Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್19: ಅಪಪ್ರಚಾರ ಮಾಡುವವರ ವಿರುದ್ಧ...

ಕೋವಿಡ್19: ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ; ವೀಡಿಯೊ ಸಂವಾದದಲ್ಲಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ28 July 2020 8:23 PM IST
share
ಕೋವಿಡ್19: ಅಪಪ್ರಚಾರ ಮಾಡುವವರ ವಿರುದ್ಧ ಕ್ರಮ; ವೀಡಿಯೊ ಸಂವಾದದಲ್ಲಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಎಚ್ಚರಿಕೆ

ಮಂಗಳೂರು, ಜು.28: ಕೋವಿಡ್-19ರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿಂದ ದ.ಕ. ಜಿಲ್ಲಾಡಳಿತ, ಜನಪ್ರತಿನಿಧಿಗಳೊಂದಿಗೆ ಮಂಗಳವಾರ ವೀಡಿಯೊ ಸಂವಾದ ನಡೆಸಿದ ಡಿಸಿಎಂ, ಕೊರೋನ ಸೋಂಕಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಹಾಗೂ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹರಿದಾಡುತ್ತಿವೆ. ಇದರಿಂದ ಸಾರ್ವಜನಿಕರಲ್ಲಿ ಭೀತಿ ಮೂಡಿದೆ. ಕೋವಿಡ್ ಸೋಂಕಿತರಿಗೆ ಅವಮಾನ ಮಾಡುವುದು, ಕೊರೋನ ವಾರಿಯರ್ಸ್ ವಿರುದ್ಧ ಗೊಂದಲ ಸೃಷ್ಟಿಸುವ ಪ್ರಕರಣಗಳು ಹೆಚ್ಚುತ್ತಿವೆ. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಕ್ಸಿಜನ್ ಸಿಲಿಂಡರ್, ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್, ಆ್ಯಂಬುಲೆನ್ಸ್, ವೆಂಟಿಲೇಟರ್ ಸಹಿತ ಎಲ್ಲ ಸೌಲಭ್ಯಗಳನ್ನು ರಾಜ್ಯ ಸರಕಾರವು ಜಿಲ್ಲಾಡಳಿತಕ್ಕೆ ನೀಡುತ್ತಿದೆ. ಕೋವಿಡ್ ಸೋಂಕಿತರಿಗೆ ಆತಂಕವಾಗದಂತೆ ಸಮಸ್ಯೆಗಳನ್ನು ಪರಿಹರಿಸಿ ಬಡವರಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಹೇಳಿದರು.

ಸಂವಾದದಲ್ಲಿ ಜಿಲ್ಲೆಯ ಮಾಹಿತಿ ನೀಡಿದ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿಲ್ಲೆಯಲ್ಲಿ 204 ಆಕ್ಸಿಜನ್ ಸಿಲಿಂಡರ್‌ಗಳು, 13,500 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್, 57 ಆ್ಯಂಬುಲೆನ್ಸ್, 143 ವೆಂಟಿಲೇಟರ್‌ಗಳು ಲಭ್ಯ ಇವೆ. ಹೊಸದಾಗಿ ಬಂದಿರುವ ವೆಂಟಿಲೇಟರ್‌ಗಳ ಜೋಡಣೆಯು ಇನ್ನೆರಡು ದಿನಗಳಲ್ಲಿ ಪೂರ್ಣಗಳೊಳ್ಳಲಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಕೊರತೆ ಇಲ್ಲ. ವೆನ್ಲಾಕ್ ಕೋವಿಡ್ ಆಸ್ಪತ್ರೆ, ಕೆಎಂಸಿ ಅತ್ತಾವರ, ಕೆ.ಎಸ್. ಹೆಗಡೆ, ಯೆನೆಪೊಯ ಆಸ್ಪತ್ರೆಗಳಲ್ಲಿ ಲ್ಯಾಬ್ ವ್ಯವಸ್ಥೆ ಇದೆ. ಪ್ರತಿದಿನ ಸರಾಸರಿ 500 ಪರೀಕ್ಷೆಗಳು ನಡೆಯುತ್ತಿವೆ ಎಂದು ತಿಳಿಸಿದರು.

ಈ ಸಂದರ್ಭ ಪ್ರತಿಕ್ರಿಯಿಸಿದ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ, ಕೋವಿಡ್ ಮಾದರಿ ಪರೀಕ್ಷೆ ನಡೆಸುವ ಸಂಖ್ಯೆಯನ್ನು ಹೆಚ್ಚಿಸುವ ಅಗತ್ಯವಿದೆ. ಪ್ರತಿದಿನ 1,000 ಮಾದರಿಯ ಪರೀಕ್ಷೆಗಳು ನಡೆಯಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಧಿಕಾರಿಗಳು, ಸಿಬ್ಬಂದಿ, ಪೊಲೀಸ್ ಇಲಾಖೆ, ಆಶಾ ಕಾರ್ಯಕರ್ತೆಯರು ಉತ್ತಮವಾಗಿ ಸ್ಪಂದಿಸಿರುವುದಕ್ಕೆ ಡಿಸಿಎಂ ಸಹಿತ ಸಚಿವರು ಮೆಚ್ಚುಗೆ ಸೂಚಿಸಿದರು. ವೀಡಿಯೊ ಸಂವಾದಲ್ಲಿ ದ.ಕ.ಜಿಲ್ಲಾಡಳಿತಕ್ಕೆ ಕೋವಿಡ್-19ರ ನಿಯಂತ್ರಿಸಲು ಸಚಿವರು ಮಾರ್ಗದರ್ಶನ ನೀಡಿದರು.

ಸಂವಾದ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X