ರಾಜ್ಯದಲ್ಲಿ ಮತ್ತೆ 5,503 ಮಂದಿಗೆ ಕೊರೋನ ಸೋಂಕು ದೃಢ: 92 ಮಂದಿ ಸಾವು
ಇದುವರೆಗೆ 42,901 ಮಂದಿ ಸಂಪೂರ್ಣ ಗುಣಮುಖ

ಬೆಂಗಳೂರು, ಜು.29: ರಾಜ್ಯದಲ್ಲಿ ಮಂಗಳವಾರ ಸಂಜೆಯಿಂದ ಬುಧವಾರ ಸಂಜೆವರೆಗೆ ಮತ್ತೆ 5,503 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 1,12,504 ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 92 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 2,147 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದೇ ದಿನ 30 ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಉಳಿದಂತೆ ಕಲಬುರಗಿ 10, ದಕ್ಷಿಣ ಕನ್ನಡ 7, ಧಾರವಾಡ 7, ಮೈಸೂರು 5, ದಾವಣಗೆರೆ, ಉಡುಪಿ, ಹಾಸನದಲ್ಲಿ ತಲಾ 4, ಗದಗ, ತುಮಕೂರು, ಬೆಳಗಾವಿಯಲ್ಲಿ ತಲಾ 3, ಬಾಗಲಕೋಟೆ, ರಾಯಚೂರು, ಉತ್ತರ ಕನ್ನಡ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ತಲಾ 2, ಚಿಕ್ಕಬಳ್ಳಾಪುರ, ಬೀದರ್, ವಿಜಯಪುರ, ಕೊಪ್ಪಳ ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 2,270, ಬಳ್ಳಾರಿ 338, ಬೆಳಗಾವಿ 279, ದಾವಣಗೆರೆ 225, ದಕ್ಷಿಣ ಕನ್ನಡ 208, ಮೈಸೂರು 200, ಧಾರವಾಡ 175, ಉಡುಪಿ 173, ಕಲಬುರಗಿ 168, ಶಿವಮೊಗ್ಗ 131, ತುಮಕೂರು 128, ಯಾದಗಿರಿ 114, ಚಿಕ್ಕಬಳ್ಳಾಪುರ 96, ಹಾಸನ 95, ಬೀದರ್ 91, ವಿಜಯಪುರ 90, ಕೊಪ್ಪಳ 84, ಉತ್ತರ ಕನ್ನಡ 75, ರಾಯಚೂರು 73, ಮಂಡ್ಯ 70, ಗದಗ 61, ಬಾಗಲಕೋಟೆ 57, ರಾಮನಗರ 56, ಚಿತ್ರದುರ್ಗ 52, ಹಾವೇರಿ 50, ಬೆಂಗಳೂರು ಗ್ರಾಮಾಂತರ 49, ಕೋಲಾರ 34, ಚಿಕ್ಕಮಗಳೂರು 33, ಚಾಮರಾಜನಗರ 20, ಕೊಡಗು ಜಿಲ್ಲೆಯಲ್ಲಿ 8 ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 1,12,504 ಕೊರೋನ ಸೋಂಕಿತರ ಪೈಕಿ 42,901 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 2,397 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 2,147 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 67,448 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.







