ನಾವು ರಾಮಮಂದಿರ ನಿರ್ಮಾಣಕ್ಕೆ ಯಾವತ್ತೂ ವಿರೋಧ ಮಾಡಿಲ್ಲ: ಡಿ.ಕೆ ಶಿವಕುಮಾರ್
ಬೆಂಗಳೂರು, ಜು.3: ಶ್ರೀರಾಮ ಹಾಗೂ ಹಿಂದೂ ಧರ್ಮ ಈ ದೇಶದ ಆಸ್ತಿಯೇ ಹೊರತು ಒಂದು ಪಕ್ಷಕ್ಕೆ ಸೀಮಿತವಾದುದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ಕರ್ನಾಟಕ ಕಾಂಗ್ರೆಸ್ ನಲ್ಲಿ ಟ್ವೀಟ್ ಮಾಡಲಾಗಿದ್ದು, 'ನಾವು ರಾಮಮಂದಿರ ನಿರ್ಮಾಣಕ್ಕೆ ಯಾವತ್ತೂ ವಿರೋಧ ಮಾಡಿಲ್ಲ. ಶ್ರೀರಾಮ ಹಾಗೂ ಹಿಂದೂ ಧರ್ಮ ಈ ದೇಶದ ಆಸ್ತಿಯೇ ಹೊರತು ಒಂದು ಪಕ್ಷಕ್ಕೆ ಸೀಮಿತವಾದುದಲ್ಲ. ಬಿಜೆಪಿ ಮೊದಲಿನಿಂದಲೂ ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾ ಬಂದಿದೆ. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ' ಎಂದು ತಿಳಿಸಿದ್ದಾರೆ.
ನಾವು ರಾಮ ಮಂದಿರ ನಿರ್ಮಾಣಕ್ಕೆ ಯಾವತ್ತೂ ವಿರೋಧ ಮಾಡಿಲ್ಲ. ಶ್ರೀರಾಮ ಹಾಗೂ ಹಿಂದೂ ಧರ್ಮ ಈ ದೇಶದ ಆಸ್ತಿಯೇ ಹೊರತು ಒಂದು ಪಕ್ಷಕ್ಕೆ ಸೀಮಿತವಾದುದಲ್ಲ. @BJP4India ಮೊದಲಿನಿಂದಲೂ ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾ ಬಂದಿದೆ. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ.
— Karnataka Congress (@INCKarnataka) August 3, 2020
- @DKShivakumar pic.twitter.com/AXHxOxO7EV
Next Story