Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ವ್ಯಾಪಿಸಲು ಸರ್ಕಾರದ ವೈಫಲ್ಯ...

ಕೊರೋನ ವ್ಯಾಪಿಸಲು ಸರ್ಕಾರದ ವೈಫಲ್ಯ ಕಾರಣ: ರಮಾನಾಥ ರೈ ಆರೋಪ

ವಾರ್ತಾಭಾರತಿವಾರ್ತಾಭಾರತಿ1 Aug 2020 11:03 PM IST
share
ಕೊರೋನ ವ್ಯಾಪಿಸಲು ಸರ್ಕಾರದ ವೈಫಲ್ಯ ಕಾರಣ: ರಮಾನಾಥ ರೈ ಆರೋಪ

ಮಡಿಕೇರಿ, ಆ.1: ಕೊರೋನ ವ್ಯಾಪಿಸಿದ ಆರಂಭದ ದಿನಗಳಲ್ಲಿ ರಾಷ್ಟ್ರದಲ್ಲಿ 560 ಪ್ರಕರಣಗಳು ಕಂಡು ಬಂದಿದ್ದರೆ, ರಾಜ್ಯದಲ್ಲಿ ಕೇವಲ ಒಂದು ಪ್ರಕರಣವಿತ್ತು. ಪ್ರಸ್ತುತ ದೇಶವ್ಯಾಪಿ ಸೋಂಕಿನಿಂದ 36,500 ಮಂದಿ ಸಾವನ್ನಪ್ಪಿದ್ದರೆ, ರಾಜ್ಯದಲ್ಲಿ ಸಾವಿನ ಸಂಖ್ಯೆ 2 ಸಾವಿರದ ಗಡಿ ಮೀರಿದೆ. ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿನ ರಾಜ್ಯ ಮತ್ತು ಕೇಂದ್ರ ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣವೆಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ವ ತಯಾರಿ ಮತ್ತು ಮುಂದಾಲೋಚನೆಗಳಿಲ್ಲದೆ ನಡೆಸಿದ ಲಾಕ್ ಡೌನ್‍ನಿಂದ ಸೋಂಕು ವ್ಯಾಪಿಸಿದೆ. ಅಲ್ಲದೆ ಸೋಂಕಿತರ ನಿರ್ವಹಣೆಯಲ್ಲೂ ಸರ್ಕಾರ ಸೋತಿದೆ. ಲಾಕ್ ಡೌನ್ ನಂತರ ದೇಶವನ್ನು ಹೇಗೆ ಮುನ್ನಡೆಸಬೇಕೆನ್ನುವ ಚಿಂತನೆಯನ್ನೇ ಮಾಡದ ಕೇಂದ್ರ ಸರ್ಕಾರ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ ಎಂದು ಟೀಕಿಸಿದರು. 

ತನಿಖೆಗೆ ಆಗ್ರಹ
ಕೊರೋನ ಸಂಕಷ್ಟದ ಸಂದರ್ಭದಲ್ಲಿ ಅದರ ವಿರುದ್ಧ ಹೋರಾಟಗಳನ್ನು ನಡೆಸುವ ಹಂತದಲ್ಲಿ ರಾಜ್ಯದ ಬಿಜೆಪಿ ಸರ್ಕಾರ, ಆರೋಗ್ಯ ಸಾಮಗ್ರಿಗಳ ಖರೀದಿಯಲ್ಲಿ ವ್ಯಾಪಕ ಭ್ರಷ್ಟಚಾರವನ್ನು ಎಸಗಿದೆ. ಖರೀದಿಗೆ ಸಂಬಂಧಿಸಿದಂತೆ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಆಗಲೇಬೇಕೆಂದು ರಮಾನಾಥ ರೈ ಒತ್ತಾಯಿಸಿದರು.

ಕೇಂದ್ರದ ಮಾರ್ಗಸೂಚಿಯಂತೆ ಒಂದು ವೆಂಟಿಲೇಟರ್ ದರ 4 ಲಕ್ಷವಾಗಿದ್ದರೆ ರಾಜ್ಯ ಸರ್ಕಾರ 18 ಲಕ್ಷಗಳ ವರೆಗೆ ವಿವಿಧ ದರಗಳಲ್ಲಿ ಇದನ್ನು ಖರೀದಿ ಮಾಡಿದೆ. ವೈದ್ಯರುಗಳೆ ಸಂಕಷ್ಟಕೆ ಸಿಲುಕುವಂತೆ ಕಳಪೆ ಪಿಪಿಇ ಕಿಟ್‍ಗಳ ಖರೀದಿ, ಕೇವಲ 50 ರೂ. ಬೆಲೆಯ ಮಾಸ್ಕ್ ಗಳನ್ನು 126 ರೂ.ಗಳಿಂದ 150 ರೂ.ಗಳಿಗೆ ಹಾಗೂ 2 ರಿಂದ 3 ಸಾವಿರ ಮೌಲ್ಯದ ಸ್ಕ್ಯಾನರ್ ಗಳನ್ನು 9 ಸಾವಿರ ರೂ.ಗಳಿಗೆ, ಆಕ್ಸಿ ಮೀಟರ್ ಗಳನ್ನು ನೆರೆಯ ಕೇರಳ 2.85 ಲಕ್ಷಕ್ಕೆ ಖರೀದಿಸಿದರೆ ರಾಜ್ಯ ಸರ್ಕಾರ 4.36 ಲಕ್ಷ ರೂ.ಗಳಿಗೆ ಖರೀದಿಸುವ ಮೂಲಕ ವ್ಯಾಪಕ ಭ್ರಷ್ಟಾಚಾರವನ್ನು ನಡೆಸಿದೆ.

ಉಪಕರಣಗಳ ಖರೀದಿಯ ಬಗ್ಗೆ ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ ಪ್ರಶ್ನೆಗಳನ್ನೆತ್ತಿದ್ದ ಸಂದರ್ಭ ಆರಂಭದಲ್ಲಿ ಸಾಮಗ್ರಿ ಖರೀದಿಗೆ 324 ಕೊಟಿ ಎಂದ ಸರ್ಕಾರ, ಪ್ರಸ್ತುತ 4 ಸಾವಿರ ಕೋಟಿ ವೆಚ್ಚವಾಗಿದೆ ಎನ್ನುತ್ತಿದೆ. ಇಂತಹ ಗಂಭೀರ ವಿಚಾರದ ಬಗ್ಗೆ ತನಿಖೆಗೆ ಮುಂದಾದ ಸದನ ಸಮಿತಿಗೆ ತನಿಖೆ ನಡೆಸಲು ಅವಕಾಶ ಒದಗಿಸದೆ, ಅದನ್ನು ನಿಲ್ಲಿಸುವ ಕಾರ್ಯ ನಡೆದಿರುವುದಾಗಿ ಗಂಭೀರ ಆರೋಪ ಮಾಡಿದರು.

ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭ ಹಲವು ಪ್ರಕರಣಗಳ ತನಿಖೆ ನಡೆಸುವ ಮೂಲಕ ಜನರ ಸಂಶಯಗಳನ್ನು ನಿವಾರಿಸಲು ಮುಂದಾಗಿತ್ತು. ಆದರೆ, ಈಗಿನ ಬಿಜೆಪಿ ತನ್ನ ವಿರುದ್ಧ ಗಂಭೀರ ಆರೋಪಗಳು ಬಂದರೂ ತನಿಖೆಗೆ ಒಪ್ಪಿಸಲು ಮುಂದಾಗುತ್ತಿಲ್ಲ. ಇದುವೇ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವ್ಯತ್ಯಾಸವೆಂದು ಹೇಳಿದರು.

ಭ್ರಷ್ಟಾಚಾರದ ವಿರುದ್ಧ ಮುಂದಿನ ದಿನಗಳಲ್ಲಿ ರಸ್ತೆಗಿಳಿದು ಕಾಂಗ್ರೆಸ್ ಹೋರಾಟ ನಡೆಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೋರಾಟದ ನೇತೃತ್ವ ವಹಿಸಲಿದ್ದಾರೆ. ಪ್ರತೀ ಜಿಲ್ಲೆಯಲ್ಲಿಯೂ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಪ್ರಬಲ ಹೋರಾಟ ಕೈಗೊಳ್ಳಲಿದೆ ಎಂದರು. 

ಮಾಜಿ ಸಂಸದ ಧ್ರುವ ನಾರಾಯಣ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭ ಉತ್ತಮ ಆಡಳಿತಕ್ಕಾಗಿ ಕಾಂಗ್ರೆಸ್ ಪೂರ್ಣ ಬೆಂಬಲವನ್ನು ನೀಡುತ್ತಲೇ ಬಂದಿದೆ. ಹೀಗಿದ್ದೂ ಕೋವಿಡ್ ಸಾಂಕ್ರಾಮಿಕದ ಸಂದರ್ಭ ರಾಜ್ಯ ಸರ್ಕಾರದಿಂದ ನಡೆದ ವ್ಯಾಪಕ ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಕೆಲಸವನ್ನೂ ಮಾಡುತ್ತಿರುವುದಾಗಿ ಸ್ಪಷ್ಟಪಡಿಸಿದರು. 

ಕರ್ನಾಟಕದಲ್ಲಿ ಆರೋಗ್ಯ ಸಚಿವರು ಯಾರು ಎಂಬುದೇ ತಿಳಿಯುತ್ತಿಲ್ಲ. ನೆರೆಯ ಕೇರಳದಲ್ಲಿ ಆರೋಗ್ಯ ಸಚಿವೆಯಾಗಿರುವ ಶೈಲಜಾ ಅವರನ್ನು ಸರ್ವೋಚ್ಚ  ನ್ಯಾಯಾಲಯ ಸೇರಿದಂತೆ ವಿಶ್ವ ಆರೋಗ್ಯ ಸಂಸ್ಥೆಯೇ ಪ್ರಶಂಸಿಸಿದೆ. ಆದರೆ, ಕರ್ನಾಟಕದಲ್ಲಿ ಶ್ರೀರಾಮಲು, ಡಾ.ಸುಧಾಕರ್, ಸುರೇಶ್ ಕುಮಾರ್, ಆರ್.ಅಶೋಕ್ ಎಲ್ಲರೂ ಆರೋಗ್ಯ ಸಚಿವರಂತೆ ಹೇಳಿಕೆ ನೀಡುತ್ತಾ ಗೊಂದಲವನ್ನು ಹುಟ್ಟು ಹಾಕುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಕೆ. ಮಂಜುನಾಥ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಮಂಜುಳಾ ರಾಜ್, ಮಾಜಿ ಎಂಎಲ್‍ಸಿ ಅರುಣ್ ಮಾಚಯ್ಯ, ರಾಜ ಕಾಂಗ್ರೆಸ್‍ನ ಕಾನೂನು ಘಟಕದ ನೂತನ ಅಧ್ಯಕ್ಷ ಅಜ್ಜಿಕುಟ್ಟೀರ ಪೊನ್ನಣ್ಣ ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X