Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನ ನೂತನ ಕಮಿಷನರ್ ಆಗಿ ಕಮಲ್...

ಬೆಂಗಳೂರಿನ ನೂತನ ಕಮಿಷನರ್ ಆಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ1 Aug 2020 6:52 PM IST
share
ಬೆಂಗಳೂರಿನ ನೂತನ ಕಮಿಷನರ್ ಆಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ

ಬೆಂಗಳೂರು, ಆ.1: ಸಮಾಜದಲ್ಲಿ ಅನಾರೋಗ್ಯ ಸೃಷ್ಟಿಸುತ್ತಿರುವ ಮಾದಕ ವಸ್ತುಗಳ ಮಾರಾಟಗಾರರ ಜಾಲವನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಪರಾಧ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ನೂತನ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಗರದ ಇನ್ಫೆಂಟ್ರಿ ರಸ್ತೆಯಲ್ಲಿರುವ ಕಚೇರಿಯಲ್ಲಿ ನಿರ್ಗಮಿತ ಕಮಿಷನರ್ ಭಾಸ್ಕರ್ ರಾವ್ ಅವರು ಕಮಲ್ ಪಂತ್ ಅವರಿಗೆ ಬ್ಯಾಟನ್ ನೀಡಿ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಮಲ್ ಪಂತ್ ಅವರು, ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ, ಮಾದಕ ವಸ್ತುಗಳ ಮಾರಾಟ ಹೆಚ್ಚಾಗುತ್ತಿದೆ. ಇದರಿಂದ, ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ. ಇದನ್ನು ತಡೆಗಟ್ಟಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಗರದ ಕಾನೂನು ಸುವ್ಯವಸ್ಥೆ ಹಾಗೂ ಆಸ್ತಿ ರಕ್ಷಣೆ ಪೊಲೀಸರ ಜವಾಬ್ದಾರಿ ಆಗಿದ್ದು, ಸಾರ್ವಜನಿಕರೂ ನಮ್ಮೊಂದಿಗೆ ಕೈಜೋಡಿಸಬೇಕು. ಜೊತೆಗೆ ಹಿರಿಯರು, ಮಹಿಳೆಯರು, ಮಕ್ಕಳ ರಕ್ಷಣೆಗೆ ಒತ್ತು ನೀಡುತ್ತೇವೆ ಎಂದು ತಿಳಿಸಿದರು.

ಜನರ ಸಮಸ್ಯೆಗಳಿಗೆ ಸ್ಪಂದಿಸಲು ವಿಭಾಗೀಯ ಕಚೇರಿ ಮತ್ತು ಡಿಸಿಪಿ ಕಚೇರಿಗಳಿಗೆ ತಿಂಗಳಿಗೊಮ್ಮೆ ಭೇಟಿ ನೀಡುತ್ತೇನೆ. ಇಡೀ ದಿನ ಅಲ್ಲೇ ಇದ್ದು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುತ್ತೇನೆ. ರಾಜ್ಯ ಸರಕಾರ ಕೂಡ ಬೆಂಗಳೂರಿನ ಪೊಲೀಸ್ ಆಯುಕ್ತ ಎಂಬ ಹೆಮ್ಮೆಯ ಜವಾಬ್ದಾರಿ ನೀಡಿದೆ. ಈ ಹುದ್ದೆಯಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತೇನೆ ಎಂದು ತಿಳಿಸಿದರು.

ಕೊರೋನ ತಡೆಗಟ್ಟುವಲ್ಲಿ ನಗರ ಪೊಲೀಸರು ಹಗಲಿರುಳೆನ್ನದೆ ಶ್ರಮಿಸಿದ್ದಾರೆ. ಕೊರೋನದಿಂದ ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಸಿಗಲಿ, ಸೋಂಕು ತಗಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

ಹಿಂದಿನ ಆಯುಕ್ತರು ಜಾರಿಗೆ ತಂದಿರುವ ಎಲ್ಲ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ಇನ್ನು ಮುಂದೆಯೂ ಉತ್ತಮ ಕೆಲಸಗಳಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ. ಜೊತೆಗೆ ಆ.5ರ ಬಳಿಕ ಲಾಕ್‍ಡೌನ್ ಮತ್ತಷ್ಟು ಸಡಿಲಗೊಳ್ಳಲಿದ್ದು, ನಮ್ಮ ಮೇಲೆ ಮತ್ತಷ್ಟು ಜವಾಬ್ದಾರಿ ಹೆಚ್ಚಲಿದೆ ಎಂದು 1990ರ ಬ್ಯಾಚ್‍ನ ಅಧಿಕಾರಿ ಕಮಲ್‍ ಪಂತ್ ಹೇಳಿದರು.

ಈ ಸಂದರ್ಭದಲ್ಲಿ ನಗರ ಹೆಚ್ಚುವರಿ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಸೌಮೇಂದು ಮುಖರ್ಜಿ, ಮುರುಗನ್, ಜಂಟಿ ಪೊಲೀಸ್ ಆಯುಕ್ತರಾದ ರವಿಕಾಂತೇಗೌಡ, ಸಂದೀಪ್ ಪಾಟೀಲ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X