ಈದುಲ್ ಅಝ್ ಹಾ: ಮಸೀದಿಗಳಲ್ಲಿ ಬಂದೋಬಸ್ತ್; ದ.ಕ. ಜಿಲ್ಲಾಧಿಕಾರಿ
ಮಂಗಳೂರು, ಜು.27: ಈದುಲ್ ಅಝ್ ಹಾ (ಬಕ್ರೀದ್) ಸಂದರ್ಭ ಪ್ರಮುಖ ಮಸೀದಿಗಳಲ್ಲಿ ಬ್ಯಾರಿಕೇಡ್ ಅಳವಡಿಸಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಹಬ್ಬದ ಸಂದರ್ಭ ವಾಹನಗಳ ಸುಗಮ ಸಂಚಾರ ಮತ್ತು ವಾಹನಗಳ ನಿಲುಗಡೆಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪೋಲಿಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಪೊಲೀಸ್ ಠಾಣಾ ವ್ಯಾಪ್ತಿ ಶಾಂತಿಸಭೆ: ಕೋವಿಡ್ ಸಮಯದಲ್ಲಿ ಪ್ರಾರ್ಥನಾ ಮಂದಿರಗಳಲ್ಲಿ ಹೆಚ್ಚಿನ ಜನರು ಸೇರದಂತೆ ನಿಗಾವಹಿಸಬೇಕು. ಆದಷ್ಟು ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಲು ಪ್ರತಿ ಠಾಣೆಯ ವ್ಯಾಪ್ತಿಯಲ್ಲಿ ಶಾಂತಿಸಭೆಯನ್ನು ಏರ್ಪಡಿಸಿ, ಜನರನ್ನು ಮನವೊಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
Next Story