Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ವೈರಸ್: ಸುಳ್ಳು ನೆಗೆಟಿವ್ ವರದಿ...

ಕೊರೋನ ವೈರಸ್: ಸುಳ್ಳು ನೆಗೆಟಿವ್ ವರದಿ ಪಡೆದಿದ್ದ ವ್ಯಕ್ತಿಯ ಸಾವು; ಮೂವರ ಬಂಧನ

ವಾರ್ತಾಭಾರತಿವಾರ್ತಾಭಾರತಿ2 Aug 2020 10:57 PM IST
share
ಕೊರೋನ ವೈರಸ್: ಸುಳ್ಳು ನೆಗೆಟಿವ್ ವರದಿ ಪಡೆದಿದ್ದ ವ್ಯಕ್ತಿಯ ಸಾವು; ಮೂವರ ಬಂಧನ

ಕೋಲ್ಕತಾ,ಆ.2: ಸುಳ್ಳು ನೆಗೆಟಿವ್ ವರದಿಯನ್ನು ಸ್ವೀಕರಿಸಿದ್ದ ಬ್ಯಾಂಕ್ ಮ್ಯಾನೇಜರ್‌ವೋರ್ವರು ಕೊರೋನ ವೈರಸ್ ಸೋಂಕಿನಿಂದ ಮೃತಪಟ್ಟಿರುವ ಹಿನ್ನೆಲೆಯಲ್ಲಿ ರೋಗನಿರ್ಣಯ ಲ್ಯಾಬ್‌ಗಳಿಂದ ಸ್ಯಾಂಪಲ್ ಸಂಗ್ರಹ ಏಜೆಂಟ್‌ಗಳೆಂಬ ಸೋಗು ಹಾಕಿದ್ದಕ್ಕಾಗಿ ಮೂವರನ್ನು ಕೋಲ್ಕತಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಇತರರನ್ನೂ ವಂಚಿಸಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತ ಬಿಮಲ್ ಸಿನ್ಹಾ ಅವರ ಪತ್ನಿ ಸಲ್ಲಿಸಿರುವ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಜ್ವರ ಮತ್ತು ಉಸಿರಾಟ ತೊಂದರೆಯ ಹಿನ್ನೆಲೆಯಲ್ಲಿ ಸಿನ್ಹಾ ಜು.20ರಂದು ವೈದ್ಯರನ್ನು ಭೇಟಿಯಾಗಿದ್ದರು. ಅವರು ಖುದ್ದಾಗಿ ಲ್ಯಾಬ್‌ಗೆ ತೆರಳುವ ಸ್ಥಿತಿಯಲ್ಲಿರದ್ದರಿಂದ ವೈದ್ಯರು ಅವರ ಮನೆಯಿಂದಲೇ ಕೊರೋನ ವೈರಸ್ ಪರೀಕ್ಷೆಗಾಗಿ ಗಂಟಲು ದ್ರವ ಮತ್ತು ರಕ್ತದ ಸ್ಯಾಂಪಲ್ ಸಂಗ್ರಹಕ್ಕೆ ವ್ಯವಸ್ಥೆ ಮಾಡಿದ್ದರು.

ಸಿನ್ಹಾರ ಕುಟುಂಬ ವೈದ್ಯರು ಸೂಚಿಸಿದ್ದ ಲ್ಯಾಬ್‌ನ್ನು ಸಂಪರ್ಕಿಸಿದಾಗ ಅದರ ಮಾಲಿಕ ಸ್ಯಾಂಪಲ್‌ಗಳನ್ನು ಸಂಗ್ರಹಿಸಲು ಜು.25ರಂದು ಯುವಕನೋರ್ವನನ್ನು ಮನೆಗೆ ಕಳುಹಿಸಿದ್ದ ಮತ್ತು ಸಿನ್ಹಾರ ಪರೀಕ್ಷಾ ವರದಿ ನೆಗೆಟಿವ್ ಆಗಿದೆ ಎಂದು ಮರುದಿನ ದೂರವಾಣಿ ಮೂಲಕ ತಿಳಿಸಲಾಗಿತ್ತು. ವಿಧ್ಯುಕ್ತವಾದ ವರದಿಗಾಗಿ ಕುಟುಂಬವು ಆಗ್ರಹಿಸಿದಾಗ ಯುವಕನ ಸೋದರ ಕೈಬರಹದ ವರದಿಯನ್ನು ವಾಟ್ಸ್‌ಆ್ಯಪ್ ಮೂಲಕ ರವಾನಿಸಿದ್ದ.

ಮುಂದಿನ ಕೆಲವು ದಿನಗಳಲ್ಲಿ ಸಿನ್ಹಾರ ಸ್ಥಿತಿ ಹದಗೆಟ್ಟಿದ್ದು,ಜು.27ರಂದು ಖಾಸಗಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ನಡೆಸಿದಾಗ ಅವರು ‘ವೈರಲ್ ನ್ಯುಮೋನಿಯಾ’ದಿಂದ ಬಳಲುತ್ತಿದ್ದುದು ಬೆಳಕಿಗೆ ಬಂದಿತ್ತು. ಅವರಲ್ಲಿ ಶೇ.99ರಷ್ಟು ಕೊರೋನ ವೈರಸ್ ಲಕ್ಷಣಗಳಿವೆ ಎಂದು ದೃಢ ಪಡಿಸಿದ್ದ ವೈದ್ಯರು ಕೋವಿಡ್ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು. ಆದರೆ ಕುಟುಂಬದ ಬಳಿ ನೆಗೆಟಿವ್ ವರದಿಯಿದ್ದರಿಂದ ಹಲವಾರು ಆಸ್ಪತ್ರೆಗಳು ಸಿನ್ಹಾರನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದವು. ಕೊನೆಗೂ ಜು.28ರಂದು ಬೆಳಿಗ್ಗೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅರ್ಧ ಗಂಟೆಯಲ್ಲಿಯೇ ಅವರು ಕೊನೆಯುಸಿರೆಳೆದಿದ್ದರು. ಕುಟುಂಬವು ಕೋವಿಡ್ ನೆಗೆಟಿವ್ ವರದಿಯನ್ನು ತೋರಿಸಿ ಶವವನ್ನು ಪಡೆದುಕೊಳ್ಳಲು ಪ್ರಯತ್ನಿಸಿತ್ತಾದರೂ,ಅದು ನಕಲಿ ವರದಿ ಎಂದು ವೈದ್ಯರು ತಿಳಿಸಿದ್ದರು. ಸಿನ್ಹಾ ಕೊರೋನ ವೈರಸ್‌ನಿಂದ ಮೃತಪಟ್ಟಿದ್ದು ಜು.31ರಂದು ದೃಢಪಟ್ಟ ಬಳಿಕ ಕೋವಿಡ್ ಶಿಷ್ಟಾಚಾರದಂತೆ ಅಂತ್ಯಸಂಸ್ಕಾರವನ್ನು ನಡೆಸಲಾಗಿತ್ತು.

ಸಿನ್ಹಾರ ಕುಟುಂಬವು ಸ್ವೀಕರಿಸಿದ್ದ ನೆಗೆಟಿವ್ ವರದಿ ಲೋಪಗಳಿಂದ ಕೂಡಿದ್ದು,ಅದರಲ್ಲಿ ವೈದ್ಯರ ಹೆಸರೂ ಇರಲಿಲ್ಲ. ಅದು ನಕಲಿ ವರದಿಯಾಗಿತ್ತು ಎನ್ನುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದರು.

ಮೊಬೈಲ್ ನಂಬರ್ ಆಧಾರದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ಲ್ಯಾಬ್‌ವೊಂದರಲ್ಲಿ ಕೆಲಸ ಮಾಡುತ್ತಿರುವ ಬಿಸ್ವಜಿತ್ ಸಿಕ್ದರ್ ಪ್ರಮುಖ ಆರೋಪಿಯಾಗಿದ್ದು,ಕಳೆದ ನಾಲ್ಕು ತಿಂಗಳುಗಳಿಂದ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿರುವ ಸೋದರ ಇಂದರ್‌ಜಿತ್ ಆತನಿಗೆ ನೆರವಾಗಿದ್ದ. ಮೂರನೇ ಆರೋಪಿ ಅಮಿತ್ ಪೈರಾ ಇವರಿಗೆ ಸಹಕರಿಸಿದ್ದ ಎಂದು ಪೊಲೀಸರು ತಿಳಿಸಿದರು. ಆದರೆ ಸುದ್ದಿಸಂಸ್ಥೆಯ ಪ್ರಾಥಮಿಕ ತನಿಖೆಯಿಂದ ಸಿಕ್ದರ್ ಸೋದರರು ಯಾವುದೇ ಲ್ಯಾಬ್ ಜೊತೆ ಗುರುತಿಸಿಕೊಂಡಿಲ್ಲ ಎನ್ನುವುದು ಬೆಳಕಿಗೆ ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X