Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿಂದು 1,898 ಮಂದಿಗೆ ಕೊರೋನ...

ಬೆಂಗಳೂರಿನಲ್ಲಿಂದು 1,898 ಮಂದಿಗೆ ಕೊರೋನ ಸೋಂಕು: 40 ಮಂದಿ ಸಾವು

ವಾರ್ತಾಭಾರತಿವಾರ್ತಾಭಾರತಿ28 July 2020 9:55 PM IST
share
ಬೆಂಗಳೂರಿನಲ್ಲಿಂದು 1,898 ಮಂದಿಗೆ ಕೊರೋನ ಸೋಂಕು: 40 ಮಂದಿ ಸಾವು

ಬೆಂಗಳೂರು, ಜು.28: ನಗರದಲ್ಲಿ ಮಂಗಳವಾರ ಒಂದೇ ದಿನ 1,898 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 40 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 48,821 ಕೊರೋನ ಸೋಂಕಿತರು ಧೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 957 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೇ ಇಲ್ಲಿಯವರೆಗೆ 12,761 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 35,102 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 31 ಜ್ವರಚಿಕಿತ್ಸಾಲಯಲ್ಲಿ ಒಟ್ಟು 44,438 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ತಂದೆಗೆ ಚಿಕಿತ್ಸೆ ಕೊಡಿಸಲು ಮಗ ಪರದಾಟ: ಕೊರೋನ ಸೋಂಕು ಇಲ್ಲದಿದ್ದರೂ ರಕ್ತದೊತ್ತಡದಿಂದ ನರಳುತ್ತಿರುವ ವ್ಯಕ್ತಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳು ಹಿಂದೇಟು ಹಾಕಿದ ಹಿನ್ನೆಲೆ ತಂದೆಯನ್ನು ಉಳಿಸಿಕೊಳ್ಳಲು ಮಗ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಟ ನಡೆಸಿದ್ದಾನೆ ಎನ್ನಲಾಗಿದೆ.

ಜಾಲಹಳ್ಳಿ ಕ್ರಾಸ್‍ನ 58 ವರ್ಷದ ವ್ಯಕ್ತಿಗೆ ಕೊರೋನ ಇಲ್ಲದಿದ್ದರೂ ಕೋವಿಡ್ ವರದಿ ಇಲ್ಲ ಎಂಬ ಕಾರಣ ಹೇಳಿ ಯಾವುದೇ ಆಸ್ಪತ್ರೆಯೂ ಚಿಕಿತ್ಸೆ ನೀಡಲು ಮುಂದಾಗಿಲ್ಲ ಎನ್ನಲಾಗಿದ್ದು, ತಂದೆಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗಳಿಂದ ಆಸ್ಪತ್ರೆಗೆ ಅಲೆದಾಡಿದರು ಯಾವುದೇ ಆಸ್ಪತ್ರೆ ಸಿಗಲಿಲ್ಲ. ಈ ವೇಳೆ ತಂದೆಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ತುರ್ತಾಗಿ ವೆಂಟಿಲೇಟರ್ ಅವಶ್ಯಕತೆ ಇದ್ದು, ಯಾವೊಂದು ಆಸ್ಪತ್ರೆಯೂ ಚಿಕಿತ್ಸೆ ನೀಡಲು ಮುಂದಾಗುತ್ತಿಲ್ಲ ಎಂದು ಆ ವ್ಯಕ್ತಿಯ ಮಗ ತಮ್ಮ ಅಳಲನ್ನು ವಿಡಿಯೋ ಮೂಲಕ ತೋಡಿಕೊಂಡಿದ್ದಾರೆ.

ಶೇ.50ರಷ್ಟು ಸಿಬ್ಬಂದಿ ಬಳಕೆ: ನಗರದ ಜನನಿಬೀಡ ಪ್ರದೇಶಗಳಲ್ಲಿ ಜನರದಟ್ಟಣೆ ಕಡಿಮೆ ಮಾಡಲು ವಾಣಿಜ್ಯ ಮಳಿಗೆಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬಿಬಿಎಂಪಿಯ ಈ ಆದೇಶ ಟೌನ್‍ಹಾಲ್ ಸರ್ಕಲ್, ಜೆ.ಸಿ. ರಸ್ತೆ, ಎ.ಎಂ. ರಸ್ತೆ, ಕಲಾಸಿಪಾಳ್ಯ ಮುಖ್ಯರಸ್ತೆ, ಕೆ.ಅರ್. ಮಾರುಕಟ್ಟೆ ಜಂಕ್ಷನ್, ಟಿಪ್ಪುಸುಲ್ತಾನ್ ಅರಮನೆ ರಸ್ತೆ, ಬಾಷ್ಯಾಂರಸ್ತೆ, ಶ್ರೀನಿವಾಸ ಮಂದಿರ ರಸ್ತೆ, ಆಂಜನೇಯ ದೇವಸ್ಥಾನ ರಸ್ತೆ, ಎಸ್‍ಪಿಜೆ ರಸ್ತೆ ವಾಣಿಜ್ಯ ಮಳಿಗೆಗಳಿಗೆ ಶೇ 50ರಷ್ಟು ಸಿಬ್ಬಂದಿಯೊಂದಿಗೆ ಕೆಲಸ ಮಾಡಲು ಬಿಬಿಎಂಪಿ ಸೂಚನೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X