Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಮ ಮಂದಿರ ಕುರಿತು ಆರ್ ಟಿಐ ಅರ್ಜಿಗಳ...

ರಾಮ ಮಂದಿರ ಕುರಿತು ಆರ್ ಟಿಐ ಅರ್ಜಿಗಳ ಬಗ್ಗೆ ಮೌನ ವಹಿಸಿದ ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ4 Aug 2020 3:30 PM IST
share
ರಾಮ ಮಂದಿರ ಕುರಿತು ಆರ್ ಟಿಐ ಅರ್ಜಿಗಳ ಬಗ್ಗೆ ಮೌನ ವಹಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: ಬಿಜೆಪಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಹಾಗೂ ರಾಮ ಮಂದಿರ ನಿರ್ಮಾಣ ಕುರಿತು ಬಹಳಷ್ಟು ಮಾತನಾಡುತ್ತದೆಯಾದರೂ ಈ ಕುರಿತಾದ ಆರ್‍ ಟಿಐ ಅರ್ಜಿಗಳಿಗೆ ಉತ್ತರ ನೀಡುವಲ್ಲಿ ಕೇಂದ್ರದ ನರೇಂದ್ರ ಮೋದಿ ಸರಕಾರಿ ಆಸಕ್ತಿ ವಹಿಸಿಲ್ಲ ಎಂದು thewire.in ವರದಿ ಮಾಡಿದೆ.

ಅಯೋಧ್ಯೆ ವಿವಾದ ಕುರಿತಂತೆ ಸುಪ್ರೀಂ ಕೋರ್ಟ್ 2019ರಲ್ಲಿ ನೀಡಿದ ತೀರ್ಪಿಗೆ ಮುಂಚೆ ಹಾಗೂ ತೀರ್ಪು ನೀಡಿದ ನಂತರ  ಸಲ್ಲಿಸಲಾಗಿದ್ದ ಎರಡು ಆರ್‍ ಟಿಐ ಅರ್ಜಿಗಳ ಕುರಿತಂತೆ ಕೇಂದ್ರ ಮೌನ ತಾಳಿದೆ.

ಅಯೋಧ್ಯೆಯಲ್ಲಿ ನವೆಂಬರ್ 2018ರಲ್ಲಿ ವಿಶ್ವ ಹಿಂದು ಪರಿಷದ್ ಹಾಗೂ ಆರೆಸ್ಸೆಸ್ ಜಂಟಿಯಾಗಿ ಧರ್ಮ ಸಂಸದ್ ಆಯೋಜಿಸಿದ್ದವು. ಇದಾದ ಕೆಲ ದಿನಗಳ ನಂತರ ನವೆಂಬರ್ 27, 2018ರಂದು ಲಕ್ನೋ ಮೂಲದ ಆರ್ ಟಿಐ ಕಾರ್ಯಕರ್ತೆ ನೂತನ್ ಠಾಕುರ್ ಅರ್ಜಿ ಸಲ್ಲಿಸಿ ಧರ್ಮ ಸಂಸದ್ ಕುರಿತಂತೆ ಪ್ರಧಾನಿ ಹಾಗೂ/ಅಥವಾ ಪ್ರಧಾನಿ ಕಚೇರಿಯು ಹಾಗೂ ಗೃಹ ವ್ಯವಹಾರಗಳ ಸಚಿವಾಲಯ ಉತ್ತರ ಪ್ರದೇಶ ಸರಕಾರಕ್ಕೆ ನೀಡಿದ್ದ ಸೂಚನೆಗಳ ಕುರಿತು  ಮಾಹಿತಿ ಕೋರಿದ್ದರು.

ಆದರೆ ಆಕೆಯ ಅರ್ಜಿಗೆ ಉತ್ತರಿಸುವ ಬದಲು ಆಕೆ ಕೇಳಿದ ಮಾಹಿತಿ ‘ವಿವೇಚನಾರಹಿತವಾಗಿದೆ’ ಎಂದು ಹೇಳಿ ಮುಖ್ಯ ಮಾಹಿತಿ  ಅಧಿಕಾರಿ   ಉತ್ತರಿಸಿದ್ದರು. ನಂತರ ಠಾಕುರ್ ಇದರ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದರೂ  ಮೊದಲಿನ ಪ್ರತಿಕ್ರಿಯೆಯನ್ನೇ ಎತ್ತಿ ಹಿಡಿಯಲಾಗಿತ್ತು. ನೂತನ್ ಠಾಕುರ್ ಅವರು ನಂತರ ಕೇಂದ್ರ ಮಾಹಿತಿ ಆಯೋಗದ ಕದ ತಟ್ಟಿದ್ದು ವಿಚಾರಣೆ ಜೂನ್ ತಿಂಗಳಲ್ಲಿ ನಡೆದಾಗ  ಮುಖ್ಯ ಮಾಹಿತಿ ಆಯುಕ್ತ ಬಿಮಲ್ ಜುಲ್ಕಾ ಅವರು ಮಾತನಾಡಿ ಅರ್ಜಿದಾರೆ ಯಾವುದೇ ನಿರ್ದಿಷ್ಟ  ಮಾಹಿತಿ ಕೇಳಿಲ್ಲ ಎಂದಿದ್ದರು.

ಇನ್ನೊಂದು ಪ್ರಕರಣದಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಚಿಸಲಾಗಿದ್ದ ಟ್ರಸ್ಟ್‍ನ ಟ್ರಸ್ಟಿಗಳ ಮಾಹಿತಿ ಕೋರಿ ಆರ್‍ ಟಿಐ ಕಾರ್ಯಕರ್ತ ಸುಶೀಲ್ ರಾಘವ್ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಿದ್ದ ಆರ್‍ಟಿಐ ಅರ್ಜಿಗೆ ಕೂಡ ಸೂಕ್ತ ಉತ್ತರ ದೊರಕಿಲ್ಲ. ರಾಘವ್ ಅವರು ಟ್ರಸ್ಟೀಗಳ ಹೆಸರು, ಅವರನ್ನು ಏಕೆ ಟ್ರಸ್ಟೀಗಳನ್ನಾಗಿ ಆರಿಸಲಾಗಿದೆ, ಅವರ ವಿರುದ್ಧ ಇರುವ ಕ್ರಿಮಿನಲ್ ಕೇಸುಗಳು,  ಟ್ರಸ್ಟ್ ರಚನೆಯ ಕುರಿತಾದ ಪ್ರತಿ, ಅದರ ಹಣಕಾಸು ವಿಚಾರ ಹಾಗೂ ಕಾರ್ಯೋದ್ದೇಶದ ಮಾಹಿತಿಯನ್ನು ಕೋರಿದ್ದರು.

ಈ ಅರ್ಜಿಗೆ ಒಂದು ವಾರದೊಳಗೆ ಉತ್ತರ ನೀಡಿದ ಗೃಹ ಸಚಿವಾಲಯವು ಕೋರಲಾದ ಮಾಹಿತಿಯು ಆರ್‍ಟಿಐ ಕಾಯಿದೆ 2005 ಇದರ ಸೆಕ್ಷನ್ 88ರ ಅಡಿಯಲ್ಲಿ ಬರುವುದರಿಂದ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X