Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಬ್ರಹ್ಮಾವರ 4, ಕೋಟ 4, ಕುಂದಾಪುರ 26...

​ಬ್ರಹ್ಮಾವರ 4, ಕೋಟ 4, ಕುಂದಾಪುರ 26 ಕಡೆ ಸೀಲ್‌ಡೌನ್

ವಾರ್ತಾಭಾರತಿವಾರ್ತಾಭಾರತಿ1 Aug 2020 8:35 PM IST
share

ಉಡುಪಿ, ಆ.1: ಮಂದಾರ್ತಿ ಶಿರೂರಿನ ಒಂದು ಬಾರ್ ಸೇರಿದಂತೆ ಕೋಟ ಹೋಬಳಿಯಲ್ಲಿ ಇಂದು ಪಾಸಿಟಿವ್ ಬಂದ ಒಟ್ಟು ನಾಲ್ಕು ಮಂದಿಯ ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ಕೋಟ ಆರ್‌ಐ ರಾಜು ತಿಳಿಸಿದ್ದಾರೆ.

ಮಂದಾರ್ತಿ ಶಿರೂರಿನ ಬಾರ್ ಮಾಲಕರಲ್ಲಿ ಇಂದು ಕೊರೋನ ಪಾಸಿಟಿವ್ ಕಂಡುಬಂದಿದ್ದು, ಅವರ ಆವರ್ಸೆಯ ಮನೆಯೊಂದಿಗೆ ಬಾರ್ ಹಾಗೂ ಪಕ್ಕದ ಅಂಗಡಿಯೊಂದನ್ನು ಸೀಲ್‌ಡೌನ್ ಮಾಡಲಾಗಿದೆ. ಇನ್ನುಳಿದಂತೆ ಆವರ್ಸೆಯ ಇನ್ನೊಬ್ಬರು, ಬಾರಕೂರು ಹನೆಹಳ್ಳಿ ಹಾಗೂ ಕೋಟ ಮಣೂರಿನ ಒಬ್ಬರಲ್ಲಿ ಪಾಸಿಟಿವ್ ಪತ್ತೆಯಾಗಿದ್ದು, ಅವರನ್ನು ಕುಂದಾಪುರದ ಆಸ್ಪತ್ರೆಗೆ ಸೇರಿಸಿ ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ.

ಬ್ರಹ್ಮಾವರದಲ್ಲಿ 4 ಕಡೆ: ಬ್ರಹ್ಮಾವರ ಹೋಬಳಿಯಲ್ಲೂ ನಾಲ್ಕು ಕಡೆಗಳಲ್ಲಿ ಸೀಲ್‌ಡೌನ್ ಮಾಡಲಾಗಿದೆ. ಕೊಕ್ಕರ್ಣೆ ಸಮೀಪದ ಪೆಜಮಂಗೂರಿನ 66ರ ವೃದ್ಧರಲ್ಲಿ ಸೋಂಕು ಪತ್ತೆಯಾಗಿದ್ದು, ಇಲ್ಲಿ ಒಟ್ಟು ಐದು ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಚಾಂತಾರು ಗ್ರಾಮದಲ್ಲಿ ಮುಂಬೈ ಯಿಂದ ಬಂದ 44ರ ವ್ಯಕ್ತಿ ಕೊರೋನಕ್ಕೆ ಪಾಸಿಟಿವ್ ಆಗಿದ್ದು, ಆತ ವಾಸವಾಗಿದ್ದ ವಸತಿ ಸಂಕೀರ್ಣದ ಮನೆಯೊಂದಿಗೆ ಅಲ್ಲಿನ 20 ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಇನ್ನೆರಡು ಪ್ರಕರಣಗಳು ಹೇರೂರು ಗ್ರಾಮದಲ್ಲಿ ಕಂಡುಬಂದಿದ್ದು, ಇಲ್ಲಿನ 30ರ ಹರೆಯದ ಯುವಕನಿಗೆ ಪಾಸಿಟಿವ್ ಇದ್ದು, ಆತನ ಮನೆಯ ಸುತ್ತಮುತ್ತ ಐದು ಮನೆಗಳು ಕಂಟೈನ್‌ಮೆಂಟ್ ವಲಯವಾಗಿದೆ. ಇನ್ನೊಬ್ಬರು 50 ವರ್ಷ ಪ್ರಾಯದವರಾಗಿದ್ದು, ಅಲ್ಲಿ ಎರಡು ಮನೆಗಳು ಸೀಲ್‌ಡೌನ್ ಆಗಿವೆ.

ಕುಂದಾಪುರ-26: ಕುಂದಾಪುರ ತಾಲೂಕಿನಲ್ಲಿ 22 ಹಾಗೂ ಬೈಂದೂರು ತಾಲೂಕಿನಲ್ಲಿ ನಾಲ್ವರಲ್ಲಿ ಶನಿವಾರ ಪಾಸಿಟಿವ್ ಕಂಡುಬಂದಿದೆ. ಕುಂದಾಪುರದ ಆಲೂರು-4, ಪುರಸಭಾ ವ್ಯಾಪ್ತಿ-3, ಸೇನಾಪುರ,ಕಾವ್ರಾಡಿ ತಲಾ 2, ಹಂಗಳೂರು, ಅಮಾಸೆಬೈಲು, ಬಳ್ಕೂರು, ಬೀಜಾಡಿ, ಬೇಳೂರು, ಕಟ್‌ಬೆಲ್ತೂರು, ಕೋಣಿ, ಕುಂದಬಾರಂದಾಡಿ, ಶಂಕರನಾರಾಯಣ, ತ್ರಾಸಿ ಹಾಗೂ ತೆಕ್ಕಟ್ಟೆಯ ತಲಾ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ.

ಬೈಂದೂರು ತಾಲೂಕಿನಲ್ಲಿ ಜಡ್ಕಲ್, ಯಡ್ತರೆ, ಬೈಂದೂರು ಹಾಗೂ ಕಿರಿಮಂಜೇಶ್ವರಗಳಲ್ಲಿ ತಲಾ ಒಬ್ಬರಲ್ಲಿ ಪಾಸಿಟಿವ್ ಕಂಡುಬಂದಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಿ ಮನೆಗಳನ್ನು ಸೀಲ್‌ಡೌನ್ ಮಾಡಿ ಕಂಟೈನ್‌ಮೆಂಟ್ ವಲಯಗಳನ್ನು ಘೋಷಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X