Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯಾದ್ಯಂತ ಸರಳ ಬಕ್ರೀದ್ ಆಚರಣೆ

ರಾಜ್ಯಾದ್ಯಂತ ಸರಳ ಬಕ್ರೀದ್ ಆಚರಣೆ

ವಾರ್ತಾಭಾರತಿವಾರ್ತಾಭಾರತಿ1 Aug 2020 6:59 PM IST
share
ರಾಜ್ಯಾದ್ಯಂತ ಸರಳ ಬಕ್ರೀದ್ ಆಚರಣೆ

ಬೆಂಗಳೂರು, ಆ.1: ಕೊರೋನ ಆತಂಕದ ನಡುವೆಯೂ ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ್ಯಂತ ತ್ಯಾಗ, ಬಲಿದಾನದ ಹಬ್ಬವಾದ ಬಕ್ರೀದ್(ಈದುಲ್ ಅಝ್ ಹಾ) ಹಬ್ಬವನ್ನು ಮುಸ್ಲಿಮರು ಅತ್ಯಂತ ಸರಳವಾಗಿ ಆಚರಣೆ ಮಾಡಿದರು.

ಪ್ರವಾದಿ ಇಬ್ರಾಹಿಂ ಅವರ ತ್ಯಾಗ, ಬಲಿದಾನದ ಐತಿಹಾಸಿಕ ಹಿನ್ನೆಲೆಯಿಂದ ಹಬ್ಬಕ್ಕೆ ಪ್ರಾಣಿ ಬಲಿ ಕೊಡುವುದು ವಾಡಿಕೆ. ಬಲಿ ಅರ್ಪಿಸಿದ ಮಾಂಸವನ್ನು ಸಂಬಂಧಿಕರು ಹಾಗೂ ಬಡವರಿಗೆ ಹಂಚುವುದು ಸಂಪ್ರದಾಯವಾಗಿ ನಡೆದುಕೊಂಡು ಬಂದಿದೆ. ಬಡವರೂ ಸೇರಿದಂತೆ ಹಬ್ಬದ ಊಟದಿಂದ ಯಾರು ವಂಚಿತರಾಗಬಾರದು ಎಂಬುವುದು ಇದರ ಉದ್ದೇಶವಾಗಿದೆ. ಆದರೆ, ಕೊರೋನ ಭಯದ ಹಿನ್ನೆಲೆಯಲ್ಲಿ ಈ ಬಾರಿ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಕುರಿ, ಮೇಕೆಗಳನ್ನು ಬಲಿ ನೀಡಲಾಗಿದೆ. ಇನ್ನು, ಒಂಟೆಗಳ ಬಲಿಗೆ ಸರಕಾರ ನಿರ್ಬಂಧ ವಿಧಿಸಿದ್ದರ ಪರಿಣಾಮ ಎಲ್ಲಿಯೂ ಒಂಟೆ ಬಲಿ ನೀಡಿಲ್ಲ.

ಬೆಂಗಳೂರು ನಗರದ ಕಲಾಸಿಪಾಳ್ಯ, ಚಾಮರಾಜಪೇಟೆ, ಶಿವಾಜಿನಗರ, ಬಿಟಿಎಂ, ಪಾದರಾಯನಪುರ, ಹೆಬ್ಬಾಳ, ಆರ್‍ಟಿ ನಗರ, ಶಾಂತಿನಗರ, ಮೈಸೂರು ರಸ್ತೆ, ಜಯನಗರ ಸೇರಿದಂತೆ ರಾಜ್ಯದ ಪ್ರಮುಖ ಮಸೀದಿಗಳಲ್ಲಿ ಈದ್ ಸಾಮೂಹಿಕ ಪ್ರಾರ್ಥನೆ ಸರಕಾರದ ಆದೇಶದಂತೆ ಸೀಮಿತವಾಗಿ ನಡೆಯಿತು.

ಬೆಳಗ್ಗೆ 8 ಗಂಟೆಗೆ ನಡೆಯಬೇಕಿದ್ದ ನಮಾಝ್ ಗಳನ್ನು ಎಲ್ಲ ಮಸೀದಿಗಳಲ್ಲೂ ಬೆಳಗ್ಗೆ 7 ಗಂಟೆಯೊಳಗೆ ಸಾಮೂಹಿಕವಾಗಿ ನಿರ್ವಹಿಸಿದರು. ಮಸೀದಿಗೆ ಆಗಮಿಸುವವರನ್ನು ಮೊದಲು ಉಷ್ಣತೆ ಪರೀಕ್ಷಿಸಿ ಸ್ವವಿವರಗಳನ್ನು ಪಡೆಯಲಾಗುತ್ತಿತ್ತು. ಮಾಸ್ಕ್ ಧರಿಸಿದವರಿಗೆ ಮಾತ್ರ ಮಸೀದಿಯ ಒಳಗೆ ಪ್ರವೇಶಿಸಲು ಅವಕಾಶ ನೀಡಲಾಯಿತು.

ಬೆಂಗಳೂರಿನ ಜೆಪಿ ನಗರ ಹಾಗೂ ಕೆಲವು ಮಸೀದಿಗಳಲ್ಲಿ ನಮಾಝ್ ಗೆ ಬರುವವರಿಗೆ ಗುರುತು ಚೀಟಿಯನ್ನು ನೀಡಲಾಗಿತ್ತು. ಜಮಾಅತ್‍ನವರು ಅಲ್ಲದವರಿಗೆ ಮಸೀದಿಗೆ ಬರಲು ಅವಕಾಶ ನಿರಾಕರಿಸಲಾಗಿತ್ತು.

ಕೈ ಕುಲುಕುವುದು ಹಾಗೂ ಆಲಿಂಗನ ಮಾಡಲು ಅವಕಾಶವಿರಲಿಲ್ಲ. ನಮಾಝ್ ವೇಳೆ ಅಂತರ ಕಾಯ್ದುಕೊಳ್ಳಲಾಯಿತು. 10 ವರ್ಷದೊಳಗಿನ ಮಕ್ಕಳು ಹಾಗೂ 60 ವರ್ಷಕ್ಕೂ ಹೆಚ್ಚಿನ ವಯಸ್ಸಿನವರಿಗೆ ಮಸೀದಿಗೆ ಬರಲು ಅವಕಾಶ ಇರಲಿಲ್ಲ.

ಒಂದು ಬಾರಿ 50 ಮಂದಿಗೆ ಮಾತ್ರ ನಮಾಝ್‍ಗೆ ಅವಕಾಶ ಇತ್ತು. ಹೆಚ್ಚು ಜನ ಇದ್ದಲ್ಲಿ ಎರಡು ಬಾರಿ ನಮಾಝ್‍ಗೆ ಅವಕಾಶ ನೀಡಲಾಯಿತು. ಸಾಮಾನ್ಯವಾಗಿ ಜಮಾತ್‍ನ ಕೇಂದ್ರ ಮಸೀದಿಗಳಲ್ಲಿ ಈದ್ ನಮಾಝ್ ನಡೆಯುತ್ತದೆ. ಆದರೆ ಈ ಭಾರಿ ಕೇಂದ್ರ ಮಸೀದಿಯ ಶಾಖಾ ಮಸೀದಿಗಳಲ್ಲೂ ನಮಾಝ್ ಗೆ ಅವಕಾಶ ಮಾಡಿಕೊಡಲಾಯಿತು.

ನಿಯಮ ಪಾಲನೆ: ಮಸೀದಿ ಹೊರತುಪಡಿಸಿ ಇತರ ಸ್ಥಳಗಳಾದ ಸಭಾಂಗಣ, ಸಮುದಾಯ ಭವನ, ಕಲ್ಯಾಣ ಮಂಟಪ ಮತ್ತಿತರ ತೆರೆದ ಜಾಗಗಳಲ್ಲಿ ಬಕ್ರೀದ್ ಸಾಮೂಹಿಕ ಪ್ರಾರ್ಥನೆಗೆ ವಿಧಿಸಲಾದ ನಿರ್ಬಂಧವನ್ನು ಪಾಲಿಸಲಾಯಿತು. ಇನ್ನೂ, ಸ್ಮಶಾನ ಮೈದಾನಕ್ಕೆ ನಿರ್ಬಂಧ ವಿಧಿಸದ ಕಾರಣ ಅಗಲಿದವರಿಗೆ ಕುಟುಂಬದ ಸದಸ್ಯರು ಸುರಕ್ಷಿತ ಅಂತರ ಕಾಪಾಡುವ ಮೂಲಕ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X