Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದೃಶ್ಯ ಶತ್ರುವಿನ ವಿರುದ್ಧ ನಾವು...

ಅದೃಶ್ಯ ಶತ್ರುವಿನ ವಿರುದ್ಧ ನಾವು ಹೋರಾಡಬೇಕಿದೆ: ಕೊರೋನ ವೈರಸ್ ಕುರಿತು ಆರ್‌ಬಿಐ ಗವರ್ನರ್

ವಾರ್ತಾಭಾರತಿವಾರ್ತಾಭಾರತಿ27 July 2020 8:28 PM IST
share
ಅದೃಶ್ಯ ಶತ್ರುವಿನ ವಿರುದ್ಧ ನಾವು ಹೋರಾಡಬೇಕಿದೆ: ಕೊರೋನ ವೈರಸ್ ಕುರಿತು ಆರ್‌ಬಿಐ ಗವರ್ನರ್

ಹೊಸದಿಲ್ಲಿ, ಜು. 27: ಕೃಷಿ ಕ್ಷೇತ್ರದಲ್ಲಿ ದೇಶೀಯ ಮುಕ್ತ ವ್ಯಾಪಾರವನ್ನು ಉತ್ತೇಜಿಸಲು ನಡೆಯುತ್ತಿರುವ ಪ್ರಮುಖ ಆರ್ಥಿಕ ಸುಧಾರಣೆಗಳ ಮೇಲೆ ಭಾರತ ಬಂಡವಾಳ ಹೂಡಬೇಕಾದ ಅಗತ್ಯ ಇದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ್ ದಾಸ್ ಸೋಮವಾರ ಹೇಳಿದ್ದಾರೆ.

ಕೃಷಿ ಹಾಗೂ ಡೈರಿ ಉತ್ಪಾದನೆಯಲ್ಲಿ ಭಾರತ ಜಗತ್ತಿನ ಪ್ರಮುಖ ದೇಶಗಳಲ್ಲಿ ಒಂದಾಗಿ ಹೊರ ಹೊಮ್ಮುತ್ತಿದೆ ಎಂದು ಅವರು ಹೇಳಿದ್ದಾರೆ. ಇಂಡಿಯನ್ ಇಂಡಸ್ಟ್ರಿ ನ್ಯಾಶನಲ್ ಕೌನ್ಸಿಲ್‌ನ ಒಕ್ಕೂಟದಲ್ಲಿ ಮಾತನಾಡಿದ ದಾಸ್, ಕೊರೋನ ವೈರಸ್ ಸೋಕು ಹರಡುತ್ತಿರುವುದರಿಂದ ಆರ್ಥಿಕತೆಗೆ ಉಂಟಾದ ಹಾನಿ ದೇಶಕ್ಕೆ ಅತಿ ದೊಡ್ಡ ಸವಾಲನ್ನು ಒಡ್ಡಿದೆ. ಆದುದರಿಂದ ಆರ್ಥಿಕತೆಯಲ್ಲಿ ಮಧ್ಯಮ ಅವಧಿಯ ದೃಷ್ಟಿಕೋನವನ್ನು ಅನುಸರಿಸಬೇಕಾದ ಅಗತ್ಯ ಇದೆ ಎಂದರು.

ಜೀವ ಹಾಗೂ ಜೀವನದ ರಕ್ಷಣೆ, ಆರ್ಥಿಕ ಪುನಶ್ಚೇತನದ ವಿಚಾರ ನಮ್ಮನ್ನು ದಿನನಿತ್ಯ ಕಾಡುತ್ತಿದೆ. ಈ ಪ್ರಶ್ನೆಗಳಿಗೆ ನಮ್ಮಲ್ಲಿ ವಿಶ್ವಾಸಾರ್ಹ ಉತ್ತರ ಇಲ್ಲ. ನಾವು ಈ ಅದೃಶ್ಯ ಶತ್ರುವಿನ ವಿರುದ್ಧ ಪಟ್ಟು ಬಿಡದೆ ಹೋರಾಟ ನಡೆಸಬೇಕು ಎಂದು ಅವರು ಹೇಳಿದರು. ಭಾರತದ ಆರ್ಥಿಕತೆಯಲ್ಲಿ ನಡೆಯುತ್ತಿರುವ ಐದು ಪ್ರಮುಖ ಬದಲಾವಣೆಗಳ ಬಗ್ಗೆ ಅವರು ಮಾತನಾಡಿದರು. ಅದೃಷ್ಟದ ವಿಚಾರ ಎಂದರೆ, ನಮ್ಮಲ್ಲಿ ಕೃಷಿ ಕ್ಷೇತ್ರದ ಬಗ್ಗೆ ಒಲವು ಮೂಡುತ್ತಿದೆ. ಅಲ್ಲದೆ, ನವೀಕರಿಸಬಹುದಾದ ಇಂಧನದ ಬಗ್ಗೆ ಯೋಚಿಸಲು ಆರಂಭಿಸಿದ್ದೇವೆ ಎಂದು ದಾಸ್ ಹೇಳಿದರು.

ಕೃಷಿ ಆದಾಯದಲ್ಲಿ ಸುಸ್ಥಿರ ಏರಿಕೆ ಹಾಗೂ ಹೆಚ್ಚುವರಿ ಕೃಷಿ ಇಳುವರಿಯ ನಿರ್ವಹಣೆಗೆ ಭಾರತ ಹೊಸ ನೀತಿ ರೂಪಿಸಬೇಕಿದೆ ಎಂದು ಅವರು ತಿಳಿಸಿದರು. ನಮ್ಮ ಉತ್ಪಾದನೆ ಹಾಗೂ ಸೇವೆಗಳ ಗುಣಮಟ್ಟ ಹಾಗೂ ಉತ್ಪಾದಕತೆ ಮೇಲೆ ಗಮನ ಕೇಂದ್ರೀಕರಿಸಬೇಕು. ಜಾಗತಿಕ ವೌಲ್ಯದ ಸರಪಳಿಯಲ್ಲಿ ಭಾಗವಹಿಸುವುದನ್ನು ಹೆಚ್ಚಿಸುವುದರೊಂದಿಗೆ ಒಂದು ದೇಶ ತನ್ನ ತಲಾ ಆದಾಯವನ್ನು ಹೆಚ್ಚಿಸಬಹುದು ಎಂದು ವಿಶ್ವ ಬ್ಯಾಂಕ್‌ನ 2020ರ ವರದಿ ತಿಳಿಸಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X