Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಲಪಂಥೀಯ ಟ್ರೋಲ್ ಗಳಿಂದ ಅಪಪ್ರಚಾರ...

ಬಲಪಂಥೀಯ ಟ್ರೋಲ್ ಗಳಿಂದ ಅಪಪ್ರಚಾರ ಅಭಿಯಾನ : ನ್ಯೂಸ್ 18 ಗೆ ಖ್ಯಾತ ಪತ್ರಕರ್ತ ಗುಣಶೇಖರನ್ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ31 July 2020 6:53 PM IST
share
ಬಲಪಂಥೀಯ ಟ್ರೋಲ್ ಗಳಿಂದ ಅಪಪ್ರಚಾರ ಅಭಿಯಾನ :  ನ್ಯೂಸ್ 18 ಗೆ ಖ್ಯಾತ ಪತ್ರಕರ್ತ ಗುಣಶೇಖರನ್ ರಾಜೀನಾಮೆ

ಚೆನ್ನೈ ,ಜು. 31 : ತಮಿಳಿನ ಹಿರಿಯ ಪತ್ರಕರ್ತ ಎಂ ಗುಣಶೇಖರನ್ ಅವರು ಮುಖೇಶ್ ಅಂಬಾನಿ ಒಡೆತನದ ನ್ಯೂಸ್ 18 ಸುದ್ದಿ ವಾಹಿನಿಗೆ ರಾಜೀನಾಮೆ ನೀಡಿದ್ದಾರೆ. ಗುಣಶೇಖರನ್ ಅವರು ಡಿಎಂಕೆ ಪರ ವಕಾಲತ್ತು ವಹಿಸುತ್ತಿದ್ದಾರೆ ಹಾಗು ಅವರ ನೇತೃತ್ವದಲ್ಲಿ ಚಾನಲ್  ಹಿಂದೂ ವಿರೋಧಿಯಾಗಿದೆ ಎಂದು  ಬಲಪಂಥೀಯ ಯೂಟೂಬರ್ ಮರಿದಾಸ್ ಮಾಡಿದ ಸತತ ಆರೋಪ ಹಾಗು ಅದರ ಬೆನ್ನಿಗೆ ನಡೆದ ಆನ್ ಲೈನ್ ಅಪಪ್ರಚಾರ ಅಭಿಯಾನದ ಬಳಿಕ  ಗುಣಶೇಖರನ್ ಅವರಿಂದ  ಸಂಪಾದಕೀಯ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹಿಂಪಡೆಯಲಾಗಿತ್ತು. ಇದೀಗ ಗುಣಶೇಖರನ್ ಅವರು ಚಾನಲ್ ಗೆ ರಾಜೀನಾಮೆ ನೀಡಿದ್ದಾರೆ.

ತಮಿಳು ಹಾಗು ಇಂಗ್ಲೀಷ್ ಪತ್ರಿಕೋದ್ಯಮದಲ್ಲಿ ತಮ್ಮ ರಾಜಕೀಯ ವಿಶ್ಲೇಷಣೆಗಳಿಗಾಗಿ ಭಾರೀ ಹೆಸರು ಮಾಡಿರುವ ಗುಣಶೇಖರನ್ ಅವರು ಪ್ರತಿಷ್ಠಿತ ರಾಮನಾಥ್ ಗೋಯಂಕಾ ಪ್ರಶಸ್ತಿ ಪಡೆದ ಪ್ರಪ್ರಥಮ ತಮಿಳು ಟಿವಿ ಪತ್ರಕರ್ತ. " ತನ್ನ ನೇತೃತ್ವದಲ್ಲಿ ನ್ಯೂಸ್ 18 ಯಾವುದೇ ಒಂದು ಪಕ್ಷದ ಪರ ಕೆಲಸ ಮಾಡಿಲ್ಲ , ಇದು ನಮ್ಮ ವೀಕ್ಷಕರು ಹಾಗು ಎಲ್ಲ ಪಕ್ಷದ ನಾಯಕರಿಗೆ ಗೊತ್ತಿದೆ" ಎಂದು ಗುಣಶೇಖರನ್ ತನ್ನ ಸಹೋದ್ಯೋಗಿಗಳಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ. ನ್ಯೂಸ್ 18 ಇನ್ನೊಬ್ಬ ಹಿರಿಯ ಪತ್ರಕರ್ತ ಹಸೀಫ್ ಮೊಹಮ್ಮದ್ ಅವರಿಂದ ಇದೇ ವಿವಾದದ ಹಿನ್ನೆಲೆಯಲ್ಲಿ  ಈಗಾಗಲೇ ರಾಜೀನಾಮೆ ಪಡೆದಿದೆ. 

" ನನ್ನ ಹಾಗು ನ್ಯೂಸ್ 18 ಸಂಬಂಧ ಕೇವಲ ಉದ್ಯೋಗಿ ಹಾಗು ಸಂಸ್ಥೆಯದ್ದಲ್ಲ. ನನಗೆ ಸಂಸ್ಥೆಯ ಜೊತೆ ಭಾವನಾತ್ಮಕ ಬಂಧವಿತ್ತು. ಯಾವುದೇ ಸುದ್ದಿ ಸಂಸ್ಥೆಗೆ ಜನರ ವಿಶ್ವಾಸ ಗಳಿಸುವುದು ಸುಲಭವಲ್ಲ. ಆದರೆ ನಮ್ಮ ಕಠಿಣ ಪರಿಶ್ರಮ, ನಿಷ್ಠೆ ಹಾಗು ಜನರ ಧ್ವನಿಯಾಗಿ ಕೆಲಸ ಮಾಡಿದ್ದರಿಂದ ಜನರೇ ನಮ್ಮನ್ನು ಗೆಲ್ಲಿಸಿದರು. ಈ ಹಾದಿಯಲ್ಲಿ ಎಲ್ಲ ಆಶಂಕೆ, ಸವಾಲುಗಳನ್ನು ಮೆಟ್ಟಿ ನಿಂತು ನಾವು ಈ ಹಂತಕ್ಕೆ ತಲುಪಿದ್ದೆವು " ಎಂದು ಗುಣಶೇಖರನ್ ಸ್ಮರಿಸಿದ್ದಾರೆ.

ಜುಲೈ ಯಲ್ಲಿ ನ್ಯೂಸ್ 18 ಆಡಳಿತ ವರ್ಗಕ್ಕೆ ಬರೆದ ಪತ್ರದಲ್ಲಿ ಆ ಸಂಸ್ಥೆಯ ಗುಣಶೇಖರನ್ ಸಹಿತ ಕೆಲವು ಪತ್ರಕರ್ತರು ಹಾಗು ಸಂಪಾದಕರು ಡಿಎಂಕೆಯ ಪ್ರತ್ಯಕ್ಷ ಅಥವಾ ಪರೋಕ್ಷ ಬೆಂಬಲಿಗರಾಗಿದ್ದಾರೆ ಎಂದು ಮರಿದಾಸ್ ದೂರಿದ್ದರು. ನ್ಯೂಸ್ 18 ಇವರಿಂದಾಗಿ ಹಿಂದೂ ವಿರೋಧಿಯಾಗಿದೆ ಎಂದೂ ಅವರು ಆರೋಪಿಸಿದ್ದರು. ತನ್ನ ಪತ್ರಕ್ಕೆ ಚಾನಲ್ ನಿಂದ ಪ್ರತಿಕ್ರಿಯೆ ಬಂದಿದೆ ಎಂದು ಒಂದು ಪತ್ರವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದರೆ ಅದು ನಕಲಿ ಎಂದು ನ್ಯೂಸ್ 18 ಮರಿದಾಸ್ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಿ ಮದ್ರಾಸ್ ಹೈಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿತ್ತು. ಆದರೆ ಪೊಲೀಸರು ದೂರಿನ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಹೈಕೋರ್ಟ್ ಚಾನಲ್ ವಿರುದ್ಧ ಹಾಕಿರುವ ಎಲ್ಲ ವಿಡಿಯೋಗಳನ್ನು ತೆಗೆದು ಹಾಕುವಂತೆ ಮರಿದಾಸ್ ಗೆ ಹೇಳಿತು. ಮರಿದಾಸ್ ತನ್ನ ಯೂಟ್ಯೂಬ್ ಚಾನಲ್ ನಲ್ಲಿ ತೀರಾ ಉತ್ಪ್ರೇಕ್ಷಿತ  ವಿಡಿಯೋಗಳನ್ನು ಪ್ರಸಾರ ಮಾಡುವವರೆಂದು ಕುಖ್ಯಾತರಾಗಿದ್ದಾರೆ.

ಕೋರ್ಟ್ ಈ ಆದೇಶ ನೀಡಿದ ಎರಡು ದಿನಗಳ ಬಳಿಕ ಗುಣಶೇಖರನ್ ರಾಜೀನಾಮೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X