಬಂದಿದೆ. -ಮುಖ್ತಾರ್ ಅಬ್ಬಾಸ್ ನಖ್ವಿ, ಕೇಂದ್ರ ಸಚಿವ

ತಲಾಖ್ ನೀಡದೆಯೇ ಮಹಿಳೆಯರನ್ನು ತ್ಯಜಿಸುತ್ತಿರಬೇಕು.


ಎಲ್ಲರ ಜೀವನದಲ್ಲೂ ಗುರು ಅಗತ್ಯ. -ರವಿಶಂಕರ್ ಗುರೂಜಿ, ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ

ಚಂಡಾಲ ಶಿಷ್ಯರಿಗೆ ಚೋರ ಗುರು.


ಕಾಂಗ್ರೆಸ್ ನಾಯಕರು ಅವರ ತಟ್ಟೆಯಲ್ಲಿ ಹೆಗ್ಗಣ ಇಟ್ಟುಕೊಂಡು, ನಮ್ಮ ತಟ್ಟೆಯಲ್ಲಿ ನೊಣ ಹುಡುಕಲು ಬಂದಿದ್ದಾರೆ. -ಡಾ.ಕೆ.ಸುಧಾಕರ್, ಸಚಿವ
 ಅದು ನೊಣ ಅಲ್ಲ, ಕೊರೋನ ಸಂತ್ರಸ್ತರ ಹೆಣ.


ಡೊನಾಲ್ಡ್ ಟ್ರಂಪ್ ಅಮೆರಿಕ ಕಂಡ ವರ್ಣಭೇದ ನಿಲುವಿನ ಪ್ರಥಮ ಅಧ್ಯಕ್ಷ - ಜೋ ಬಿಡೆನ್, ಅಮೆರಿಕ ಅಧ್ಯಕ್ಷ ಚುನಾವಣೆಯ ಡೆಮೊಕ್ರೆಟಿಕ್ ಪಕ್ಷದ ಅಭ್ಯರ್ಥಿ

 ಅದುವೇ ಅವರ ಹೆಗ್ಗಳಿಕೆಯಂತೆ. 


ಉತ್ತರ ಪ್ರದೇಶದಲ್ಲಿ ಕೊರೋನ ವೈರಸ್‌ಗಿಂತ ಅಪರಾಧದ ವೈರಾಣು ಹೆಚ್ಚು ಸಕ್ರಿಯವಾಗಿದೆ -ಮಾಯಾವತಿ, ಬಿಎಸ್ಪಿ ಮುಖ್ಯಸ್ಥೆ

 ವೈರಾಣುಗಳೆಲ್ಲ ಸೇರಿ, ಶಿಲಾನ್ಯಾಸಕ್ಕೆ ಸಿದ್ಧರಾಗುತ್ತಿದ್ದಾರೆ 

share
ಪಿ.ಎ.ರೈ
ಪಿ.ಎ.ರೈ
Next Story
X