ಕಾರು ಸ್ಕೂಟರ್ ಢಿಕ್ಕಿ: ಮಗು ಸಹಿತ ಐವರಿಗೆ ಗಾಯ
ಬಂಟ್ವಾಳ, ಆ.3: ಕಾರು ಮತ್ತು ಸ್ಕೂಟರ್ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮಗು ಸಹಿತ ಐವರು ಗಾಯಗೊಂಡ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಸೋಮವಾರ ಸಂಭವಿಸಿದೆ.
ಮಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮಾಣಿ ಕಡೆಗೆ ತೆರಳುತ್ತಿದ್ದ ಸ್ಕೂಟರ್ ಮಾಣಿ- ಮೈಸೂರು ರಾಜ್ಯ ಹೆದ್ದಾರಿಯ ಪೆರಾಜೆ ರಾಮಚಂದ್ರಾಪುರ ಮಠಕ್ಕೆ ತೆರಳುವ ರಸ್ತೆಯ ಮುಂಭಾಗದಲ್ಲಿ ಢಿಕ್ಕಿಯಾಗಿವೆ. ಢಿಕ್ಕಿ ಹೊಡೆದ ಬಳಿಕ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಕ್ಕದ ಚರಂಡಿಗೆ ಉರುಳಿದೆ. ಕಾರಿನಲ್ಲಿದ್ದವರು ಮೈಸೂರು ಮೂಲದವರಾಗಿದ್ದು, ಕಾರಿನಲ್ಲಿದ್ದ ಮಗು ಗಂಭೀರ ಗಾಯಗೊಂಡಿದೆ ಎಂದು ತಿಳಿದು ಬಂದಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯವಾಗಿವೆ. ಸ್ಕೂಟರ್ ನಲ್ಲಿದ್ದ ಇಬ್ಬರು ಸವಾರರಿಗೂ ಗಾಯವಾಗಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story