ರಾಜ್ಯದಲ್ಲಿ ಮತ್ತೋರ್ವ ಸಚಿವರಿಗೆ ಕೋವಿಡ್ ಸೋಂಕು
![ರಾಜ್ಯದಲ್ಲಿ ಮತ್ತೋರ್ವ ಸಚಿವರಿಗೆ ಕೋವಿಡ್ ಸೋಂಕು ರಾಜ್ಯದಲ್ಲಿ ಮತ್ತೋರ್ವ ಸಚಿವರಿಗೆ ಕೋವಿಡ್ ಸೋಂಕು](https://www.varthabharati.in/sites/default/files/images/articles/2020/08/1/253339-1596263214.gif)
ಬೆಂಗಳೂರು, ಆ.1: ರಾಜ್ಯದಲ್ಲಿ ಸಚಿವರಾದ ಸಿ.ಟಿ.ರವಿ ಮತ್ತು ಆನಂದ್ ಸಿಂಗ್ ಬಳಿಕ ಮತ್ತೋರ್ವ ಸಚಿವರಿಗೆ ಕೊರೋನ ಸೋಂಕು ತಗಲಿದೆ.
ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೋವಿಡ್-19 ಸೋಂಕಿಗೆ ಪಾಸಿಟಿವ್ ಆಗಿರುವುದು ಶುಕ್ರವಾರ ರಾತ್ರಿ ದೃಢಪಟ್ಟಿದ್ದು, ಅವರು ಹೋಂ ಕ್ವಾರಂಟೈನ್ ಆಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿ.ಸಿ.ಪಾಟೀಲ್, ರಾತ್ರಿ ಬಂದ ತನ್ನ ಗಂಟಲದ್ರವ ಪರೀಕ್ಷೆಯಲ್ಲಿ ತನಗೆ ಕೊರೋನ ಪಾಸಿಟಿವ್ ಎಂದು ದೃಢಪಟ್ಟಿದೆ. ಬೆಂಗಳೂರಿನ ನನ್ನ ನಿವಾಸದಲ್ಲಿ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ತನ್ನ ಪತ್ನಿ ಹಾಗೂ ಅಳಿಯನಿಗೆ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗದವರು ಸೇರಿದಂತೆ ಒಟ್ಟು ಐವರಿಗೆ ಕೊರೋನ ಪಾಸಿಟಿವ್ ಎಂದು ದೃಢಪಟ್ಟಿದೆ ಎಂದು ಅವರು ನಿನ್ನೆ ಟ್ವೀಟ್ ಮಾಡಿದ್ದರು.
ಇತ್ತೀಚೆಗೆ ತನ್ನನ್ನು ಹಿರೇಕೆರೂರು ಹಾಗೂ ಕೊಪ್ಪಳ ಭಾಗದಲ್ಲಿ ಭೇಟಿಯಾದ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರು, ಯಾರಿಗಾದರೂ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಕೂಡಲೇ ಪರೀಕ್ಷೆಗೆ ಒಳಗಾಗಿ ಎಂದವರು ಮನವಿ ಮಾಡಿದ್ದಾರೆ.
ಈ ಹಿಂದೆ ಸಚಿವರಾದ ಸಿ.ಟಿ.ರವಿ ಹಾಗೂ ಆನಂದ್ ಸಿಂಗ್ ಅವರಿಗೆ ಕೊರೋನ ಸೋಂಕು ತಗಲಿತ್ತು.
ಇದೀಗ ಬಂದ ವರದಿಯ ಪ್ರಕಾರ ನನಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಬೆಂಗಳೂರಿನ ನನ್ನ ನಿವಾಸದಲ್ಲಿ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ.
— Kourava B.C.Patil (@bcpatilkourava) July 31, 2020
ಕೊಪ್ಪಳ ಜಿಲ್ಲೆಗೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ನನ್ನ ಜೊತೆ ಆಗಮಿಸಿದ ಐದು ಜನ ಸಿಬ್ಬಂದಿಗಳಿಗೂ ಕೊರೋನಾ ಪಾಸಿಟಿವ್ ಎಂದು ವರದಿ ಬಂದಿದೆ.
1/2
![](https://www.varthabharati.in/sites/default/files/images/galllery/2020/08/1/B-C-Patil.gif)