ಮಂಗಳೂರು, ಜು. ೩೧: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೊಣಾಜೆ ಮುಡಿಪು ಸಮೀಪದ ಮಿತ್ತಕೋಡಿ ಬಳಿ ಗುಡ್ಡ ಕುಸಿದು ಅರ್ಕಾದನ ಕಂಬ್ಲಪದವು ರಸ್ತೆ ಯಲ್ಲಿ ವಾಹನ ಸಂಚಾರಕ್ಕೆ ತೊಡಕುಂಟಾಯಿತು. ಜೆಸಿಬಿ ಮೂಲಕ ರಸ್ತೆಯ ಮಣ್ಣನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ.